ಕರಾವಳಿ ತೀರದಲ್ಲಿ ಚಿಗುರೊಡೆದಿದೆ ಪರಿಸರ ರಕ್ಷಕ ಕಾಂಡ್ಲ ಕಾಡು

ಗುಂಡ್ಮಿ-ಪಾರಂಪಳ್ಳಿಯ 15ಹೆಕ್ಟೇರ್‌ ಪ್ರದೇಶದಲ್ಲಿ ಯಶಸ್ವಿ ಕೃಷಿ

Team Udayavani, Apr 27, 2019, 6:05 AM IST

2504KOTA1E

ಬೆಳೆದುನಿಂತ ಕಾಂಡ್ಲ ಗಿಡಗಳ ನಡುವೆ ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯರು.

ಕೋಟ: ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾಂಡ್ಲ ಕಾಡು ಇದೀಗ ನಶಿಸುತ್ತಿದೆ. ಇದರ ರಕ್ಷಣೆ ಮತ್ತು ಬೆಳೆಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸ್ಥಳೀಯರ ಮೂಲಕ ಕಾಂಡ್ಲ ವನಗಳ ನಿರ್ಮಾಣಕ್ಕೆ ಮುಂದಾಗಿದೆ. ವರ್ಷದ ಹಿಂದೆ ಗುಂಡ್ಮಿ, ಪಾರಂಪಳ್ಳಿ ಹೊಳೆಯ ಸುಮಾರು 15 ಹೆಕ್ಟೇರ್‌ ಪ್ರದೇಶದ ಹಿನ್ನೀರಿನಲ್ಲಿ ನಾಟಿ ಮಾಡಿದ ಕಾಂಡ್ಲ ಸಸಿಗಳಲ್ಲಿ ಶೇ.80ರಿಂದ ಶೇ.90ರಷ್ಟು ಬೆಳೆದು ನಿಂತಿದೆ.

4 ತಿಂಗಳು ನಾಟಿ
ಅರಣ್ಯ ಇಲಾಖೆ ಸಹಕಾರದಲ್ಲಿ ಒಂದು ವರ್ಷದ ಹಿಂದೆ ಸಾಸ್ತಾನ ಸಮೀಪ ಕೋಡಿಕನ್ಯಾಣ ಸೇತುವೆಯಿಂದ ಉತ್ತರಕ್ಕೆ ಗುಂಡ್ಮಿ ಬಡಾಅಲಿತೋಟ ಮೂಲಕ ಪಾರಂಪಳ್ಳಿ ಸೇತುವೆ ತನಕ ಸ್ಥಳೀಯರು 4ತಿಂಗಳುಗಳ ಕಾಲ ಕಾರ್ಯ ನಿರ್ವಹಿಸಿ 15ಹೆಕ್ಟೇರ್‌ ಪ್ರದೇಶದ ಹೊಳೆಯಲ್ಲಿ ಕಾಂಡ್ಲ ಗಿಡಗಳನ್ನು ನಾಟಿ ಮಾಡಿದ್ದರು.

ಪರಿಸರ ಸಂರಕ್ಷಕ
ಕಾಂಡ್ಲದಲ್ಲಿ ಸುಮಾರು 25ಕ್ಕೆ ಹೆಚ್ಚಿನ ಪ್ರಭೇದಗಳಿವೆ. ಇದರ ಬೇರುಗಳು ತೀರಪ್ರದೇಶದ ಮಣ್ಣನ್ನು ಬಿಗಿಯಾಗಿ ಹಿಡಿಯುವುದರಿಂದ ಸಮುದ್ರ ಹಾಗೂ ಭೂ ಕೊರೆತಕ್ಕೆ ತಡೆಯಾಗುತ್ತದೆ. ಮರಗಳು ತಡೆಗೋಡೆಯಂತೆ ಬೆಳೆದು ನಿಲ್ಲುವುದರಿಂದ ಬಿರುಗಾಳಿ, ಚಂಡಮಾರುತ, ಪ್ರವಾಹ, ಕಡಲ್ಕೊರೆತ, ಸುನಾಮಿಯಂಥ ಪ್ರಕೃತಿ ವಿಕೋಪದ ಜತೆಗೆ ಸಮುದ್ರದ ತೀರದಲ್ಲಿ ಉಂಟಾಗುವ ವಿನಾಶವನ್ನು ತಡೆಯುತ್ತದೆ. ಇದರ ದಪ್ಪ ಹಸುರು ಎಲೆಗಳು ಅಧಿಕ ಅಧಿಕ ಪ್ರಮಾಣದಲ್ಲಿ ಆಮ್ಲಜನಕ ಬಿಡುಗಡೆ ಮಾಡುತ್ತವೆ. ನದಿಗಳಿಂದ ಬರುವ ಸಾರಾಂಶವನ್ನು ಹಿಡಿದಿಟ್ಟು ಆ ಪ್ರದೇಶವನ್ನು ಸಮೃದ್ಧಗೊಳಿಸಲು ಇವು ಸಹಕಾರಿ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳಾದ ಮೀನು, ಏಡಿ, ಕಪ್ಪೆ ಇತ್ಯಾದಿಗಳು ಮರಿಮೊಟ್ಟೆಗಳ ಸಂತಾನಾಭಿವೃದ್ಧಿ ಆಹಾರಕ್ಕಾಗಿ ಇದನ್ನು ಆಶ್ರಯಿಸುತ್ತವೆ.

ಕಾಂಡ್ಲ ವನ ನಿರ್ಮಾಣ ಹೇಗೆ ?
ಕಾಂಡ್ಲದ ಕಾಯಿ, ಕೋಡುಗಳೇ ಈ ಸಸ್ಯದ ಪರಂಪರೆಯ ಕೊಂಡಿ.ಮರದಿಂದ ಬೇರ್ಪಟ್ಟು, ನೀರಿನ ತಳದ ಕೆಸರಿಗೆ ಅಡಿಮುಖವಾಗಿ ಇಳಿಯುವ ಕೋಡುಗಳು, ಗಿಡಗಳಾಗಿ ರೂಪ ಪಡೆಯುತ್ತವೆ. ಇಂತಹ ಲಕ್ಷಾಂತರ ಕೋಡುಗಳನ್ನು ಸಂಗ್ರಹಿಸಿ ನಾಟಿ ಮಾಡಿ ಕಾಂಡ್ಲಾ ವನ ನಿರ್ಮಿಸಲಾಗುತ್ತದೆ.

ಸ್ಥಳೀಯರು, ಅರಣ್ಯಾಧಿಕಾರಿಗಳ ಮೆಚ್ಚುಗೆ
ಕರಾವಳಿ ಭಾಗದಲ್ಲಿ ಈ ಹಿಂದೆ ಕಾಂಡ್ಲ ಕೃಷಿ ಕೈಗೊಂಡಾಗ ಇಲ್ಲಿನ ವಾತಾವರಣಕ್ಕೆ ಕೇವಲ ಶೇ.50-60ರಷ್ಟು ಸಸಿಗಳು ಬದುಕುಳಿಯುತ್ತಿದ್ದವು. ಆದರೆ ಇಷ್ಟೊಂದು ಹೇರಳ ಪ್ರಮಾಣದಲ್ಲಿ ಗಿಡಗಳು ಬದುಕಿರುವುದಕ್ಕೆ ಸ್ಥಳೀಯರು ಮತ್ತು ಇಲ್ಲಿಗೆ ಭೇಟಿ ನೀಡಿದ ಮಂಗಳೂರು ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ಎಸ್‌. ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಪ್ರಭಾಕರನ್‌ ಹಾಗೂ ಸಿಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂಡ್ಲ ವನ ರಕ್ಷಣೆಯಲ್ಲಿ ಕೈಜೋಡಿಸಿ
ಸಾಸ್ತಾನ ಸಮೀಪ ಗುಂಡ್ಮಿಯಲ್ಲಿ ಸ್ಥಳೀಯರ ಮೂಲಕ 15ಹೆಕ್ಟೇರ್‌ ಪ್ರದೇಶದಲ್ಲಿ ಕಾಂಡ್ಲವನ ನಿರ್ಮಿಸಲಾಗಿದೆ ಇದು ಪರಿಸರ ರಕ್ಷಣೆಗೆ ಸಹಕಾರಿಯಾಗಿದೆ. ಇದರ ರಕ್ಷಣೆಗೆ ಸ್ಥಳೀಯರು ಸಹಕಾರ ನೀಡಬೇಕು ಹಾಗೂ ಕಾಂಡ್ಲ ಗಿಡಗಳನ್ನು ನಾಶಪಡಿಸುವುದು ಅರಣ್ಯ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.
-ಜೀವನದಾಸ್‌ ಶೆಟ್ಟಿ, ಉಪವಲಯ ಅರಣ್ಯಾಧಿಕಾರಿಗಳು, ಬ್ರಹ್ಮಾವರ

-ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.