“ಪ್ರಕೃತಿ ಅಸಮತೋಲನಕ್ಕೆ ಪರಿಸರ ನಾಶವೇ ಕಾರಣ’
Team Udayavani, Jul 20, 2019, 5:09 AM IST
ಬ್ರಹ್ಮಾವರ: ಪ್ರಕೃತಿಯಲ್ಲಿ ಆಗುವ ಅಸಮತೋಲನಕ್ಕೆ ಪರಿಸರ ನಾಶವೇ ಕಾರಣ ಎಂದು ಹೆಬ್ರಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ಹೇಳಿದರು.
ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಪ್ರಾಥಮಿಕ ವಿಭಾಗದಲ್ಲಿ ಹೆಬ್ರಿ ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸ ವದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಗಿಡ ಮರಗಳ ರಕ್ಷಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು. ಗಿಡಗಳನ್ನು ಗೆಳೆಯರಂತೆ ಪ್ರೀತಿಸಬೇಕು. ನೆಟ್ಟ ಗಿಡಗಳನ್ನು ಪೋಷಣೆ ಮಾಡುವುದರ ಮೂಲಕ ಪರಿಸರ ಪ್ರಜ್ಞೆಯನ್ನು ಬೆಳೆಸಿ ಕೊಳ್ಳಬೇಕು ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ ಸುವರ್ಣ ಅವರು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದರು.ಮುಖ್ಯೋಪಾಧ್ಯಾಯ ಭಾಸ್ಕರ್ ಪೂಜಾರಿ ಅವರು ವನಮಹೋತ್ಸವದ ಮಾಹಿತಿ ನೀಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷೆ ಯಶೋದಾ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯ ವಸಂತ ಸೇರ್ವೆಗಾರ್, ಫಾರೆಸ್ಟರ್ ಮಂಜು ಗಾಣಿಗ, ಸಿಬಂದಿ ಉಪಸ್ಥಿತರಿದ್ದರು. ಹಿರಿಯ ಸಹ ಶಿಕ್ಷಕಿ ಗುಲಾಬಿ ಸ್ವಾಗತಿಸಿ, ಸಹ ಶಿಕ್ಷಕಿ ಆಶಾಕಿರಣ ನಿರೂಪಿಸಿದರು.ಗೌರವ ಶಿಕ್ಷಕಿ ಯಶೋದಾ ವಂದಿಸಿ, ಗೌರವ ಶಿಕ್ಷಕಿಯರಾದ ಪ್ರೀತಿ, ರೇಷ್ಮಾ, ಸವಿತಾ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ