ಉದ್ಯೋಗ ಖಾತ್ರಿ: ನಾಲ್ಕೂರು ಗ್ರಾ.ಪಂ. ಜಿಲ್ಲೆಗೆ ಪ್ರಥಮ

18,515 ಮಾನವ ದಿನ ಸೃಜನೆ ; ಕೆರೆಗಳ ಪುನರುಜ್ಜೀವನ

Team Udayavani, Jan 26, 2022, 6:12 PM IST

ಉದ್ಯೋಗ ಖಾತ್ರಿ: ನಾಲ್ಕೂರು ಗ್ರಾ.ಪಂ. ಜಿಲ್ಲೆಗೆ ಪ್ರಥಮ

ಬ್ರಹ್ಮಾವರ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ 2021-22ನೇ ಸಾಲಿನಲ್ಲಿ ನಾಲ್ಕೂರು ಗ್ರಾ.ಪಂ. ಜಿಲ್ಲೆಯಲ್ಲೇ ಪ್ರಥಮ ಸ್ಥಾನದಲ್ಲಿದೆ. ಅತಿ ಹೆಚ್ಚು ಮಾನವ ದಿನಗಳನ್ನು ಸೃಜಿಸುವುದರೊಂದಿಗೆ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ. ಪ್ರಸ್ತುತ ಸಾಲಿನಲ್ಲಿ ನಾಲ್ಕೂರು ಗ್ರಾ.ಪಂ.ಗೆ 18,260 ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಈಗಾಗಲೇ 18,515 ಮಾನವ ದಿನಗಳನ್ನು ಸೃಜನೆ ಮಾಡುವುದರೊಂದಿಗೆ ಪಂಚಾಯತ್‌ ಗುರಿ ದಾಟಿದೆ. 50 ಲ.ರೂ. ಕಾಮಗಾರಿ ಪೂರೈಸಿದೆ.

ಸಮಗ್ರ ಅಭಿವೃದ್ಧಿ
ಪಂಚಾಯತ್‌ನಲ್ಲಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಯಾಗಿ 33 ಕೃಷಿ ಬಾವಿ, 12 ಗೊಬ್ಬರ ಗುಂಡಿ, ಎರೆಹುಳು ಗೊಬ್ಬರ ತೊಟ್ಟಿ, ದನದ ಹಟ್ಟಿ, ಬಚ್ಚಲುಗುಂಡಿ, ಕೋಳಿಗೂಡು ಹಾಗೂ ಇತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸಮುದಾಯ ಕಾಮಗಾರಿಗಳಾದ ಕೆರೆ ಹಾಗೂ ತೋಡುಗಳನ್ನು ಹೂಳೆತ್ತುವ ಕಾರ್ಯ ನಡೆದಿವೆ.

ಮುಚ್ಚಿ ಹೋಗಿದ್ದ ಕೆರೆಗೆ ಮರು ಜೀವ
ನಾಲ್ಕೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮುದಾಯ ಕೆರೆ ಹೂಳೆತ್ತುವ ಕಾಮಗಾರಿ ಯಶಸ್ವಿಯಾಗಿ ಅನುಷ್ಠಾನ ಗೊಂಡಿದ್ದು, ಸಂಪೂರ್ಣ ಬತ್ತಿ ಹೋಗಿದ್ದ ಬಾಳೆಗುಂಡಿ ಆಚಾರಡಿ ಕೆರೆಗೆ ಮರುಜೀವ ನೀಡಲಾಗಿದೆ. ನರೇಗಾ ಅಡಿ ದುರಸ್ತಿಗೊಳಿಸಿ ಹೂಳೆತ್ತಲಾಗಿದ್ದು ಜೀವಸೆಲೆ ಬಂದಿದೆ.

ಈ ಕಾಮಗಾರಿಗಾಗಿ 2,74,482 ರೂ. ವೆಚ್ಚವಾಗಿದ್ದು 918 ಮಾನವ ದಿನಗಳನ್ನು ಸೃಜಿಸಲಾಗಿದೆ. ಹೂಳೆತ್ತುವ ಮುನ್ನ ಕೆರೆ ಸಂಪೂರ್ಣ ಮುಚ್ಚಿ ಹೋಗಿತ್ತು. ಕೆರೆಯ ಸುತ್ತಲೂ ಕಲ್ಲುಗಳನ್ನು ಜೋಡಿಸಿ ಕುಸಿಯದಂತೆ ದುರಸ್ತಿ ಮಾಡಲಾಗಿದೆ. ಕಳೆದ ಮಳೆಗೆ ಕೆರೆ ತುಂಬಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಾಗಿದೆ. ಗ್ರಾಮಸ್ಥರಿಗೆ ನೀರಿನ ಆಸರೆಯಾಗಿದೆ.

ತೋಟಗಾರಿಕೆ ಸೇರಿದಂತೆ ವೈಯಕ್ತಿಕ ಕಾಮಗಾರಿಗಳ ಅನುಷ್ಠಾನಕ್ಕೂ ಫಲಾನುಭವಿಗಳಿಂದ ಬಹಳಷ್ಟು ಬೇಡಿಕೆಯಿದೆ. ಯೋಜನೆಯಡಿ ಗೊಬ್ಬರ ಗುಂಡಿ ಹಾಗೂ ಎರೆಹುಳು ಗೊಬ್ಬರ ತೊಟ್ಟಿ ರಚನೆಯಿಂದ ಕೃಷಿಗೆ
ಉತ್ತಮ ಗೊಬ್ಬರ ಲಭ್ಯವಾಗುತ್ತಿದೆ. ನರೇಗಾ
ಯೋಜನೆ ಗ್ರಾಮೀಣ ಜನರಿಗೆ ವರದಾನವೆಂದರೂ ತಪ್ಪಾಗದು.

ಬಹೂಪಯೋಗಿ ಯೋಜನೆ
ನಾಲ್ಕೂರು ಪಂಚಾಯತ್‌ನಲ್ಲಿ ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿದ್ದು, ನರೇಗಾ ಯೋಜನೆಯಡಿ ಉದ್ಯೋಗ ಸೃಜನೆಗೆ ಒತ್ತು ನೀಡಲಾಗಿ ಫಲಾನುಭವಿಗಳಿಗೆ ಅನುಕೂಲವಾಗಿದೆ. ಮನೆಗಳಲ್ಲಿ ಬಾವಿ ನಿರ್ಮಾಣ ಕಾಮಗಾರಿಗಳ ಮೂಲಕ ನೀರಿನಕೊರತೆ ನೀಗಿಸಲಾಗುತ್ತಿದೆ. ಪಂಚಾಯತ್‌ನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ನರೇಗಾ ಸಹಕಾರಿಯಾಗಿದೆ ಎಂದು ನಾಲ್ಕೂರು ಪಂಚಾಯತ್‌ ಅಭಿವೃದ್ಧಿ ಅಧಿ ಕಾರಿ ಸೀತಾರಾಮ್‌ ಅವರು ತಿಳಿಸಿದ್ದಾರೆ.

ಸದುಪಯೋಗಪಡಿಸಿಕೊಳ್ಳಿ
ಬ್ರಹ್ಮಾವರ ತಾಲೂಕಿನ ನಾಲ್ಕೂರು, ಬಿಲ್ಲಾಡಿ, ಆವರ್ಸೆ ಗ್ರಾ.ಪಂ.ಗಳು ನರೇಗಾ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿವೆ. ವೈಯಕ್ತಿಕ ಕಾರ್ಯಗಳಿಗೆ ಅವಕಾಶವಿರುವುದರಿಂದ ಎಲ್ಲ ಪಂಚಾಯತ್‌ ಗಳಲ್ಲಿ ಜನರು ಇನ್ನಷ್ಟು ಮಾಹಿತಿ ಪಡೆದು ಈ ಅತ್ಯುತ್ತಮ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.
-ನಂದಕಿಶೋರ್‌,
ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು

ಎಲ್ಲರಿಗೂ ಪ್ರಯೋಜನ
ಮದಗ, ಕೆರೆ ಅಭಿವೃದ್ಧಿಯಂತಹ ಸಾಮೂಹಿಕ ಕಾಮಗಾರಿಯಿಂದ ಆ ಪರಿಸರದಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ. ನರೇಗಾದ ಅಡಿ ಹಲವಾರು ವೈಯಕ್ತಿಕ ಕಾಮಗಾರಿ ನಡೆಸಲು ಅವಕಾಶವಿರುವುದರಿಂದ ಎಲ್ಲರಿಗೂ ಪ್ರಯೋಜನಕಾರಿಯಾಗಿದೆ.
-ಪ್ರಕಾಶ್‌ ನಾಯ್ಕ,
ಅಧ್ಯಕ್ಷರು, ನಾಲ್ಕೂರು ಗ್ರಾ.ಪಂ.

– ಪ್ರವೀಣ್‌ ಮುದ್ದೂರು

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.