ಘೋಷಣೆಗಷ್ಟೇ ಬಾಕಿ ಪರಿಸರ ಸೂಕ್ಷ್ಮ ಪ್ರದೇಶ


Team Udayavani, Dec 12, 2019, 5:54 AM IST

sx-39

ಸದ್ದಿಲ್ಲದೆ ನಡೆದಿದೆ ಯೋಜನೆ ಕಾರ್ಯಸೂಚಿ | ಆಕ್ಷೇಪಣೆಗೆ ಈ ತಿಂಗಳ ಕೊನೆಯೇ ಗಡುವು
ಪಟ್ಟಿಯಲ್ಲಿವೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ಅಭಯಾರಣ್ಯ

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯ ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆಯಾಗಿ ಎರಡು ವರ್ಷಗಳಾಗುತ್ತಾ ಬಂದಿದ್ದು, ಒಂದೆರಡು ತಿಂಗಳುಗಳಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಮತ್ತು ಸೋಮೇಶ್ವರ ಅಭಯಾರಣ್ಯ ಕೂಡ ಇದೇ ಪಟ್ಟಿಗೆ ಸೇರಲಿವೆ.

ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಬಂಧಿಸಿ 2006ರ ಡಿಸೆಂಬರ್‌ನಲ್ಲಿಯೇ ರಾಜ್ಯಗಳಿಗೆ ಸೂಚನೆ ನೀಡಲಾಗಿದ್ದರೂ ಕರ್ನಾಟಕ ಹಲವಾರು ರಾಜ್ಯಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ನ್ಯಾಯಾಲಯದ ಆದೇಶದ ಬಳಿಕ ದಿಢೀರ್‌ ಎಚ್ಚೆತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಮತ್ತು ಸೋಮೇಶ್ವರ ಅಭಯಾರಣ್ಯವನ್ನು ಇಎಸ್‌ರkುಡ್‌ (ಇಕೊ ಸೆನ್ಸಿಟಿವ್‌ ಝೋನ್‌) ಆಗಿ ಘೋಷಿಸಲು ಮುಂದಾಗಿದೆ. ಯಾವೆಲ್ಲ ಪ್ರದೇಶಗಳನ್ನು ಒಳಗೊಳ್ಳಲಿದೆ ಎಂಬ ನಕ್ಷೆಗಳನ್ನು ರಾಜ್ಯ ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಇರುವ 60 ದಿನಗಳ ಕಾಲಾವಕಾಶ ಡಿಸೆಂಬರ್‌ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಜನವರಿಯಲ್ಲಿ ಈ ಕುರಿತ ಸಭೆ ನಡೆದು ಅಧಿಸೂಚನೆ ಹೊರಬರಲಿದೆ. 2018ರ ಡಿ.11ರಂದು ಸುಪ್ರೀಂ ಕೋರ್ಟ್‌ ದೇಶದ 21 ರಾಷ್ಟ್ರೀಯ ಉದ್ಯಾನಗಳು ಮತ್ತು ವನ್ಯಜೀವಿ ಧಾಮಗಳ ಸುತ್ತಲಿನ 10 ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಸೂಚನೆ ನೀಡಿತ್ತು.

ಕೊಲ್ಲೂರು
ಕೊಲ್ಲೂರಿನ ಮೂಕಾಂಬಿಕಾ ಅಭಯಾರಣ್ಯವನ್ನು 2015ರಲ್ಲಿ ಪ್ರಕ್ರಿಯೆ ಆರಂಭಿಸಿ 2017ರ ಎಪ್ರಿಲ್‌ನಲ್ಲಿ ಪ.ಸೂ. ವಲಯವಾಗಿ ಘೋಷಿಸಲಾಗಿದೆ. ಶಿವಮೊಗ್ಗ, ಉಡುಪಿ ಜಿಲ್ಲೆಯ ಒಟ್ಟು 37 ಗ್ರಾಮಗಳು ಇದರ ವ್ಯಾಪ್ತಿಯಲ್ಲಿವೆ. ಕುಂದಾಪುರ ತಾಲೂಕಿನ ಹೊಸಂಗಡಿ, ಮಚ್ಚಟ್ಟು, ಉಳ್ಳೂರು, ಸಿದ್ದಾಪುರ, ಯಡಮೊಗೆ, ಹಳ್ಳಿಹೊಳೆ, ಬೆಳ್ಳಾಲ, ಆಜ್ರಿ, ಕೊಡ್ಲಾಡಿ, ಕರ್ಕುಂಜೆ, ಚಿತ್ತೂರು, ವಂಡ್ಸೆ, ನೂಜಾಡಿ, ಹಕೂìರು, ಆಲೂರು, ಕಾಲೊ¤àಡು, ನಾವುಂದ, ಗೋಳಿಹೊಳೆ, ಜಡ್ಕಲ್‌, ಕೊಲ್ಲೂರು, ಯಳಜಿತ್‌, ನುಕ್ಯಾಡಿ, ಹೊಸೂರು, ಮೂಡಿನಗದ್ದೆ ಗ್ರಾಮಗಳು ಸೇರಿವೆ.

ಏನಿದು ಸೂಕ್ಷ್ಮ ವಲಯ?
ಅರಣ್ಯ ಸಂರಕ್ಷಣೆಗೆ, ಅರಣ್ಯದ ಸುತ್ತ ನಡೆಯುವ ಅನಪೇಕ್ಷಿತ ಚಟುವಟಿಕೆಗಳ ತಡೆಗಾಗಿ
ಕೇಂದ್ರ ಸರಕಾರದ ಪರಿಸರ, ಅರಣ್ಯ ಇಲಾಖೆಯಿಂದ ಸೂಕ್ಷ್ಮ ವಲಯ ಘೋಷಣೆಯಾಗುತ್ತದೆ. ಅರಣ್ಯ ಪ್ರದೇಶದ 10 ಕಿ.ಮೀ. ಸುತ್ತಳತೆಯ ಪ್ರದೇಶಗಳ ಚಟುವಟಿಕೆಗಳು ಅರಣ್ಯ ಇಲಾಖೆ ನಿಯಂತ್ರಣಕ್ಕೆ ಒಳಪಡುತ್ತವೆ.

ಏನೆಲ್ಲ ನಿರ್ಬಂಧಗಳು?
ಘೋಷಿತ ಪ್ರದೇಶದ 10 ಕಿ.ಮೀ. ವ್ಯಾಪ್ತಿಯಲ್ಲಿ ರೆಸಾರ್ಟ್‌, ಹೊಟೇಲ್‌ ತೆರೆಯುವಂತಿಲ್ಲ. ಗಣಿಗಾರಿಕೆ, ಕೈಗಾರಿಕೆ, ಬೃಹತ್‌ ಜಲವಿದ್ಯುತ್‌ ಸ್ಥಾವರ, ಅಪಾಯಕಾರಿ ವಸ್ತುಗಳ ಉತ್ಪಾದನ ಘಟಕ, ಘನ, ದ್ರವ ತ್ಯಾಜ್ಯ ಘಟಕ, ಬೃಹತ್‌ ಪ್ರಮಾಣದ ಆಹಾರ ತಯಾರಿ ಘಟಕ, ಕೋಳಿಫಾರಂ ಘಟಕ, ಮರದ ಮಿಲ್ಲು, ಗಾಳಿಯಂತ್ರ ಸ್ಥಾಪನೆ, ಇಟ್ಟಿಗೆ ಶೋಧನೆ, ಕಟ್ಟಡ ನಿರ್ಮಾಣ ನಿಷೇಧವಾಗುತ್ತದೆ. ಕಾಡುತ್ಪತ್ತಿ ಸಂಗ್ರಹ, ವಿದ್ಯುದೀಕರಣ, ರಸ್ತೆ ಅಭಿವೃದ್ಧಿ ಇತ್ಯಾದಿ ಶರತ್ತಿನಲ್ಲಿ ಮಾಡಬಹುದಾಗಿದೆ. ಶಬ್ದ ಮಾಲಿನ್ಯ, ವಾಯು ಮಾಲಿನ್ಯದ ಚಟುವಟಿಕೆ ನಡೆಸುವಂತಿಲ್ಲ.

ಆತಂಕ
ಮನೆಗಳಿಗೆ, ಕೃಷಿ ಪಂಪ್‌ಸೆಟ್‌ಗೆ ವಿದ್ಯುದೀ ಕರಣವಾಗಬೇಕಾದರೆ ಭೂಮಿಯಡಿ ಕೇಬಲ್‌ ಹಾಕಿದರೆ ಮಾತ್ರ ಅವಕಾಶ. ಕೃಷಿ ಚಟುವಟಿಕೆಗೆ ರಾಸಾಯನಿಕ ಬಳಕೆಗೂ ನಿಷೇಧವಿದೆ. ಸಾವಯವ ಕೃಷಿಗೆ ಮಾತ್ರ ಅವಕಾಶ. ರಸ್ತೆ ಡಾಮರೀಕರಣ ಕಷ್ಟ. ಕೃಷಿಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸುವಂತಿಲ್ಲ. ಪರಿಣಾಮವಾಗಿ ಭೂಮಿಯ ಬೆಲೆ ಇಳಿಯುತ್ತದೆ. ಈ ಭಾಗದ ಅನೇಕ ಪ್ರದೇಶಗಳಲ್ಲಿ ಕಸ್ತೂರಿರಂಗನ್‌ ವರದಿ ಪರಿಣಾಮವೂ ಇರಲಿದ್ದು, ಅದು ಜಾರಿಯಾದಾಗಲೂ ಇಂಥವೇ ಪರಿಣಾಮಗಳು ಆಗಲಿವೆ.

ಅಭಿವೃದ್ಧಿಯ ಮೇಲೆ ಪರಿಣಾಮ
ಇದು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದೆ. ಕೃಷಿ ಮಾಡದ, ನಿರುಪಯುಕ್ತ ಭೂಮಿಯಲ್ಲಿ ಅರಣ್ಯ ಬೆಳೆಸಬೇಕಾಗುತ್ತದೆ. ಇದರಿಂದಾಗಿ ವಲಯದ ವ್ಯಾಪ್ತಿಯನ್ನು ಒಂದು ಕಿ.ಮೀ.ಗೆ ಇಳಿಸಬೇಕು ಎಂದು ಬಲವಾದ ಕೂಗು ಇದೆ. ಕೊಲ್ಲೂರಿನಲ್ಲಿ 10.8 ಕಿ.ಮೀ. ವಿಸ್ತಾರಕ್ಕೆ ನಿಷೇಧ ಜಾರಿಯಾಗಿದೆ. ಹೊಟೇಲ್‌, ರೆಸಾರ್ಟ್‌ನಂತಹ ಸ್ಥಾಪನೆಗೆ 1 ಕಿ.ಮೀ. ಮಿತಿ ಹೇರಲಾಗಿದೆ. ವಾಹನಗಳ ಓಡಾಟಕ್ಕೆ ನಿಯಂತ್ರಣ ಬೀಳಲಿದೆ.

ಆಕ್ಷೇಪಣೆಗೆ ಕಾಲಾವಕಾಶ ನೀಡಿದ್ದು, ಅವಧಿ ಮುಗಿದ ಬಳಿಕ ಸಮಿತಿ ಸಭೆ ನಡೆಸಿ ಅನಂತರ ಘೋಷಣೆ ಜಾರಿಯಾಗಲಿದೆ. 10 ಕಿ.ಮೀ. ಮಿತಿಯನ್ನು 1 ಕಿ.ಮೀ.ಗೆ
ಇಳಿಸಬೇಕು ಎಂದು ಜನರ ಬೇಡಿಕೆಯಿದೆ.
– ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಂಸದರು

ಮುಖ್ಯಮಂತ್ರಿಗಳು, ಸಂಸದರ ಜತೆ ಸೇರಿ 10 ಕಿ.ಮೀ. ಮಿತಿಯನ್ನು 1 ಕಿ.ಮೀ.ಗೆ ಇಳಿಸಲು ಪ್ರಯತ್ನಿಸಲಾಗುವುದು.
-ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಶಾಸಕರು

 ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.