ಚರಂಡಿಯಲ್ಲಿ ವಿದ್ಯುತ್ ಕಂಬ ಅಳವಡಿಸಿದ ಮೆಸ್ಕಾಂ
Team Udayavani, May 15, 2019, 6:20 AM IST
ಅಜೆಕಾರು: ಕಾರ್ಕಳ ಪುರಸಭೆ ವ್ಯಾಪ್ತಿಯ ಭಾರತ್ ಬೀಡಿ ಕಾಲನಿಯಲ್ಲಿ ಮೆಸ್ಕಾಂ ಇಲಾಖೆಯವರು ನೀರು ಹರಿಯುವ ಚರಂಡಿಯ ನಡುವೆ ವಿದ್ಯುತ್ ಕಂಬ ಅಳವಡಿಸಿದ್ದು, ಇದೀಗ ಸ್ಥಳಿಯರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.
ಕಾಲನಿಯಲ್ಲಿ ಹಳೆ ವಿದ್ಯುತ್ ಕಂಬದ ಹತ್ತಿರ ಕಟ್ಟಡ ನಿರ್ಮಾಣಗೊಂಡಿದೆ. ಆ ಕಟ್ಟಡಕ್ಕೆ ವಿದ್ಯುತ್ ಕಂಬ ತೀರ ಹತ್ತಿರದಲ್ಲಿದ್ದು ಅಪಾಯ ಸಂಭಂವಿಸುವ ಸಾಧ್ಯತೆಗಳನ್ನು ಮನಗಂಡ ಮೆಸ್ಕಾಂ ಇಲಾಖೆಯವರು ಈಗ ಹೊಸ ಕಂಬವನ್ನು ಅಳವಡಿಸಿದ್ದಾರೆ.
ಆದರೆ ಹೊಸ ಕಂಬವನ್ನು ಮಳೆಗಾಲದಲ್ಲಿ ಮಳೆ ನೀರು ಹರಿಯುವ ಚರಂಡಿಯ ನಡುವೆ ಅಳವಡಿಸಿರುವುದರಿಂದ ಆ ಪರಿಸರದ ಮನೆಗಳ ಒಳಗೆ ಮಳೆ ನೀರು ನುಗ್ಗುವ ಸಂಭವ ಹೆಚ್ಚಾಗಿದೆ.
ಮುಂದಿನ ದಿನಗಳಲ್ಲಿ ಸ್ಥಳಿಯರಿಗೆ ಸಮಸ್ಯೆಗಳನ್ನು ತಂದೊಡ್ಡುವ ಸಂಭಾವ್ಯ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.
ಆದ್ದರಿಂದ ಈ ಕೂಡಲೇ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ವಿದ್ಯುತ್ ಕಂಬವನ್ನು ಚರಂಡಿಯಿಂದ ತೆಗೆದು ಬೇರೆಡೆ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್