ಇನ್ನಂಜೆ: ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ, 7 ಪಕ್ಷಿಗಳ ಸಹಿತ ಅಪಾರ ಸೊತ್ತು ನಷ್ಟ
Team Udayavani, Apr 10, 2023, 9:54 PM IST
ಕಾಪು : ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ಶಂಕರಪುರ ಸಮೀಪದ ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಕಂಚಿನಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಅರ್ಸಿಕಟ್ಟೆ ಕಂಚಿನಕೆರೆ ಬಳಿ ನಿವಾಸಿ ಜೋಸೆಫ್ ಲೋಬೋ ಅವರ ಪತ್ನಿ ನೀಮಾ ಜೋಸೆಫ್ ಲೋಬೋ ಅವರು ತನ್ನ ಮನೆಯ ಅಂಗಳದಲ್ಲಿ ಇರಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಆಕಸ್ಮಿಕ ಬೆಂಕಿಗೆ ಆಹುತಿಯಾಗಿದೆ.
ಮನೆಯವರ ಕಣ್ಣೆದುರೇ ಸ್ಕೂಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವಂತೆಯೇ ಸಂಪುರ್ಣವಾಗಿ ಸುಟ್ಟು ಕರಕಲಾಗಿ ಹೋಗಿ ಬಿಟ್ಟಿದೆ.
ಬೆಂಕಿಯ ಕೆನ್ನಾಲಗೆಯ ತೀವ್ರತೆಯಿಂದಾಗಿ ಮನೆಯಂಗಳದಲ್ಲಿ ಗೂಡಿನಲ್ಲಿದ್ದ ಏಳು ಪಕ್ಷಿಗಳು ಬೆಂದು ಮೃತಪಟ್ಟಿದ್ದು ಮನೆಯ ಜಗಲಿಯಲ್ಲಿ ಇರಿಸಿದ್ದ ಕೃಷಿ ಯಂತ್ರ, ಪಂಪ್ ಸೆಟ್ ಸಹಿತ ವಿವಿಧ ಉಪಕರಣಗಳಿಗೂ ಹಾನಿಯುಂಟಾಗಿದೆ. ಒಂದು ವರ್ಷದ ಹಿಂದೆಯಷ್ಟೇ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದು ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಿಂದಾಗಿ ಸುಮಾರು ಮೂರು ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಸೊತ್ತುಗಳು ನಷ್ಟ ಉಂಟಾಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಣ್ಣ ನೀರಾವರಿ ಇಲಾಖೆಯಿಂದ ದೊಡ್ಡ ಭ್ರಷ್ಟಾಚಾರ… ಸಾರ್ವಜನಿಕರ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ