ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ಸರ್ವರ್‌ ಸಮಸ್ಯೆ: ಹತ್ತು ದಿನಗಳಾದರೂ ಕೇಳುವವರಿಲ್ಲ


Team Udayavani, Nov 18, 2022, 7:25 AM IST

ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ಸರ್ವರ್‌ ಸಮಸ್ಯೆ: ಹತ್ತು ದಿನಗಳಾದರೂ ಕೇಳುವವರಿಲ್ಲ

ಉಡುಪಿ: ಮಂಗಳೂರು ಮಹಾನಗರ ಪಾಲಿಕೆ, ಉಡುಪಿ ನಗರಸಭೆ, ಹಲವು ಪುರಸಭೆ, ಪಟ್ಟಣ ಪಂಚಾಯತ್‌  ಸಹಿತವಾಗಿ ರಾಜ್ಯದ ಬಹುತೇಕ ಎಲ್ಲ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ನಿವೇಶನ, ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿಸಿದ ಇ-ಖಾತಾ ಸರ್ವರ್‌ ಹತ್ತು ದಿನಗಳಿಂದ ಸ್ತಬ್ಧಗೊಂಡಿದೆ.

ಇದರಿಂದ ನಿವೇಶನ ಮಾಲಕರಿಗೆ ಯಾವುದೇ ಸೇವೆ ಲಭ್ಯವಾಗುತ್ತಿಲ್ಲ. ಆಸ್ತಿಗೆ ಸಂಬಂಧಿಸಿದ ಆರ್‌ಟಿಸಿ ಇರು ವಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಪೌರಾಡಳಿತ ನಿರ್ದೇಶನಾಲಯವು ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಇ-ಖಾತಾ ಅನುಷ್ಠಾನ ಗೊಳಿಸಿತು. ಆ ಬಳಿಕ ನಿವೇಶನ ಮಾಲಕರು ತೆರಿಗೆ ಪಾವತಿ ಸೇರಿದಂತೆ ಎಲ್ಲ ವನ್ನೂ ಆನ್‌ಲೈನ್‌ನಲ್ಲೇ ಕೈಗೊಳ್ಳುತ್ತಿದ್ದಾರೆ.

ಕಾರ್ಯ ವ್ಯಾಪ್ತಿ ಹೇಗೆ?:

ನಿವೇಶನ ಮಾಲಕರು ಇ-ಖಾತಾಕ್ಕಾಗಿ ಚಲನ್‌ ಮೂಲಕ ಶುಲ್ಕ ಪಾವತಿಸಿದ ಅನಂತರ ನಿವೇಶನ, ಕಟ್ಟಡ ಇರುವ ಸ್ಥಳಕ್ಕೆ ಆಯಾ ಪ.ಪಂಚಾಯತ್‌, ಪುರಸಭೆ, ನಗರಸಭೆ, ಪಾಲಿಕೆ ಸಿಬಂದಿ ತೆರಳಿ ಆಸ್ತಿ ಗುರುತಿಸುತ್ತಾರೆ. ಬಳಿಕ ಇ-ಖಾತಾದಲ್ಲಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಅನುಮೋದಿಸಲಾಗುತ್ತದೆ.  ಇದಾದ ಅನಂತರ ಮಾಲಕರಿಗೆ ಇ-ಖಾತಾ ನೀಡ ಲಾಗುತ್ತದೆ. ಆದರೆ ಸರ್ವರ್‌ ಸಮಸ್ಯೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅನುಮೋದನೆಯೂ ಸಿಗುತ್ತಿಲ್ಲ. ಸರಕಾರ ಅಥವಾ ಸಂಬಂಧ ಪಟ್ಟ ಇಲಾಖೆ ಇದಕ್ಕೆ ಶೀಘ್ರ ಪರಿಹಾರ ನೀಡಬೇಕು. ಇ-ಖಾತಾ ವಿಳಂಬದಿಂದ ನಗರ ಪ್ರದೇಶದಲ್ಲಿ ಕಟ್ಟಡ, ನಿವೇಶನ ಮಾಲಕರು ಸಾಕಷ್ಟು ಸಮಸ್ಯೆ ಅನುಭವಿಸು ತ್ತಿದ್ದಾರೆ ಎಂಬುದು ಹಲವರ ದೂರು.

ತಂತ್ರಾಂಶದ ಅಪ್‌ಡೇಟ್‌ :

ಇ-ಖಾತಾ ತಂತ್ರಾಂಶವನ್ನು ಅಪ್‌ಡೇಟ್‌ ಮಾಡಲಾಗು ತ್ತಿದ್ದು, ಯಾವುದೇ ಸೇವೆ ನೀಡಲಾಗುತ್ತಿಲ್ಲ. ಈ ಬಗ್ಗೆ ಕೇಂದ್ರ ಕಚೇರಿಗೆ ಮಾಹಿತಿ ನೀಡಿದ್ದೇವೆ. ಶೀಘ್ರ ಸರಿಯಾಗಲಿದೆ ಎಂಬ ಭರವಸೆ ಲಭಿಸಿದೆ. ನಮ್ಮ ಹಂತದಲ್ಲಿ ಏನೂ ಮಾಡಲು ಸಾಧ್ಯವಿಲ್ಲ  ಎಂದು ಹತಾಶೆ ವ್ಯಕ್ತಪಡಿಸುತ್ತಾರೆ ನಗರ ಸ್ಥಳೀಯ ಸಂಸ್ಥೆಯ ಸ್ಥಳೀಯ ಅಧಿಕಾರಿಯೊಬ್ಬರು.

ಏನೇನು ಸಿಗಲಿದೆ? :

ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅಕ್ರಮ ಆಸ್ತಿಗಳ ಮಾಹಿತಿ ದಾಖಲಿಸಲು ಅಥವಾ ತಿದ್ದುಪಡಿ ಮಾಡಲು, ಆಸ್ತಿಗಳ ಮಾಲಕತ್ವ ಹಕ್ಕು ವರ್ಗಾಯಿಸಲು ಹಾಗೂ ಆಸ್ತಿ ತೆರಿಗೆಯ ನಕಲನ್ನು ಡಿಜಿಟಲ್‌ ಸಹಿಯೊಂದಿಗೆ ಪಡೆಯಲು ಮಾಲಕರಿಗೆ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್‌ ಸಮಸ್ಯೆಯಿಂದ ಇದ್ಯಾವುದೂ ಸದ್ಯ ಸಿಗು ¤ಲ್ಲ.

ಶೀಘ್ರವೇ ಸಮಸ್ಯೆಗೆ ಪರಿಹಾರ :

ಈ ಸಂಬಂಧ ರಾಜ್ಯವ್ಯಾಪಿ ಬಹುತೇಕ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಂದಲೂ ದೂರುಗಳು ಬರುತ್ತಿವೆ. ತಂತ್ರಾಂಶ ಅಪ್‌ಡೇಟ್‌ ಆಗುತ್ತಿದೆ. ಶೀಘ್ರವೇ ಸಮಸ್ಯೆಗೆ ಪರಿಹಾರ ಸಿಗಲಿದೆ ಎನ್ನುತ್ತಾರೆ ನಿರ್ದೇಶನಾಲಯದ ಅಧಿಕಾರಿಯೊಬ್ಬರು.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಸಹಿತ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಎಲ್ಲೆಡೆ ಈಗ ಸರ್ವರ್‌ ಲಭ್ಯವಿರದ ಸಮಸ್ಯೆ ಇದೆ. ಜನ ಸಾಮಾನ್ಯರು ನಿತ್ಯವೂ ಇ-ಖಾತಾ ಸಂಬಂಧ ಕಚೇರಿಗೆ ಅಲೆದಾಡುತ್ತಿದ್ದಾರೆ. ಇಲಾಖೆಯಿಂದ ಅಥವಾ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳೂ ಸೂಕ್ತ ಮಾಹಿತಿ ನೀಡದ ಕಾರಣ ಬಹುತೇಕರು ಕಚೇರಿ-ಮನೆಗೆ ಅಲೆದಾಡುವಂತಾಗಿದೆ ಎನ್ನುತ್ತಾರೆ ನಿವೇಶನ ಮಾಲಕರೊಬ್ಬರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.