ಚುನಾವಣೆ ಪ್ರಜಾಪ್ರಭುತ್ವದ ಹಬ್ಬ :ಸುರೇಂದ್ರನಾಥ
Team Udayavani, Mar 12, 2019, 1:00 AM IST
ಉಡುಪಿ: ಪ್ರಜಾಪ್ರಭುತ್ವದ ಸಾಫಲ್ಯತೆಯನ್ನು ಅಳೆಯುವ ನಿಜವಾದ ಮಾಪನವೇ ಚುನಾವಣೆ. ಚುನಾವಣೆ ಅತ್ಯಂತ ಪ್ರಾಮಾಣಿಕ, ಪಾರದರ್ಶಕತೆಯಿಂದ ನಡೆಯಬೇಕೆನ್ನುವುದು ಎಲ್ಲರ ಆಶಯ. ಇದಕ್ಕಾಗಿಯೇ ಚುನಾವಣಾ ಆಯೋಗ ಜಾರಿಗೊಳಿಸುವ ನೀತಿ ಸಂಹಿತೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರನ ಪಾತ್ರವೂ ಇದೆ ಎಂದು ಎಂ.ಜಿ.ಎಂ.ಕಾಲೇಜಿನ ರಾಜ್ಯಸಭಾ ವಿಭಾಗದ ಮುಖ್ಯಸ್ಥ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಯುವ ಸಬಲೀಕರಣ ಘಟಕದ ಆಶ್ರಯದಲ್ಲಿ ಮತದಾನದ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಬೇಕಾದರೆ ಯುವ ಮತದಾರರು ಅತ್ಯಂತ ಮುತುವರ್ಜಿಯಿಂದ ಪ್ರಜಾಪ್ರಭುತ್ವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಾಗಿದೆ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ| ಪ್ರಕಾಶ ಕಣಿವೆ ಅಧ್ಯಕ್ಷತೆ ವಹಿಸಿದ್ದರು. ರೋಚನಿ ರಾವ್ ಸ್ವಾಗತಿಸಿದರು, ಡಿಯೋನ್ ಕ್ಲೈವ್ ಡಿ ಸೋಜಾ ಪರಿಚಯಿಸಿದರು. ಐಶ್ವರ್ಯ ನಿರೂಪಿಸಿದರು. ಶ್ರೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ