ಮುಖ್ಯ ರಸ್ತೆಯಲ್ಲಿದ್ದ ವಿದ್ಯುತ್ ಕಂಬ ಸ್ಥಳಾಂತರ
Team Udayavani, Jul 27, 2018, 6:05 AM IST
ಶಿರ್ವ: ಕಟಪಾಡಿ-ಶಿರ್ವ- ಬೆಳ್ಮಣ್ ಮುಖ್ಯ ರಸ್ತೆಯ ಪಂಜಿಮಾರು ಪಲ್ಕೆ ಬಳಿ ರಸ್ತೆಯಲ್ಲಿಯೇ ಉಳಿದು ಕೊಂಡಿದ್ದ ವಿದ್ಯುತ್ ಕಂಬವನ್ನು ಗುರುವಾರ ಸ್ಥಳಾಂತರಗೊಳಿಸಲಾಗಿದೆ. ರಸ್ತೆ ಕಾಮಗಾರಿಯ ಡಾಮರು ಕಾಮಗಾರಿ ಮುಗಿದು ಏಳೆಂಟು ತಿಂಗಳು ಕಳೆದರೂ ಲೋಕೋಪಯೋಗಿ ಇಲಾಖೆ ಮತ್ತು ಮೆಸ್ಕಾಂನ ನಿರ್ಲಕ್ಷéದಿಂದಾಗಿ ಕಂಬಗಳನ್ನು ತೆರವುಗೊಳಿಸಿರಲಿಲ್ಲ. ಕಂಬ ರಸ್ತೆಯಲ್ಲಿದ್ದರೂ ತೆರವುಗೊಳಿಸದೆ ಗುತ್ತಿಗೆದಾರರು ಡಾಮರೀಕರಣ ನಡೆಸಿದ್ದರು.
ಉದಯವಾಣಿ ವರದಿಗೆ ಸ್ಪಂದನೆ
ವಿದ್ಯುತ್ ಕಂಬ ರಸ್ತೆ ಯಲ್ಲಿದ್ದು ಯಾವುದೇ ಅಪಾಯದ ಮುಂಜಾಗ್ರತಾ ಫಲಕ ಅಳವಡಿಸದೇ ಇರುವುದರ ಬಗ್ಗೆ ಪತ್ರಿಕೆ ಹಲವು ಬಾರಿ ಎಚ್ಚರಿಸಿತ್ತು. ಜು.13ರಂದು ಕಂಬವೇ ನನ್ನಿಂದ ನಿಮಗೆ ಅಪಾಯವಿದೆ, ದಯಮಾಡಿ ನನ್ನನ್ನು ರಸ್ತೆಯ ಬದಿಗೆ ನಿಲ್ಲಿಸಿ ಎಂಬ ಬರಹದ ಬೋರ್ಡ್ ಅಳವಡಿಸಿ ಸ್ಥಳೀಯ ನಾಗರಿಕರು ಲೋಕೋಪಯೋಗಿ ಇಲಾಖೆ ಮತ್ತು ಮೆಸ್ಕಾಂ ಅಧಿಕಾರಿಗಳನ್ನು ಎಚ್ಚರಿ ಸುವ ಪ್ರಯತ್ನ ನಡೆಸಿರುವುದರ ಬಗ್ಗೆ ಉದಯವಾಣಿ ಸಮಗ್ರ ವರದಿ ನೀಡಿತ್ತು. ಇದರಿಂದ ಎಚ್ಚೆತ್ತ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.ಇದೀಗ ಕಾಪು ಮೆಸ್ಕಾಂನ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಜೆ.ಪಿ. ರಾಮ, ಶಿರ್ವ ಮೆಸ್ಕಾಂನ ಶಾಖಾಧಿಕಾರಿ ಮಲ್ಲಿಕಾರ್ಜುನ್ ಮತ್ತು ಶಿರ್ವ ಗ್ರಾ.ಪಂ.ಸದಸ್ಯ ಕೆ.ಆರ್. ಪಾಟ್ಕರ್ ವಿದ್ಯುತ್ ಕಂಬಸ್ಥಳಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್