“ಉದಯವಾಣಿ’ ಕಚೇರಿಯಲ್ಲಿ ಪರಿಸರ ದಿನಾಚರಣೆ: ಕರಾವಳಿಯಲ್ಲಿ 3,500 ಕೆ.ಜಿ. ಅರಣ್ಯ ಬೀಜ ಬಿತ್ತನೆ


Team Udayavani, Jun 5, 2022, 6:30 AM IST

“ಉದಯವಾಣಿ’ ಕಚೇರಿಯಲ್ಲಿ ಪರಿಸರ ದಿನಾಚರಣೆ: ಕರಾವಳಿಯಲ್ಲಿ 3,500 ಕೆ.ಜಿ. ಅರಣ್ಯ ಬೀಜ ಬಿತ್ತನೆ

ಮಣಿಪಾಲ: ಪರಿಸರ ದಿನದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ಜೂ. 5ರಿಂದ 12ರ ವರೆಗೆ 40 ಬಗೆಯ ಸಸಿಗಳ 3,500 ಕೆ.ಜಿ. ಬೀಜವನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತದೆ ಎಂದು ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ನೆಟಾಲ್ಕರ್‌ ತಿಳಿಸಿದರು.

ಉದಯವಾಣಿ ವತಿಯಿಂದ ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶನಿವಾರ ಉದಯ ವಾಣಿ ಮಣಿಪಾಲ ಕೇಂದ್ರ ಕಚೇರಿ ಯಲ್ಲಿ ಆಯೋಜಿಸಿದ್ದ ಪರಿಸರ ದಿನಾ ಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ವಿಶೇಷ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ಗ್ರಾ.ಪಂ., ತಾ. ಪಂ. ಮಟ್ಟ ದಲ್ಲಿ ಶಾಲೆ, ಕಾಲೇಜು, ವಿವಿಧ ಇಲಾಖೆ, ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ ಎಂದರು.

ಮುಂದಿನ ಪೀಳಿಗೆಗಾಗಿ ಉಳಿಸೋಣ
ಸರಕಾರ ಮತ್ತು ಮಾಧ್ಯಮಗಳ ಸಹಭಾಗಿತ್ವದಿಂದ ಪರಿಸರ ಸಂರಕ್ಷಣೆ ಕೆಲಸ ಪರಿಣಾಮಕಾರಿಯಾಗಿ ನಡೆಯಲು ಸಾಧ್ಯವಿದೆ. ಮುಂದಿನ ಪೀಳಿಗೆಗೆ ಕಾಡು, ನದಿ, ಬೆಟ್ಟ ಇವುಗಳನ್ನು ಇದ್ದ ಹಾಗೇ ಉಳಿಸಿಕೊಂಡು ಮುನ್ನಡೆಯೋಣ. ಹಿಂದಿನವರು ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಬಿಟ್ಟು ಹೋದ ಕಾರಣ ನಮಗೆ ಸಿಕ್ಕಿದೆ. ಈ ಪ್ರಜ್ಞೆಯೊಂದಿಗೆ ವಿಶ್ವ ಪರಿಸರ ದಿನದ ಆಶಯ, ಕಾಳಜಿ ನಿರಂತರ ಇರಬೇಕು ಎಂದು ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಆಶಿಸಿದರು.

ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರು ಅಧ್ಯಕ್ಷತೆ ವಹಿಸಿ, ಮರಗಳಿಂದ ಮಳೆ, ಮಳೆಯಿಂದ ಬೆಳೆ, ಬೆಳೆಯಿಂದ ಬದುಕು-ಈ ಸೂತ್ರವನ್ನು ಮರೆತರೆ, ಒಂದು ಕೊಂಡಿ ತಪ್ಪಿದರೆ ಅಪಾಯ ಎಂದು ಎಚ್ಚರಿಸಿದರು.

ಕುಂದಾಪುರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಆಶಿಶ್‌ ರೆಡ್ಡಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಪರಿಸರ ದಿನದ ಸಂದೇಶ ನೀಡಿದರು. ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ಉಪಸ್ಥಿತರಿದ್ದರು.

ಎಂಎಂಎನ್‌ಎಲ್‌ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ವಿನೋದ್‌ ಕುಮಾರ್‌ ಸ್ವಾಗತಿಸಿದರು. ಡಿಜಿಎಂ (ವ್ಯಾಪಾರ ಮತ್ತು ಅಭಿವೃದ್ಧಿ) ಸತೀಶ್‌ ಶೆಣೈ ವಂದಿಸಿದರು. ಎಚ್‌.ಆರ್‌. ವಿಭಾಗದ ವ್ಯವಸ್ಥಾಪಕಿ ಉಷಾರಾಣಿ ಕಾಮತ್‌ ನಿರೂಪಿಸಿದರು.

ಸಾರ್ವಜನಿಕರಿಗೆ ಸಸಿ ವಿತರಣೆ
ರಕ್ತಚಂದನ, ಮಹಾಗನಿ, ತೇಗ, ಪುನರ್ಪುಳಿ, ಲಿಂಬೆ, ಕಾಳು ಮೆಣಸಿನ ಬಳ್ಳಿ, ಹಲಸು, ಮಾವು, ನೆಲ್ಲಿ, ಸೀತಾಫ‌ಲ ಸಹಿತ ವಿವಿಧ ತಳಿಯ ಸಾವಿರಕ್ಕೂ ಅಧಿಕ ಸಸಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಶಾಲಾ ಮಕ್ಕಳಿಗೆ ಸಸಿ ವಿತರಿಸುವ ಮೂಲಕ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಸಸಿ ಪಡೆಯಲು ಬೆಳಗ್ಗೆ 10 ಗಂಟೆಗೆ ಬಂದಿದ್ದು, ಮಧ್ಯಾಹ್ನ 12 ಗಂಟೆಯೊಳಗೆ ಎಲ್ಲ ಸಸಿಗಳನ್ನು ಪಡೆದುಕೊಂಡದ್ದು ವಿಶೇಷವಾಗಿತ್ತು. ಗಣ್ಯರು ಜತೆ ಸೇರಿ ಸಸ್ಯವನ್ನು ನೆಟ್ಟರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.