ಮಹಿಳೆಯರನ್ನು ಸ್ವಾವಲಂಬಿಗಳಾಗಿಸಲು ಪ್ರಯತ್ನ: ಗಣೇಶ್‌


Team Udayavani, Jan 23, 2020, 1:23 AM IST

2201KDLM1PH

ಕುಂದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಈ ವರ್ಷ ಕ್ರಿಯಾಯೋಜನೆ ತಯಾರಿಸಿದ್ದು ವಿವಿಧ ಕೌಶಲಾಧಾರಿತ ತರಬೇತಿಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳಾಗಿಸುವ ಪ್ರಯತ್ನ ಸಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಬಿ. ಗಣೇಶ್‌ ಅವರು ಹೇಳಿದರು.

ಬುಧವಾರ ಇಲ್ಲಿನ ಕುಂದೇಶ್ವರ ದೇವಸ್ಥಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕೌಶಲಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವ ಉದ್ಯೋಗಕ್ಕೆ ಪೂರಕವಾಗಿ ಕೌಶಲಾಧಾರಿತ ತರಬೇತಿಗಳನ್ನು ನೀಡಲಾಗುತ್ತಿದ್ದು ಪ್ಲಾಸ್ಟಿಕ್‌ ಬಳಕೆ ಕಡಿಮೆಯಾಗಲು ಬಟ್ಟೆ ಚೀಲಗಳ ಹೊಲಿಗೆ ತರಬೇತಿ, ಸೀರೆಗೆ ಗುತ್ಛ ಹಾಕುವ ತರಬೇತಿ, ಬ್ಯುಟಿಶಿಯನ್‌ ತರಬೇತಿ, ಕೃತಕ ಆಭರಣ ತರಬೇತಿ ನೀಡಲಾಗುತ್ತಿದೆ. ಆದಾಯಕ್ಕೆ ದಾರಿಯಾಗಬಲ್ಲ ತರಬೇತಿಗಳನ್ನೇ ನೀಡುತ್ತಿದ್ದು ಎಲ್ಲರಿಗೂ ರುಡ್‌ಸೆಟ್‌ ಮೂಲಕ ಸನಿವಾಸ ತರಬೇತಿ ಪಡೆಯಲು ಕಷ್ಟವಾಗುವ ಕಾರಣ ಆಯಾ ಪ್ರದೇಶದಲ್ಲೇ ತರಬೇತಿ ನೀಡಲಾಗುತ್ತಿದೆ ಎಂದರು.

ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಾನಂದ ಚಾತ್ರ ಅವರು ವಾಹನಗಳ ಕೀಲಿ ಕೈ ಹಸ್ತಾಂತರಿಸಿದರು.

ಪುರಸಭೆ ಸದಸ್ಯ ಗಿರೀಶ್‌ ಜಿ.ಕೆ., ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಮುರಳೀಧರ ಶೆಟ್ಟಿ, ಸ್ವಸಹಾಯ ಸಂಘಗಳ ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷೆ ಶೋಭಾಚಂದ್ರ, ವಲಯಾಧ್ಯಕ್ಷೆ ಉತ್ಕಲಾ, ತರಬೇತಿ ನೀಡಿದ ಬೇಬಿ, ಟಿವಿಎಸ್‌ ಶೋರೂಂನ ಪ್ರಶಾಂತ್‌ ಉಪಸ್ಥಿತರಿದ್ದರು.

ಒಟ್ಟು 25 ಮಂದಿಗೆ ದ್ವಿಚಕ್ರ ವಾಹನ ಚಾಲನೆ ತರಬೇತಿ ನೀಡಿ ಚಾಲನಾ ಪರವಾನಗಿ ಮಾಡಿಸಿಕೊಡಲಾಗಿದೆ. ಈ ಪೈಕಿ 22 ಮಂದಿ ವಾಹನ ಖರೀದಿಸಲು ಸಾಲ ಪಡೆದಿದ್ದಾರೆ. 16 ಮಂದಿಗೆ ಬುಧವಾರ ಏಕಕಾಲದಲ್ಲಿ ವಿತರಿಸಲಾಯಿತು. ದೇಗುಲದ ಎದುರು ಪೂಜೆ ಮಾಡಿ ವಾಹನದ ಕೀಲಿ ಕೈ ಹಸ್ತಾಂತರಿಸಲಾಯಿತು.ವಲಯ ಮೇಲ್ವಿಚಾರಕ ಪಾಂಡ್ಯನ್‌ ಹೆಮ್ಮಾಡಿ ನಿರ್ವಹಿಸಿ, ಪ್ರಸನ್ನ ದೇವಾಡಿಗ ಸ್ವಾಗತಿಸಿದರು.

ನಿಯಮ ಪಾಲಿಸಿ
ತರಬೇತಿ ಪಡೆದವರಿಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು ಸಾಲದ ಶೇ.10ರಷ್ಟನ್ನು ಸಬ್ಸಿಡಿಯಾಗಿ ಕೂಡಾ ನೀಡಲಾಗುತ್ತಿದೆ. ಇಲ್ಲಿ ದ್ವಿಚಕ್ರ ವಾಹನ ಚಾಲನೆ ತರಬೇತಿ ನಡೆದಿದ್ದು ದ್ವಿಚಕ್ರ ವಾಹನ ಕೊಳ್ಳುವವರಿಗೆ ಸಾಲ ನೀಡಲಾಗಿದೆ. ವಾಹನ ಮಾರಾಟ ಸಂಸ್ಥೆ ಜತೆ ಮಾತುಕತೆ ನಡೆಸಿ ರಿಯಾಯಿತಿ ಕೊಡಿಸಲಾಗಿದೆ. ವಾಹನ ಸವಾರರು ಹೆಲ್ಮೆಟ್‌ ಧರಿಸಿ, ರಸ್ತೆ ಸಂಚಾರಿ ನಿಯಮ ಪಾಲಿಸಿ.
– ಬಿ.ಗಣೇಶ್‌

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.