ಚುನಾವಣೆ ವೆಬ್‌ ಕಾಸ್ಟಿಂಗ್‌: ಉಡುಪಿ ಶೇ. 100 ಸಾಧನೆ


Team Udayavani, Apr 27, 2019, 10:18 AM IST

udupi-tdy-4..

(ಅಂತರ್ಜಾಲ ಚಿತ್ರ )

ಉಡುಪಿ, ಎ. 26: ರಾಜ್ಯದಲ್ಲಿ ಗುರುವಾರ ನಡೆದ ಪ್ರಥಮ ಹಂತದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 14 ಜಿಲ್ಲೆಗಳ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಅಳವಡಿಸಿದ್ದು ಇದರಲ್ಲಿ ಉಡುಪಿ ಜಿಲ್ಲೆಯ ಒಟ್ಟು 54 ಮತಗಟ್ಟೆಗಳಲ್ಲಿ ವೆಬ್‌ ಕ್ಯಾಮೆರಾ ಅಳವಡಿಸಲಾಗಿತ್ತು. ಇತರೆ ಜಿಲ್ಲೆಗಳಲ್ಲಿ ಅಳವಡಿಸಿದ್ದ ಕೆಲವು ವೆಬ್‌ ಕ್ಯಾಮೆರಗಳು ವಿವಿಧ ಕಾರಣಗಳಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಿಲ್ಲ. ಆದರೆ ಉಡುಪಿಯಲ್ಲಿ ಅಳವಡಿಸಿದ್ದ ಎಲ್ಲ ಕೆಮರಾಗಳು ಯಾವುದೇ ಅಡೆತಡೆಗಳಿಲ್ಲದೆ ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಮೂಲಕ 14 ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆ ಶೇ. 100 ಸಾಧನೆ ಮಾಡಿದ ಜಿಲ್ಲೆಯಾಗಿ ಮೂಡಿಬಂದಿದೆ.

ಜಿಲ್ಲೆಯ 54 ಸೂಕ್ಷ್ಮ ಮತಗಟ್ಟೆಗಳಲ್ಲಿ ಮತದಾನವನ್ನು ಪರಿಶೀಲಿಸಲು, ಈ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡದರೆ ಕೂಡಲೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ವೆಬ್‌ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಿದ್ದ ನಿಯಂತ್ರಣ ಕೊಠಡಿಯಲ್ಲಿ ಈ ಎಲ್ಲ ಮತಗಟ್ಟೆಗಳ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.

ಎ. 18ರಂದು ರಾಜ್ಯದ ವಿವಿಧ ಜಿಲ್ಲೆಗಳ ಮತಗಟ್ಟೆಗಳಲ್ಲಿ ಅಳವಡಿಸಿದ್ದ ವೆಬ್‌ ಕ್ಯಾಮೆರಾಗಳು ಮತ್ತು ಅವುಗಳ ಕಾರ್ಯ ನಿರ್ವಹಣೆ ಮಾಹಿತಿ ಇಂತಿದೆ: ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಅಳವಡಿಸಿದ್ದ 110 ವೆಬ್‌ ಕ್ಯಾಮೆರಾಗಳಲ್ಲಿ ಗರಿಷ್ಠ 104 ಕೆಮರಾಗಳು ಕಾರ್ಯ ನಿರ್ವಹಿಸಿವೆ. ಮೈಸೂರಿನ 179ರಲ್ಲಿ 163, ಚಿತ್ರದುರ್ಗದ 80ರಲ್ಲಿ 66, ತುಮಕೂರಿನ 140ರಲ್ಲಿ 131, ಮಂಡ್ಯದ 101ರಲ್ಲಿ 89, ಬೆಂಗಳೂರು ಸೆಂಟ್ರಲ್ನ 87 ರಲ್ಲಿ 69, ಬೆಂಗಳೂರು ಉತ್ತರದ 101ರಲ್ಲಿ 95, ಕೋಲಾರದ 100ರಲ್ಲಿ 86, ರಾಮನಗರದ 60ರಲ್ಲಿ 59, ಬೆಂಗಳೂರು ದಕ್ಷಿಣದ 100ರಲ್ಲಿ 91, ಬೆಂಗಳೂರು ನಗರದ 100ರಲ್ಲಿ 95, ಹಾಸನದ 134 ರಲ್ಲಿ 129, ಚಿಕ್ಕಬಳ್ಳಾಪುರದ 70ರಲ್ಲಿ 69 ಕಾರ್ಯ ನಿರ್ವಹಿಸಿದ್ದು ಉಡುಪಿಯಲ್ಲಿ 54ರಲ್ಲಿ 54 ಕಾರ್ಯ ನಿರ್ವಹಿಸಿವೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತ್ತು ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರ ನಿರ್ದೇಶನದಂತೆ ಎ. 7ರಿಂದಲೆ ವೆಬ್‌ ಕೆಮರಾ ಅಳಡಿಸಲು ಗುರುತಿಸಲಾಗಿದ್ದ 54 ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿ, ಅಲ್ಲಿನ ವಿದ್ಯುತ್‌ ವ್ಯವಸ್ಥೆ, ಸಿಗ್ನಲ್ ದೊರೆಯುವ ಸ್ಥಳ ಇವುಗಳನ್ನು ಗುರುತಿಸಿದ್ದರು. ಸಂಬಂಧಪಟ್ಟ ಶಾಲೆ ಮುಖ್ಯಸ್ಥರು ಮತ್ತು ಗ್ರಾ.ಪಂ. ಅಭಿವೃಧ್ದಿ ಅಧಿಕಾರಿಗಳಿಗೆ ಅಗತ್ಯವಿದ್ದ ದುರಸ್ತಿ ಕಾರ್ಯ ಮಾಡುವಂತೆ ಸೂಚಿಸಿ, ಎಲ್ಲ ಮತಗಟ್ಟೆಗಳನ್ನು ವ್ಯವಸ್ಥಿತಗೊಳಿಸಲಾಗಿತ್ತು. ಮತದಾನ ಹಿಂದಿನ ದಿನವೂ ಭೇಟಿ ನೀಡಿ, ಮತಗಟ್ಟೆ ಅಧಿಕಾರಿಗಳಿಗೆ ವೆಬ್‌ ಕೆಮರಾ ಅಳವಡಿಸಿದ ಪ್ಲಗ್‌ನ್ನು ಯಾವುದೇ ಕಾರಣಕ್ಕೆ ಬದಲಾಯಿಸದಂತೆ ಸೂಚಿಸಲಾಗಿತ್ತು ಎನ್ನುತ್ತಾರೆ ಜಿಲ್ಲಾ ವೆಬ್‌ ಕಾಸ್ಟಿಂಗ್‌ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಸರ ಅಧಿಕಾರಿ ಡಾ| ಲಕ್ಷ್ಮೀಕಾಂತ್‌. ಎ. 23ರಂದು ನಡೆಯುವ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲೂ ಸಹ 16 ಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್‌ ಕೆಮರಾಗಳನ್ನು ಅಳವಡಿಸಲಾಗುತ್ತಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.