ಶಿರ್ವ: ರಸ್ತೆ ವಿಭಾಜಕದಲ್ಲಿ ಹೂವಿನ ಗಿಡಗಳನ್ನು ಬೆಳೆಸಿ, ಪರಿಸರ ಪ್ರೇಮ ಮೆರೆಯುವ ಟೆಂಪೋ ಚಾಲಕ


Team Udayavani, Jan 24, 2020, 10:35 AM IST

00

ಶಿರ್ವ: ಸ್ವಚ್ಛ ಶಿರ್ವ-ಸುಂದರ ಶಿರ್ವ ಪರಿಕಲ್ಪನೆಯಡಿಯದಲ್ಲಿ ಶಿರ್ವದ ಗೂಡ್ಸ್‌ ಟೆಂಪೋ ಚಾಲಕ-ಮಾಲಕ ಜಾಫರ್‌ ಸಾಹೇಬ್‌ ಶಿರ್ವ ಮಂಚಕಲ್‌ ಪೇಟೆಯ ಮಧ್ಯಭಾಗದಲ್ಲಿರುವ ರಸ್ತೆ ವಿಭಾಜಕದಲ್ಲಿ ಮಳೆಗಾಲದಲ್ಲಿ ಮಣ್ಣು ತುಂಬಿಸಿ ಸುಮಾರು 300 ಮೀ.ಜಾಗದಲ್ಲಿ ಆಕರ್ಷಕ ಹೂವಿನ ಗಿಡಗಳನ್ನು ಬೆಳೆಸಿ,ನೀರುಣಿಸಿ ಪರಿಸರ ಪ್ರೇಮ ಮೆರೆದಿದ್ದಾರೆ.

ಮಳೆಗಾಲದಲ್ಲಿ ರಸ್ತೆ ವಿಭಾಜಕದ ಮಧ್ಯೆ ಹಾಕಿದ ಮಣ್ಣಿನಲ್ಲಿ ಹುಲ್ಲು ಕಸಕಡ್ಡಿ ಬೆಳೆದಿತ್ತು. ಇದನ್ನು ನೋಡಿದ ಜಾಫರ್‌ ಸಾಹೇಬರು ತನ್ನ ಬಿಡುವಿನ ವೇಳೆಯಲ್ಲಿ ಟೆಂಪೋ ಸ್ಟಾಂಡ್‌ನ‌ ಎದುರುಗಡೆಯ ರಸ್ತೆ ವಿಭಾಜಕದಲ್ಲಿ ಮಣ್ಣು ತುಂಬಿಸಿ ಮಳೆಗಾಲದಲ್ಲಿ ಹೂವಿನ ಗಿಡ ನೆಟ್ಟಿದ್ದಾರೆ. ಅಲ್ಲಲ್ಲಿ ಬಿಸಾಡಿದ ಪ್ಲಾಸ್ಟಿಕ್‌ ಬಾಟಲ್‌ಗ‌ಳನ್ನು ಹೆಕ್ಕಿ ತಂದು ನೀರು ತುಂಬಿಸಿ ಮುಚ್ಚಳಕ್ಕೆ ತೂತು ಕೊರೆದು ಕೋಲಿನ ಸಹಾಯದಿಂದ ಗಿಡಗಳ ಬುಡದಲ್ಲಿ ಕಟ್ಟಿ ಹನಿ ನೀರುಹಾಯಿಸುತ್ತಿದ್ದಾರೆ. ಇದರಿಂದಾಗಿ ಬಿರು ಬಿಸಿಲಿನ ಪೇಟೆಯ ವಾತಾವರಣದಲ್ಲಿ ಡಾಂಬರು ರಸ್ತೆಯ ಬದಿಯಲ್ಲಿಯೂ ಗಿಡಗಳ ಬುಡದಲ್ಲಿ ತೇವಾಂಶ ಕಾಯ್ದುಕೊಂಡಿದ್ದು ಹಸುರಾಗಿವೆ.

ಶಿರ್ವ ಮಂಚಕಲ್‌ ಪೇಟೆಯ ಮಧ್ಯೆ ಹಾದು ಹೋಗುವ ಆತ್ರಾಡಿ-ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಿಂದ ಪೆಟ್ರೋಲ್‌ ಪಂಪ್‌ನವರೆಗೆ ರಸ್ತೆ ವಿಭಾಜಕದೊಂದಿಗೆ ದ್ವಿಪಥ ರಸ್ತೆ ನಿರ್ಮಾಣಗೊಂಡು ವರುಷಗಳೇ ಕಳೆದಿವೆ.ಆದರೆ ಲೋಕೋಪಯೋಗಿ ಇಲಾಖೆ ರಸ್ತೆ ವಿಭಾಜಕದಲ್ಲಿ ಹಳೆಯ ರಸ್ತೆಯ ಡಾಮರು,ಮಣ್ಣು ತುಂಬಿಸಿ ಕಾಮಗಾರಿಯನ್ನು ಪೂರ್ತಿಗೊಳಿಸದೆ ಅರ್ಧಂಬರ್ಧ ನಡೆಸಿದ್ದು , ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಸುಮಾರು ಒಂದು ಕಿ.ಮೀ. ಉದ್ದದ ರಸ್ತೆ ವಿಭಾಜಕದಲ್ಲಿ ಹಸಿರು ಕಂಗೊಳಿಸಿವುದು ಕೇವಲ 300 ಮೀ.ನಲ್ಲಿ ಮಾತ್ರ.ಮಳೆಗಾಲದಲ್ಲಿ ಶಿರ್ವ ಲಯನ್ಸ್‌ ಕ್ಲಬ್‌ನವರು ಸಮುದಾಯ ಆರೋಗ್ಯ ಕೇಂದ್ರದಿಂದ ಕಾಪು ಸರ್ಕಲ್‌ನವರೆಗೆ ಗಿಡ ನೆಟ್ಟಿದ್ದರು ಆದರೆ ನೀರಿನ ಪೋಷಣೆಯಿಲ್ಲದೆ ಗಿಡಗಳು ಸತ್ತಿವೆ.

ಜಾಫರ್‌ ಸಾಹೇಬರ ಪರಿಸರ ಕಾಳಜಿ ಇತರರಿಗೆ ಮಾದರಿಯಾಗಿದೆ. ಅವರಂತೆ ಸಂಘ ಸಂಸ್ಥೆಗಳು, ಪರಿಸರ ಪ್ರೇಮಿಗಳು, ಸ್ಥಳಿಯಾಡಳಿತ, ರಸ್ತೆಬದಿಯ ಅಂಗಡಿಗಳ ಮಾಲೀಕರು ರಸ್ತೆ ವಿಭಾಜಕದಲ್ಲಿ ಹಸುರು ಗಿಡ ನೆಟ್ಟು ಬೆಳೆಸಿ ಪೋಷಿಸಿದಾಗ ಸ್ವಚ್ಛ ಸುಂದರ ಪರಿಸರ ವಾಗುವುದರಲ್ಲಿ ಸಂಶಯವಿಲ್ಲ.-ಆಲ್ವಿನ್‌ ದಾಂತಿ ಪೆರ್ನಾಲ್‌,ಶಿಕ್ಷಕರು.,

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.