39 ವರ್ಷ ಕಳೆದರೂ ಎಂಡೋಸಲ್ಫಾನ್‌ ಸಮಸ್ಯೆ ಜೀವಂತ


Team Udayavani, Mar 3, 2019, 12:30 AM IST

0203udks5.jpg

ಉಡುಪಿ: ಎಂಡೋಸಲ್ಫಾನ್‌ ಸಿಂಪಡಣೆ ಆಗಿ 39 ವರ್ಷ ಕಳೆದಿವೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ, ಹುಟ್ಟುವ ಮಕ್ಕಳೂ ಸೇರಿದಂತೆ ಅನೇಕ ಮಂದಿ ಇನ್ನೂ ಇದರಿಂದ ನರಳುತ್ತಿದ್ದಾರೆ ಎಂದು ಸಚಿವೆ ಡಾ| ಜಯಮಾಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಶನಿವಾರ, ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್‌ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮಣ್ಣು ಮತ್ತು ನೀರಿನಲ್ಲಿ ಬೆರೆತಿರುವ ಎಂಡೋಸಲ್ಫಾನ್‌ ತೀವ್ರತೆ ಇನ್ನೂ ಎಷ್ಟು ವರ್ಷ ಇರಬಹುದು ಎಂಬ ಬಗ್ಗೆ ವೈಜ್ಞಾನಿಕ ರೀತಿಯಲ್ಲಿ ನುರಿತ ತಜ್ಞರಿಂದ ಪರಿಶೀಲನೆ ನಡೆಸಿ, ಸಂತ್ರಸ್ತರ ಸಮಸ್ಯೆಗಳನ್ನು ತಳಮಟ್ಟದಿಂದ ಬಗೆ ಹರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಎಂಡೋ ಪೀಡಿತರನ್ನು ಸರಿಯಾಗಿ ಗುರುತಿಸುವ ಕಾರ್ಯ ಆಗಿಲ್ಲ ಎಂಬ ದೂರು ಬರುತ್ತಿದ್ದು, ಎಂಡೋ ಸಿಂಪಡಣೆ ಸ್ಥಳದ ಬೀಸುವ ಗಾಳಿ ಮತ್ತು ಹರಿಯುವ ನೀರಿನಿಂದ ಸಮೀಪದ ಗ್ರಾಮಗಳಿಗೂ ಹರಡಿರುವ ಸಾಧ್ಯತೆಗಳಿವೆ. ಈ ಬಗ್ಗೆ ಎಂಡೋ ಪೀಡಿತ ಮತ್ತು ಪಕ್ಕದ ಗ್ರಾಮಗಳಲ್ಲಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಮನೆ ಮನೆ ಸಮೀಕ್ಷೆ ನಡೆಸಿ, ಅರ್ಹರನ್ನು ಗುರುತಿಸಿ ಸೌಲಭ್ಯ ವಿತರಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ಕರಾವಳಿ ಜಿಲ್ಲೆಗಳ ಜಂಟಿ ಸಭೆ
ಉಡುಪಿ, ದ.ಕ., ಉ.ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಂಡೋ ಪೀಡಿತ ಸಂತ್ರಸ್ತರಿಗೆ ಒದಗಿಸಬೇಕಾದ ಸೌಲಭ್ಯಗಳ ಕುರಿತು 4 ಜಿಲ್ಲೆಗಳ ಜಂಟಿ ಸಭೆ ನಡೆಸುವುದಾಗಿ ತಿಳಿಸಿದ ಸಚಿವೆ, ಜಿಲ್ಲೆಯ ಎಂಡೋ ಪೀಡಿತರನ್ನು ಖುದ್ದಾಗಿ ತೆರಳಿ ವೀಕ್ಷಿಸಿ ಅವರಲ್ಲಿ ಕೆಲಸ ಮಾಡುವ ಸಾಮರ್ಥ್ಯ ಇರುವವರಿಗೆ ಕೌಶಲ ತರಬೇತಿ ನೀಡಲು ಪ್ರತ್ಯೇಕ ಘಟಕ ಆರಂಭಿಸುವುದಾಗಿ ತಿಳಿಸಿದರು.

ಅತ್ಯಾಧುನಿಕ ಸೌಲಭ್ಯದ ಆಸ್ಪತ್ರೆ
ಎಂಡೋ ಪೀಡಿತರ ಶಾಶ್ವತ ಪುನರ್ವಸತಿಗಾಗಿ ನಾಡಾ ಗ್ರಾಮದ ಸೇನಾಪುರದಲ್ಲಿ 5 ಎಕ್ರೆ ಜಾಗ ಗುರುತಿಸಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಶಾಶ್ವತ ಪುನರ್ವಸತಿಗೆ ಕನಿಷ್ಠ 10 ಎಕ್ರೆ ಜಾಗ ಮೀಸಲಿಡುವಂತೆ ಮತ್ತು ದುಬೈಯಲ್ಲಿ ಅಂಗವಿಕಲರಿಗೆ ಚಿಕಿತ್ಸೆ ನೀಡುವ ವಿಶೇಷ ಆಸ್ಪತ್ರೆ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಚಿಕಿತ್ಸಾ ಕೇಂದ್ರ ತೆರೆಯಬೇಕು. ವಿದೇಶಗಳಲ್ಲಿನ ವೈದ್ಯರ ನೆರವು ಪಡೆದು ಸೂಕ್ತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಬೇಕು. ಕೇಂದ್ರದ ನಿರ್ಮಾಣಕ್ಕೆ ಅನುದಾನದ ಸಮಸ್ಯೆ ಇಲ್ಲ, ಶೀಘ್ರದಲ್ಲಿ ಸಮಗ್ರ ಯೋಜನಾ ವರದಿಯೊಂದಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು. ಎಂಡೋ ಪೀಡಿತರಿಗೆ ನೀಡುವ ಸಾಧನ ಸಲಕರಣೆಗಳನ್ನು ವಿಕಲಚೇತನ ಇಲಾಖೆಯಿಂದ ಒದಗಿಸಲಾಗುವುದು ಎಂದರು.

ಪಿಂಚಣಿಯನ್ನು ಆರ್‌ಟಿಜಿಎಸ್‌ ಮೂಲಕ ನೀಡಲು ಕ್ರಮ ಕೈಗೊಳ್ಳಿ. ಕನಿಷ್ಠ ಪ್ರತಿ 3 ತಿಂಗಳಿಗೊಮ್ಮೆ ಸಮಿತಿಯ ಸಭೆ ಕರೆದು ಸೌಲಭ್ಯಗಳನ್ನು ವಿತರಿಸಿ ಎಂದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.