ಸಾಲಿಗ್ರಾಮ ಪ.ಪಂ.: ಬಿಗಡಾಯಿಸಿದ ಡಂಪಿಂಗ್‌ ಯಾರ್ಡ್‌ ಸಮಸ್ಯೆ


Team Udayavani, Sep 18, 2018, 1:10 AM IST

dumping-yard-17-9.jpg

ಕೋಟ: ಸಾಲಿಗ್ರಾಮ ಪ.ಪಂ.ಗೆ ಹತ್ತಾರು ವರ್ಷದಿಂದ ದೊಡ್ಡ ತಲೆನೋವಾಗಿರುವ ಕಸ ವಿಲೇವಾರಿ ಸಮಸ್ಯೆ ಇದೀಗ ಬಿಗಡಾಯಿಸಿದೆ. ಸೂಕ್ತ ಡಂಪಿಂಗ್‌ ಯಾರ್ಡ್‌ ಇಲ್ಲದಿರುವುದರಿಂದ ಎಲ್ಲಾ ಮನೆಗಳು, ಹೊಟೇಲ್‌, ಕೈಗಾರಿಕೆ, ಅಂಗಡಿ ಮುಂತಾದ ವಾಣಿಜ್ಯ ಘಟಕಗಳ ಕಸ ಸಂಗ್ರಹಣೆಯನ್ನು ಪ.ಪಂ. ಸೆ. 18ರಿಂದ ಸ್ಥಗಿತಗೊಳಿಸುತ್ತಿದೆ.  ಇದರಿಂದ ಸಾವಿರಾರು ಮಂದಿಗೆ ಮುಂದೆ ಸಮಸ್ಯೆ ಎದುರಾಗಲಿದೆ.

ಡಂಪಿಂಗ್‌ ಯಾರ್ಡ್‌ಗೆ ಸ್ಥಳವಿಲ್ಲ
ಸಾಲಿಗ್ರಾಮದ ಕಸವನ್ನು ಈವರೆಗೆ ಹಳೆಕೋಟೆ ಮೈದಾನದಲ್ಲಿ ಸಂಗ್ರಹಿಸಿ ಅಲ್ಲಿಂದ ಉಡುಪಿಯ ಡಂಪಿಂಗ್‌ ಯಾರ್ಡ್‌ನಲ್ಲಿ ವಿಲೇವಾರಿ ಮಾಡಲಾಗುತಿತ್ತು. ಆದರೆ ಉಡುಪಿಯಲ್ಲಿ ಕಸದ ಪ್ರಮಾಣ ಹೆಚ್ಚಿರುವುದರಿಂದ ಇಲ್ಲಿನ ಕಸವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಜತೆಗೆ ಹಳೆಕೋಟೆ ಮೈದಾನದ ತಾತ್ಕಾಲಿಕ ಡಂಪಿಂಗ್‌ ಯಾರ್ಡ್‌ ಕುರಿತು ಸ್ಥಳೀಯರಿಂದ ಸಾಕಷ್ಟು ವಿರೋಧವಿದೆ. ಹೀಗಾಗಿ ಕಸ ವಿಲೇವಾರಿಗೆ ಜಾಗವಿಲ್ಲವಾಗಿದೆ.

ಸ್ವಂತ ಡಂಪಿಂಗ್‌ ಯಾರ್ಡ್‌ ನಿರ್ಮಾಣಕ್ಕೆ ಹಿನ್ನಡೆ
ಈ ಹಿಂದೆ ಪ.ಪಂ. ಸ್ವಂತ ಡಂಪಿಂಗ್‌ ಯಾರ್ಡ್‌ ನಿರ್ಮಾಣಕ್ಕಾಗಿ ಉಳೂ¤ರಿನಲ್ಲಿರುವ ಸ್ಥಳ ಖರೀದಿ ನಡೆಸಿತ್ತು. ಆದರೆ ಅಲ್ಲಿನ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಕುಂದಾಪುರ ಜೆ.ಎಮ್‌.ಎಫ್‌.ಸಿ. ನ್ಯಾಯಾಲಯದಲ್ಲಿ  ಈ ಕುರಿತು ವ್ಯಾಜ್ಯ ನಡೆಯುತ್ತಿದೆ. ಹೀಗಾಗಿ ಸ್ವಂತ ಡಂಪಿಂಗ್‌ ಯಾರ್ಡ್‌ ನಿರ್ಮಾಣ ಸಾಧ್ಯವಾಗಿಲ್ಲ.

ವ್ಯಾಜ್ಯ ಮುಗಿಯುವ ತನಕ ಸಮಸ್ಯೆ ಇತ್ಯರ್ಥವಿಲ್ಲ
ಉಳ್ತೂರು ಡಂಪಿಂಗ್‌ ಯಾರ್ಡ್‌ನ ವ್ಯಾಜ್ಯ ಮುಕ್ತಾಯವಾಗಿ ಶಾಶ್ವತ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುವವರೆಗೆ ಪ.ಪಂ.ನಿಂದ  ಯಾವುದೇ ಹಸಿ ಕಸವನ್ನು ಸಂಗ್ರಹಿಸಲಾಗುವುದಿಲ್ಲ ಎಂದು ಪಟ್ಟಣ ಪಂಚಾಯತ್‌ ಸಾರ್ವಜನಿಕರಿಗೆ ಸೂಚನೆ ನೀಡಿದೆ

ನಗರದ ಸ್ವಚ್ಛತೆಗೆ ಅಡ್ಡಿ ಇಲ್ಲ
ಹಸಿ ಕಸ ಸಂಗ್ರಹಣೆ ಸಂಪೂರ್ಣ ಸ್ಥಗಿತಗೊಂಡರು ನಗರದ ಬೀದಿಗಳನ್ನು ಸ್ವಚ್ಛಗೊಳಿಸುವುದು, ಬೀದಿಗಳಲ್ಲಿನ ಕಸ ಸಂಗ್ರಹಣೆ ಎಂದಿನಂತೆ ಮುಂದುವರಿಯಲಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಸಾವಿರಾರು ಮಂದಿಗೆ ಸಮಸ್ಯೆ
ಪ.ಪಂ. ವ್ಯಾಪ್ತಿಯ 16ವಾರ್ಡ್‌ಗಳ ಸುಮಾರು 1500 ಮನೆಗಳು ಹಾಗೂ 5 ವಸತಿ ಸಂಕಿರ್ಣಗಳು, 10ಕ್ಕೂ ಹೆಚ್ಚು ಹೊಟೇಲ್‌, ತರಕಾರಿ ಮಾರುಕಟ್ಟೆ, ನಾಲ್ಕೈದು ಕಲ್ಯಾಣ ಮಂಟಪಗಳಿಂದ ಪ್ರತಿದಿನ ಕಸ ಸಂಗ್ರಹಣೆ ನಡೆಯುತ್ತಿದೆ. ಇದೀಗ ದಿಢೀರ್‌ ಆಗಿ ಈ ತೀರ್ಮಾನ ಕೈಗೊಂಡಿರುವುದರಿಂದ ಸಾವಿರಾರು ಮಂದಿಗೆ ಸಮಸ್ಯೆಯಾಗಲಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ.

ಕಾಂಪೋಸ್ಟ್‌ ವಿಧಾನ ಅಳವಡಿಸಿಕೊಳ್ಳಲು ಸೂಚನೆ
ಒಣ ಕಸವನ್ನು ವಾರದಲ್ಲಿ ಒಂದು ದಿನ ಮಾತ್ರ ಪ.ಪಂ. ಸ್ವೀಕರಿಸಲಿದ್ದು, ಹಸಿ ಕಸವನ್ನು ಐಇಸಿ ಕಾರ್ಯಕ್ರಮದಂತೆ ಪೈಪ್‌ ಕಾಂಪೋಸ್ಟ್‌, ಪಿಟ್‌ ಕಾಂಪೋಸ್ಟ್‌, ಬಯೋ ಬಿನ್ಸ್‌ ಅಥವಾ ಇನ್ನಿತರ ವಿಧಾನಗಳಿಂದ ತಮ್ಮ ಸ್ವಂತ ಸ್ಥಳದಲ್ಲಿಯೇ ವಿಲೀನಗೊಳಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪ.ಪಂ. ತಿಳಿಸಿದೆ.

ಸಮಸ್ಯೆಗೆ ಗ್ರಾಮಸ್ಥರು ಕಾರಣ 
ಉಡುಪಿಯ ನಮ್ಮ ಕಸ ಸ್ವೀಕರಿಸದಿರಲು ಕಸದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಹಾಗೂ ಹಸಿ ಕಸ-ಒಣ ಕಸವನ್ನು ಬೇರ್ಪಡಿಸದಿರುವುದು ಕಾರಣವಾಗಿದೆ.   ಆದರೆ ಎಷ್ಟೇ ಮನವಿ ಮಾಡಿದರು ನಮ್ಮ ಗ್ರಾಮಸ್ಥರು ಕಸವನ್ನು ಸರಿಯಾಗಿ ವಿಂಗಡಿಸುತ್ತಿಲ್ಲ. ಮನೆಯಲ್ಲೇ ವಿಲೇ ಮಾಡಬಹುದಾದ ತ್ಯಾಜ್ಯವನ್ನು ನೀಡುತ್ತಾರೆ. ಎಸ್‌.ಆರ್‌.ಎಲ್‌.ಎಂ. ಘಟಕ ಸ್ಥಾಪಿಸಿದರೆ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಿತ್ತು. ಆದರೆ ಈ ಘಟಕದಿಂದ ಯಾವುದೇ ಸಮಸ್ಯೆ ಇಲ್ಲ, ಹಲವು ಕಡೆ ನಗರದ ಮಧ್ಯದಲ್ಲಿ  ಘಟಕವಿದೆ ಎಂದು ಎಷ್ಟೇ ಮನವಿ ಮಾಡಿದರೂ 4 ಕಡೆಗಳಲ್ಲಿ ಘಟಕದ ಸ್ಥಾಪನೆಗೆ ಅಡ್ಡಿಪಡಿಸಲಾಯಿತು. ಈ ಎಲ್ಲ ಕಾರಣದಿಂದ ಕಸ ವಿಲೇವಾರಿ ಸಾಕಷ್ಟು  ತ್ರಾಸದಾಯಕವಾಗಿದೆ. ಹೀಗಾಗಿ ಅನಿವಾರ್ಯವಾಗಿ ಕಸ ಸ್ವೀಕರಿಸುವುದನ್ನು ನಿಲ್ಲಿಸಿದ್ದೇವೆ. ಇದು ದಿಢೀರ್‌ ನಿರ್ಧಾರವಲ್ಲ. ಹಲವು ಬಾರಿ ಸೂಚನೆ ನೀಡಲಾಗಿದೆ. ಉಳ್ತೂರಿನಲ್ಲಿ ಡಂಪಿಂಗ್‌ಯಾರ್ಡ್‌ ನಿರ್ಮಿಸುವ ಸಲುವಾಗಿ ಕಾನೂನು ಹೋರಾಟ ಮುಂದುವರಿಯಲಿದ್ದು, ಪರ್ಯಾಯ ವ್ಯವಸ್ಥೆಯಾಗುವ ತನಕ ಜನರು ಸಹಕರಿಸಬೇಕು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.