ಸರಕಾರದ ಅನುದಾನಕ್ಕೆ ಯತ್ನ: ಪ್ರಮೋದ್, ಸೊರಕೆ
Team Udayavani, Nov 3, 2017, 6:40 AM IST
ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘ ಅಲೆವೂರು ಇದರ ಮಹತ್ವಾಕಾಂಕ್ಷಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಸಭಾಭವನ ನಿರ್ಮಾಣದ ಮೂಲಕ ಆ ಭಾಗದ ಜನತೆಗೆ ಉತ್ತಮ ಸೇವೆ ದೊರಕುವ ಭರವಸೆ ಇರುವ ನೆಲೆಯಲ್ಲಿ ಮುಖ್ಯಮಂತ್ರಿ ಅವರಲ್ಲಿ ಚರ್ಚಿಸಿ ಸಭಾಭವನ ನಿರ್ಮಾಣಕ್ಕೆ ಸರಕಾರದ ಅನುದಾನ ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಶಾಸಕ ವಿನಯ ಕುಮಾರ್ ಸೊರಕೆ ಭರವಸೆ ನೀಡಿದರು.
17 ಗ್ರಾಮಗಳ ಸುಮಾರು 2,500 ಮಂದಿ ಸದಸ್ಯರನ್ನು ಹೊಂದಿದ ಉಡುಪಿ ಗ್ರಾಮೀಣ ಬಂಟರ ಸಂಘ ಅಲೆವೂರು, ಮಣಿಪುರ ಗ್ರಾಮದ ಕುಂತಳನಗರದಲ್ಲಿ ಸಬಾಭವನ ನಿರ್ಮಾಣಕ್ಕೆ ಅಣಿಯಾಗಿದ್ದು, ಇದರ ಶಂಕು ಸ್ಥಾಪನೆ ಕಾರ್ಯಕ್ರಮ ಡಿ. 10ರಂದು ನಡೆಯಲಿದೆ. ಈ ಪ್ರಯಕ್ತ ಗ್ರಾಮೀಣ ಬಂಟರ ಸಂಘ ಮತ್ತು ಗ್ರಾಮೀಣ ಬಂಟರ ಸಂಘದ ಬಂಟರ ಸಭಾಭವನ ನಿರ್ಮಾಣ ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಶಾಸಕ ವಿನಯ ಕುಮಾರ್ ಸೊರಕೆ ಅವರನ್ನು ಭೇಟಿ ಮಾಡಿ ನೀಲನಕ್ಷೆ ತೋರಿಸಿ ವಿವರಿಸಿದರು.
ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕಾರಾಮ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರಾದ ಅಶೋಕ ಕುಮಾರ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ನವೀನಚಂದ್ರ ಶೆಟ್ಟಿ ಕಾಪು, ಹರೀಶ್ ಬೆಳ್ಳೆ, ಕುಶಲ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ