ಪರಿಣಾಮಕಾರಿ ಪೂರ್ವಸಿದ್ಧತೆಯಿಂದ ಸುಗಮ ಚುನಾವಣೆ: ಎಸ್ಪಿ


Team Udayavani, May 17, 2018, 7:05 AM IST

1605udcp-sp-1.jpg

ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ, ಕಾರ್ಕಳ, ಉಡುಪಿ ಮತ್ತು ಕಾಪು ಈ ಐದೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1,103 ಮತಗಟ್ಟೆಗಳಿದ್ದು, 226 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿ ಸಲಾಗಿತ್ತು. ಹೀಗಿದ್ದರೂ ಯಾವುದೇ ಅಹಿತಕರ ಘಟನೆಯಿಲ್ಲದೆ ಸುಗಮವಾಗಿ ಚುನಾವಣೆ ನಡೆದ ಹಿನ್ನೆಲೆ ಇಲಾಖೆಯ ಒಟ್ಟು ನಿರ್ವಹಣೆಯ ಕುರಿತು “ಉದಯ ವಾಣಿ’ ಜತೆಗಿನ ಮಾತುಕತೆಯಲ್ಲಿ ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ಅವರು ತಮ್ಮ  ಅನುಭವ ಬಿಚ್ಚಿಟ್ಟಿದ್ದಾರೆ.

ಇಲಾಖೆಯ ಒಟ್ಟು ನಿರ್ವಹಣೆ ಹೇಗಿತ್ತು?
ಅಧಿಕಾರ ಸ್ವೀಕರಿಸಿದ ಬಳಿಕ ಕರ್ತವ್ಯದಲ್ಲಿ ನನಗಿದು ಮೊದಲ ಚುನಾವಣೆ. ಹಿರಿಯ ಅಧಿಕಾರಿಗಳ ಮಾರ್ಗ ದರ್ಶನದಿಂದ ಮಾರ್ಚ್‌ನಿಂದಲೇ ಬಂದೋ ಬಸ್ತ್ಗೆ ಕಾರ್ಯಚಟುವಟಿಕೆ ಆರಂಭಿಸಿದ್ದೆ. ಪ್ರಧಾನಿ, ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರ ಜಿಲ್ಲಾ ಭೇಟಿ, ಇತರ ವಿವಿ ಐಪಿ ಬಂದೋಬಸ್ತ್ ಅನ್ನು ವ್ಯವಸ್ಥಿತವಾಗಿ ಕಲ್ಪಿಸಿದ್ದೆವು. ಅಧಿಕಾರಿಗಳೊಂದಿಗೆ ನಿರಂತರ ಸಭೆ, ವೀಡಿಯೋ ಕಾನ್ಫರೆನ್ಸ್‌, ಚುನಾವಣಾ ಆಯೋಗದೊಂದಿಗೂ ಸಭೆ, ಸಂವಹನ ನಡೆಸಲಾಗಿತ್ತು. ಸಿಬಂದಿ ನಿಯೋಜನೆ ಕುರಿತು ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಜತೆಗೂ ಆಗಾಗ್ಗೆ ಸಭೆ ನಡೆಯುತ್ತಿತ್ತು. ಪರಿಣಾಮ ಶಾಂತಿಯುತ ಮತದಾನಕ್ಕೆ ನಾಂದಿಯಾಯಿತು.

ವ್ಯವಸ್ಥೆ ಹೇಗಿತ್ತು? 
ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗಿತ್ತು. ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗಿತ್ತು. ಚೆಕ್‌ಪೋಸ್ಟ್‌, ಫ್ಲೈಯಿಂಗ್‌ ಸ್ಕ್ವಾಡ್‌ ಕೂಡ ಉತ್ತಮವಾಗಿ ಕೆಲಸ ಮಾಡಿದೆ. ಕೇಂದ್ರೀಯ ಅರೆಸೇನಾ ಪಡೆ, ಸಶಸ್ತ್ರ ಸೀಮಾದಳ, ಹರಿಯಾಣ ಪೊಲೀಸ್‌, ಬಿಎಸ್‌ಎಫ್ ನಿಯೋಜನೆಗೆ  ನೀಲನಕಾಶೆ ಸಿದ್ಧಪಡಿಸಿ ಕೊಂಡಿದ್ದೆವು. ಅವರಿಗೆ ಮೂಲ ಸೌಕರ್ಯ, ಆಹಾರ, ವಸತಿಗೆ ಶಾಲೆ, ಕಾಲೇಜು ಹಾಸ್ಟೆಲ್‌ ಸಜ್ಜುಗೊಳಿಸಿ ಉತ್ತಮ  ವ್ಯವಸ್ಥೆ ಕಲ್ಪಿಸಿದ್ದೆವು. ವೈದ್ಯಕೀಯಕ್ಕೆ ಕೆಎಂಸಿ ಸಹಿತ ಇತರ ಆಸ್ಪತ್ರೆಗಳು ಸಹಕಾರ ನೀಡಿವೆ. 

ಗಲಭೆಕೋರರ ನಿಯಂತ್ರಣ ಯಶಸ್ವಿಯಾಯೆ¤à?
ಜಿಲ್ಲೆಯಲ್ಲಿ ಒಟ್ಟು 226 ಸೂಕ್ಷ್ಮ ಮತಗಟ್ಟೆ ಇತ್ತು. ಅಲ್ಲಿಗೆ ಅರೆಸೇನಾ ಪಡೆ ಸಿಬಂದಿ ನಿಯೋಜಿಸಿ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು. ಅಹಿತಕರ ಘಟನೆ ನಡೆಸುವ ಮನೋಸ್ಥಿತಿ ಇರುವ 2,232 ಮಂದಿಯಿಂದ ಮುಚ್ಚಳಿಕೆ ಪಡೆಯಲಾಗಿತ್ತು. ತಲೆಮರೆಸಿಕೊಂಡಿದ್ದವರ ಪೈಕಿ 4,300 ಮಂದಿಯನ್ನು ಪತ್ತೆ ಮಾಡಿ ಕೋರ್ಟ್‌ಗೆ ಹಾಜರುಪಡಿಸಿದ್ದೆವು. 17 ಮಂದಿ ಗಡೀಪಾರು ಮಾಡಿ, 3 ಮಂದಿ ವಿರುದ್ಧ ಗೂಂಡಾ ಕಾಯ್ದೆ ಕೇಸು ದಾಖಲಿಸಿಲಾಗಿತ್ತು. ಈ ಮೂಲಕ ಗಲಭೆಕೋರರನ್ನು ನಿಯಂತ್ರಿಸಿದ್ದೆವು.

ನಕ್ಸಲ್‌ ಸಮಸ್ಯೆ-ಸಂಶಯವಿತ್ತೆ?
ನಕ್ಸಲ್‌ ಪೀಡಿತವೆಂದು ಗುರುತಿಸಿದ್ದ 54 ಮತಗಟ್ಟೆಗಳಲ್ಲಿ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿತ್ತು. ನಕ್ಸಲರ ಚಲನವಲನ ಕ್ಷೀಣಿಸಿದ್ದರೂ ಸಂಶಯಿತ ಮತಗಟ್ಟೆಗಳ ಮೇಲೆ ಕಣ್ಗಾವಲು ಇರಿಸಲಾಗಿದ್ದುದರಿಂದ ಶಾಂತಿ ಯುತ, ಸುಗಮ ಮತದಾನ ಸಾಧ್ಯವಾಯಿತು.

– ಚೇತನ್‌ ಪಡುಬಿದ್ರಿ

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.