ಕೊಲ್ಲೂರು ದೇವಸ್ಥಾನದ ಆನೆ ಇಂದಿರಾ ಅಂತ್ಯಕ್ರಿಯೆ


Team Udayavani, Aug 15, 2019, 6:28 AM IST

ane

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆ ಇಂದಿರಾ ಅಸೌಖ್ಯದಿಂದ ಚಿಕಿತ್ಸೆಗೆ ಸ್ಪಂದಿಸದೇ ಆ. 13ರ ರಾತ್ರಿ ಮೃತಪಟ್ಟ ಹಿನ್ನಲೆಯಲ್ಲಿ ಕೊಲ್ಲೂರಿನಲ್ಲಿ ಬುಧವಾರದಂದು ಶೋಕಾಚರಣೆಯ ಪ್ರಯುಕ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ ಆಚರಿಸಲಾಯಿತು.

ಸುಮಾರು 22 ವರುಷಗಳ ಹಿಂದೆ ಬಾಳೆಹೊನ್ನೂರಿನ ಉದ್ಯಮಿಯೋರ್ವರು ಕೊಲ್ಲೂರು ದೇಗುಲಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಿದ್ದ ೕ ಆನೆಯನ್ನು ಸಾಕಿ ಸಲಹಿ ಪೋಷಿಸಲಾಗಿತ್ತು. ಭಕ್ತರೊಡನೆ ಪುಂಡಾಟವಾಡದೆ ತಲೆಯಾಡಿಸುತ್ತ ಪ್ರಸಾದ ರೂಪದ ಬಾಳೆ ಹಣ್ಣನ್ನು ಸ್ವೀಕರಿಸುತ್ತಿದ್ದ ಸೌಮ್ಯ ಸ್ವಭಾವದ ಇಂದಿರಾ ಮಕ್ಕಳು ಸಹಿತ ವಯೋವೃದ್ಧರಿಗೆ ಸೊಂಡಿಲಿನ ಮೂಲಕ ಆಶೀರ್ವದಿಸುವ ಪರಿ ಭಕ್ತರ ಪಾಲಿಗೆ ಹೊಸ ಚೈತನ್ಯ ತುಂಬಿದಂತಾಗುತ್ತಿತ್ತು.

ಸಂಗಾತಿಯಿಂದ ಬೇರ್ಪಟ್ಟ ಇಂದಿರಾ:

ಹಲವಾರು ವರುಷಗಳ ಹಿಂದೆ ಇಂದಿರಾಗೆ ಸಂಗಾತಿಯಾಗಿ ಸಲಗವನ್ನು ಸಾಕಲಾಗಿತ್ತು. ಆದರೆ ಅದರ ಪುಂಡಾಟಿಕೆ ಹಾಗೂ ದುಂಡಾ ವರ್ತನೆಗೆ ಬೇಸತ್ತ ದೇಗುಲದ ಸಮಿತಿಯವರು ಸಕ್ರೆಬೈಲಿಗೆ ಅದನ್ನು ರವಾನಿಸಿದ್ದರು. ದೇಗುಲದ ಆನೆ ಬಾಗಿಲು ಬಳಿ ಭಕ್ತರನ್ನು ಸ್ವಾಗತಿಸುತ್ತಿದ್ದ ಇಂದಿರಾಳನ್ನು ಮೂಕಾಂಬಿಕಾ ಸಭಾಭವನದ ಸನಿಹದ ವಾಹನ ನಿಲುಗಡೆ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಇತ್ತೀಚೆಗೆ ಆಕೆಯನ್ನು ಕಲ್ಯಾಣಿ ಗುಡ್ಡೆಯಲ್ಲಿ ಶೆಡ್ಡ್ ನಿರ್ಮಿಸಿ ಅಲ್ಲೇ ವಾಸ್ತವ್ಯಕ್ಕೆ ವ್ಯವಸ್ಥೆಗೊಳಿಸಲಾಗಿತ್ತು.

ಮಾವುತ ಬಾಬು ಆನೆಯನ್ನು ನೋಡಿಕೊಳ್ಳುತ್ತಿದ್ದರು.

ಏನಾಯಿತು ಇಂದಿರೆಗೆ?

ಕಳೆದ 3 ದಿವಸಗಳಿಂದ ಜ್ವರದಿಂದ ಬಳಲುತ್ತಿದ್ದ 62 ವರುಷದ ಇಂದಿರಾಗೆ ತುರ್ತು ಚಿಕಿತ್ಸೆ ನೀಡಲು ಸಕ್ರೆಬೈಲಿನಿಂದ ತಜ್ಞ ವೈದ್ಯರು ಆಗಮಿಸಿ ಪರಿಶೀಲಿಸಿ ಚಿಕಿತ್ಸೆ ನೀಡಿದ್ದರೂ ಫಲಕಾರಿಯಾಗದೆ ಆ. 13ರ ರಾತ್ರಿ ಆಕೆ ಮೃತಪಟ್ಟಳು.

ಅರಣ್ಯ ಇಲಾಖಾಧಿಕಾರಿಗಳಿಂದ ಪರಿಶೀಲನೆ :

ಕುಂದಾಪುರ, ಕೊಲ್ಲೂರಿನ ಅರಣ್ಯಾಧಿಕಾರಿಗಳು ಸಹಿತ ವನ್ಯ ಜೀವಿ ವಿಭಾಗದ ಅಧಿಕಾರಿಗಳು ಕೊಲ್ಲೂರಿಗೆ ಆಗಮಿಸಿ ಆನೆಯ ಸಾವಿನ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದರು.

ಸಾವಿಗೆ ಉಲ್ಭಣಗೊಂಡ ರೋಗ ಕಾರಣವೇ ಅಥವಾ ಇನ್ನಿತರ ಯಾವುದೇ ಕಾರಣಗಳಿಂದ ಮೃತಪಟ್ಟಿರಬಹುದೇ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಮಹಜರು ಬಳಿಕ ದಹನ‌ :

ಸಕ್ರೆ ಬೈಲಿನ ವೈದ್ಯರ ತಂಡವು ಸುಮಾರು 6 ತಾಸು ಕಾಲ ಮರಣೋತ್ತರ ಪರೀಕ್ಷೆ ನಡೆಸಿ ದಹನ ಕಾರ್ಯಕ್ಕೆ ಇಂದಿರಾಳ ದೇಹವನ್ನು ಬಿಟ್ಟು ಕೊಟ್ಟರು.

ದೇಗುಲದಲ್ಲಿ ನಡೆದ ಗಜ ಪೂಜೆಯ ಅನಂತರ ಶಾಸ್ತ್ರೋಕ್ತವಾಗಿ ಧಾರ್ಮಿಕ ವಿಧಿವಿಧಾನ ನಡೆಸಿ ದಹನ‌ ಕಾರ್ಯಕ್ಕೆ ಅಣಿಮಾಡಿದರು.

15 ಅಡಿ ಗಾತ್ರದ ಹೊಂಡ ನಿರ್ಮಿಸಿ ಕಟ್ಟಿಗೆಯನ್ನು ಇಟ್ಟು ಅದರ ಮೇಲೆ ಇಂದಿರಾಳನ್ನು ಮಲಗಿಸಿ ತುಪ್ಪ, ಗಂಧವನ್ನು ಇಟ್ಟು ದಹನ ಕಾರ್ಯ ನಡೆಸಲಾಯಿತು.

ಗ್ರಾಮಸ್ಥರ ರೋದನೆ :

ಇಂದಿರಾ ಸಾವಿನಪ್ಪಿದ ಸುದ್ದಿ ತಿಳಿದೊಡನೆ ಸ್ಥಳಕ್ಕೆ ಆಗಮಿಸಿದ ಸಹಸ್ರಾರು ಗ್ರಾಮಸ್ಥರು ಸಹಿತ ಭಕ್ತರು ಕಣ್ಣೀರು ಇಟ್ಟು ಆಕೆಯ ಇತಿಹಾಸವನ್ನು ಮೆಲಕು ಹಾಕಿದರು.

ಪೊಲೀಸ್‌ ಬಂದೋಬಸ್ತ್ :

ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಕೊಲ್ಲೂರು ಪರಿಸರ ಸಹಿತ ಕಲ್ಯಾಣಿ ಗುಡ್ಡೆಯಲ್ಲಿ ನಡೆದ ದಹ‌ನ ಪ್ರದೇಶದಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಗಣ್ಯರ ನಮನ :

ಕೊಲ್ಲೂರು ದೇಗುಲದ ಮಾಜಿ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ್‌ ಗಾಣಿಗ, ಅಭಿಲಾಷ್‌, ನರಸಿಂಹ ಹಳಗೇರಿ, ಅಂಬಿಕಾ ದೇವಾಡಿಗ, ಅರ್ಚಕರು, ಸಿಬಂದಿಗಳು ಸೇರಿದಂತೆ ಇನ್ನಿತರ ಅನೇಕ ಗಣ್ಯರು ಇಂದಿರಾಗೆ ಮಾಲಾರ್ಪಣೆ ಮಾಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.