ಶ್ರೀಕೃಷ್ಣ ಮಠ: ವಿಶ್ವಾರ್ಪಣ ಕೃಷ್ಣಾರ್ಪಣ


Team Udayavani, Dec 27, 2021, 6:20 AM IST

ಶ್ರೀಕೃಷ್ಣ ಮಠ: ವಿಶ್ವಾರ್ಪಣ ಕೃಷ್ಣಾರ್ಪಣ

ಉಡುಪಿ: ಎಲ್ಲ ಸ್ವಾಮೀಜಿಯವರ ಸಹಕಾರದಿಂದ ಪರ್ಯಾಯ ಪೂಜಾವಧಿ ತೃಪ್ತಿದಾಯಕವಾಗಿ ಮುಕ್ತಾಯಗೊಳ್ಳುತ್ತಿದೆ. ಏನಾದರೂ ಯಶಸ್ವಿಯಾದರೆ ಅದು ಇತರರ ಸಹಕಾರದಿಂದ ಎಂದು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಶ್ರೀ ಕೃಷ್ಣಮಠ, ಪರ್ಯಾಯ ಅದಮಾರು ಮಠದ ವತಿಯಿಂದ ರವಿವಾರ ರಾಜಾಂಗಣದಲ್ಲಿ ನಡೆದ “ವಿಶ್ವಾರ್ಪಣಮ್‌’ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅನುಗ್ರಹ ಸಂದೇಶ ನೀಡಿದರು.

ಅದಮಾರು ಮಠದಿಂದ ನೀಡುವ ದ್ವಿತೀಯ ವರ್ಷದ 50,000 ರೂ. ನಗದು ಒಳಗೊಂಡ “ಶ್ರೀ ನರಹರಿತೀರ್ಥ ಪ್ರಶಸ್ತಿ’ಯನ್ನು ಯಕ್ಷಗಾನ ಕ್ಷೇತ್ರದಲ್ಲಿ 5 ದಶಕಗಳ ಸಾಧಕ ಶ್ರೀಪಾದ ತಿಮ್ಮಪ್ಪ ಭಟ್ಟ ಸಾಲ್ಕೋಡು ಅವರಿಗೆ ಶ್ರೀಪಾದರು ಪ್ರದಾನ ಮಾಡಿದರು.

ದೇವರ ಅನುಗ್ರಹದಿಂದ ನಮಗೆ ಸಿಕ್ಕಿದ ಶಿಷ್ಯರಿಂದ ಪರ್ಯಾಯ ಪೂಜಾ ಉತ್ಸವ ಯಶಸ್ವಿಯಾಗಿ ನಡೆಯಿತು ಎಂದು ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ತೃಪ್ತಿ ವ್ಯಕ್ತಪಡಿಸಿದರು.

ಏನು ಇದೆಯೋ ಅದನ್ನು ಸಮ ರ್ಪಿಸುವುದೇ ಯಜ್ಞ. ಈ ದಿನ ಶ್ರೀಈಶ ಪ್ರಿಯತೀರ್ಥ ಶ್ರೀಪಾದರು ತನ್ನೆಲ್ಲವನ್ನೂ ಕೃಷ್ಣನಿಗೆ ಸಮರ್ಪಿಸಿದ್ದಾರೆ ಎಂದು ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.

ಕೊರೊನಾ ಕಾಲಘಟ್ಟದಲ್ಲಿಯೂ ಆಚಾರ್ಯ ಮಧ್ವರಿದ್ದು ಶ್ರೀಈಶ ಪ್ರಿಯತೀರ್ಥರು ಪರ್ಯಾಯ ಪೂಜಾವಧಿ ನೆರವೇರಿಸಿಕೊಂಡರು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

ಇರುವೆಗಳು ಸಿಹಿ ಇರುವಲ್ಲಿ ಹೋಗು ವಂತೆ ಅದಮಾರು ಶ್ರೀಗಳು ಕೃಷ್ಣನ ಪೂಜೆಯನ್ನು ಶ್ರದ್ಧೆಯಿಂದ ಮಾಡಿದರು ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಎಂದರು.

ನಾವು ಹೊರಗೆ ಅನುರೇಣು ತೃಣ ಕಾಷ್ಠದಲ್ಲಿ ದೇವರನ್ನು ನೋಡುತ್ತೇವೆ. ಆದರೆ ನಮ್ಮೊಳಗಿರುವ ದೇವರನ್ನು ಕಾಣಬೇಕು ಎನ್ನುವುದು ಶ್ರೀಕೃಷ್ಣನ ಸಂದೇಶ. ಇಂತಹ ಗುಣವನ್ನು ಹೊಂದಿರುವುದರಿಂದಲೇ ಅದಮಾರು ಶ್ರೀಗಳ ಪರ್ಯಾಯ ಯಶಸ್ವಿಯಾಗಿದೆ ಎಂದು ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ನುಡಿದರು.

ಪಲಿಮಾರು ಮಠದ ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಕೆನರಾ ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕ ಬೃಜ್‌ ಮೋಹನ್‌ ಶರ್ಮ, ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಆಸ್ರಣ್ಣ, ನಿವೃತ್ತ ಅಧಿಕಾರಿ ಟಿ. ಶ್ಯಾಮ ಭಟ್‌, ಉದ್ಯಮಿ ಸಿ.ಆರ್‌. ಬಾಲಕೃಷ್ಣ ಭಟ್‌ ಚೆನ್ನೈ ಪಾಲ್ಗೊಂಡರು.

ಶಾಸಕ ಕೆ. ರಘುಪತಿ ಭಟ್‌, ಪಿಪಿಸಿ ಸಂಸ್ಕೃತ ಪ್ರಾಧ್ಯಾಪಕ ಡಾ| ಟಿ.ಎಸ್‌.ರಮೇಶ್‌, ವಿದ್ವಾಂಸ ವಿ| ಹೆರ್ಗ ರವೀಂದ್ರ ಭಟ್‌,  ಕಲಾವಿದ ಪ್ರಾದೇಶ ಆಚಾರ್ಯ ಬೆಂಗಳೂರು, ಯಕ್ಷಗಾನ ಕಲಾವಿದ ವಾಸುದೇವ ರಂಗಾ ಭಟ್ಟ, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ,  ಕಲಾ ಸಂಘಟಕ ಪುರುಷೋತ್ತಮ ಅಡ್ವೆ ಅವರನ್ನು ಸಮ್ಮಾನಿಸಲಾಯಿತು. ಮಠದ ವ್ಯವಸ್ಥಾಪಕ ಗೋವಿಂದರಾಜ್‌ ಸ್ವಾಗತಿಸಿ ಕುತ್ಪಾಡಿ ಕೃಷ್ಣರಾಜ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.