ಇ- ಆಸ್ತಿ ನೋಂದಣಿ: ತಾಂತ್ರಿಕ ತೊಂದರೆಯಿಂದ ಹಿನ್ನಡೆ

ಸರ್ವರ್‌ ಸಮಸ್ಯೆ, ಸಿಬಂದಿ ಕೊರತೆಯಿಂದ ತೊಡಕು

Team Udayavani, Dec 9, 2020, 8:16 AM IST

udupi-2

ಸಾಂದರ್ಭಿಕ ಚಿತ್ರ

ಉಡುಪಿ: ಆಸ್ತಿ ರಕ್ಷಣೆ ಹಾಗೂ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿ ಆರಂಭವಾದ ಇ- ಆಸ್ತಿ ನೋಂದಣಿ ಪ್ರಕ್ರಿಯೆ ಕುಂಟುತ್ತ ಸಾಗಿದೆ. ದಾಖಲೆ ನೀಡಿದರೂ, ಈ ತಂತ್ರಾಂಶದೊಳಗೆ ಸೇರ್ಪಡೆಗೊಳ್ಳದ ನಗರವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ತೊಡಕುಗಳು
ಆಸ್ತಿ ವಿವರಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಿದರೆ, ಆಸ್ತಿ ಹಕ್ಕಿಗೆ ಸಂಬಂಧಿಸಿ ಯಾವುದೇ ಅವ್ಯವಹಾರಕ್ಕೆ ಅವಕಾಶವಿರುವುದಿಲ್ಲ ಮತ್ತು ದಾಖಲೆಗಳು ಸುರಕ್ಷಿತವಾಗಿರುತ್ತವೆ. ಅಲ್ಲದೆ ಮಧ್ಯವರ್ತಿಗಳ ಹಸ್ತಕ್ಷೇಪ ತಪ್ಪುತ್ತದೆ ಎಂಬ ಕಾರಣಕ್ಕೆ ಅನುಷ್ಠಾನಗೊಂಡಿರುವ ಇ- ಆಸ್ತಿ ನೋಂದಣಿ ಕಾರ್ಯಕ್ರಮವು ಇದೀಗ ತಾಂತ್ರಿಕ ಹಾಗೂ ಸಿಬಂದಿ ಕೊರತೆಯಿಂದಾಗಿ ಹಿಂದೆ ಬಿದ್ದಿದೆ.

20,000 ಕಟ್ಟಡ ಇ-ಖಾತೆ
ನಗರದಲ್ಲಿ 67,123 ಕಟ್ಟಡಗಳಿವೆ. ಅವುಗಳಲ್ಲಿ 20,000 ಇ ಖಾತೆಯಾಗಿದೆ. ಇನ್ನೂ 2,510 ಸೈಟ್‌ಗಳ ಇ-ಖಾತೆಯಾಗಿದೆ ಎಂದು ನಗರಸಭೆ ಅಂಕಿ ಅಂಶಗಳು ಹೇಳುತ್ತಿವೆ.

ನೋಂದಣಿಯಾಗಲು ಏನೆಲ್ಲ ಬೇಕು ?
ಆರ್‌ಟಿಸಿ ಪ್ರತಿ, ಸರಕಾರಿ ಮಂಜೂರು ಪತ್ರ, ಲೇಔಟ್‌ ನಕ್ಷೆ, ಸರ್ವೆ ನಕ್ಷೆ, ಕಟ್ಟಡ ಪರವಾನಿಗೆ ಪತ್ರ, ಕಟ್ಟಡದ ನೀಲಿ ನಕ್ಷೆ, ಅನುಭೋಗ ಪತ್ರ, ಆಸ್ತಿ ತೆರಿಗೆ ವಿವರ ಹಾಗೂ ಪಾವತಿ, ನೀರಿನ ಕರದ ಪಾವತಿ, ಮನೆ, ನಿವೇಶನದ ಚಿತ್ರ, ಆಧಾರ್‌ ಸಂಖ್ಯೆ, ವಿದ್ಯುತ್‌ ಬಿಲ…, ಮ್ಯುಟೇಷನ್‌ ದಾಖಲೆ, ಮಾಲಕರ ಚಿತ್ರ, ಬ್ಯಾಂಕ್‌ ಸಾಲದ ಬಗ್ಗೆ ದಾಖಲೆ ಹಾಗೂ ಕ್ರಯ, ದಾನ, ಹಕ್ಕು ಖುಲಾಸೆ ಅಥವಾ ಬದಲಾವಣೆಯ ಆದೇಶದ ಪ್ರತಿಗಳನ್ನು ಮನೆ ಮಾಲಕರು ನಗರಸಭೆಗೆ ನೀಡಬೇಕು.

ಸರ್ವರ್‌ ಸಮಸ್ಯೆ!
ದಾಖಲೆ ಪೂರೈಕೆ ಮಾಡಿದರೂ ಸರ್ವರ್‌ ಸಮಸ್ಯೆಯಿಂದಾಗಿ ಜನರು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಇ -ಖಾತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬಂದಿ ನೀಡದ ಹಿನ್ನೆಲೆಯಲ್ಲಿ ಕೆಲಸಗಳು ಆಮೆ ನಡಿಗೆಯಂತಾಗಿವೆ. ಈ ನಿಟ್ಟಿನಲ್ಲಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ 4 ಮಂದಿಯನ್ನು ಕಂದಾಯ ವಿಭಾಗದಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಕುರಿತು ನಿರ್ಣಯವಾಗಿತ್ತು. ಅಂತೆಯೇ ಸಿಬಂದಿ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ನಿತ್ಯ 22 ಅರ್ಜಿಗಳು!
ನಗರಸಭೆಯಲ್ಲಿ ಖಾತೆ ಹಾಗೂ ಇ- ಖಾತೆಗೆ ಸಂಬಂಧಿಸಿದಂತೆ ನಾಲ್ಕು ಸಿಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಇ-ಖಾತೆಯಲ್ಲಿ ಇಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದು, ನಿತ್ಯ ಒಬ್ಬರಿಗೆ 10ರಿಂದ 12 ಇ-ಖಾತೆಗೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾಗುತ್ತವೆ. ಇದರ ವಿಲೇವಾರಿಗೆ 45 ದಿನಗಳ ಗಡುವು ಸರಕಾರ ನಿಗದಿ ಪಡಿಸಿದೆ.

ಕಾಲ ಮಿತಿಯೊಳಗೆ ವಿಲೇವಾರಿ
ಪ್ರಸ್ತುತ ಸಲ್ಲಿಕೆಯಾಗುತ್ತಿರುವ ಅರ್ಜಿಗಳನ್ನು ಕಾಲ ಮಿತಿಯೊಳಗೆ ವಿಲೇವಾರಿ ಮಾಡಲಾಗುತ್ತಿದೆ. ಜನರು ಮುಂದೆ ಬಂದು ಇ-ಆಸ್ತಿ ನೋಂದಣಿ ಮಾಡುವಲ್ಲಿ ಆಸಕ್ತಿ ತೋರುತ್ತಿದ್ದಾರೆ.
-ಧನಂಜಯ, ಅಧಿಕಾರಿ, ಕಂದಾಯ ವಿಭಾಗ, ನಗರಸಭೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.