ಕಾಪು: ಈದ್ ಮಿಲಾದ್; ಸೌಹಾರ್ದ ಮೆರೆದ ಹಿಂದೂಗಳು
Team Udayavani, Nov 21, 2018, 2:15 AM IST
ಕಾಪು: ಪ್ರವಾದಿ ಮಹಮ್ಮದ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಂಗಳವಾರ ಜರಗಿದ ಮಿಲಾದುನ್ನಬಿ ಜಾಥಾದ ಸಂದರ್ಭದಲ್ಲಿ ಕಾಪು ಪೇಟೆಯ ವರ್ತಕರು ಮತ್ತು ಹಿಂದೂಗಳು ಸಿಹಿ ತಿಂಡಿ, ತಂಪು ಪಾನೀಯ ಮತ್ತು ನೀರು ಪೂರೈಕೆ ಮಾಡುವ ಮೂಲಕ ಸೌಹಾರ್ದ ಮೆರೆದರು.
2,500 ನೀರಿನ ಬಾಟಲಿ ವಿತರಣೆ
ಮುಸ್ಲಿಮರು ನಡೆಸಿದ ಈದ್ ಮಿಲಾದ್ ಮೆರವಣಿಗೆಯು ಕಾಪು ಪೇಟೆಯನ್ನು ಹಾದು ಹೋಗುವ ಸಂದರ್ಭದಲ್ಲಿ ಕಾಪು ಪೇಟೆಯ ಹಿಂದೂಗಳು ಸುಮಾರು 2,500 ಬಾಟಲಿಗಳಷ್ಟು ಕುಡಿಯುವ ನೀರು ಮತ್ತು ಸಿಹಿ ತಿಂಡಿಗಳನ್ನು ಹಂಚಿ ಮೆರವಣಿಗೆಯನ್ನು ಬೀಳ್ಕೊಟ್ಟರು. ಕಾಪು ಪೇಟೆಯ ವರ್ತಕರು, ರಿಕ್ಷಾ, ಟೆಂಪೋ, ಕಾರು ಚಾಲಕರು ಮತ್ತು ಮಾಲಕರು ಹಾಗೂ ಕಾಪು ಪುರಸಭೆಯ ಜನಪ್ರತಿನಿಧಿಗಳು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ವಿವಿಧ ಸಂಘ – ಸಂಸ್ಥೆಗಳ ಪ್ರತಿನಿಧಿಗಳು ಸೌಹಾರ್ದ ಕಾರ್ಯಕ್ರಮದೊಂದಿಗೆ ಕೈ ಜೋಡಿಸಿದರು.
ಕಾಪು – ಪೊಲಿಪು ಮಸೀದಿಯಿಂದ ಪ್ರಾರಂಭಗೊಂಡ ಮಿಲಾದುನ್ನಬಿ ಮೆರವಣಿಗೆಯು ಕೊಪ್ಪಲಂಗಡಿಯವರೆಗೆ ಸಾಗಿ, ಮಲ್ಲಾರು – ಪಕೀರಣಕಟ್ಟೆಯಿಂದ ಮೆರವಣಿಗೆಯನ್ನು ಕೊಪ್ಪಲಂಗಡಿಯಲ್ಲಿ ಕೂಡಿಕೊಂಡು ಕಾಪು ಪೇಟೆಯ ಮೂಲಕ ಸಾಗಿ ಪೊಲಿಪು ಜಂಕ್ಷನ್ನಲ್ಲಿ ಸಮಾಪನಗೊಂಡಿತು. ಸಾವಿರಾರು ಮಂದಿ ಮುಸ್ಲಿಮರು ಪಾಲ್ಗೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?