ಉಡುಪಿ : ಸ್ಪೀಡ್‌ಪೋಸ್ಟ್‌ನಲ್ಲಿ ಮತದಾರರ ಮನೆಗೆ ಬರಲಿದೆ ಎಪಿಕ್‌ ಕಾರ್ಡ್‌


Team Udayavani, Oct 30, 2022, 12:04 PM IST

ಉಡುಪಿ : ಸ್ಪೀಡ್‌ಪೋಸ್ಟ್‌ನಲ್ಲಿ ಮತದಾರರ ಮನೆಗೆ ಬರಲಿದೆ ಎಪಿಕ್‌ ಕಾರ್ಡ್‌

ಉಡುಪಿ: ರಾಜ್ಯದಲ್ಲೇ ಮೊದಲು ಎಂಬಂತೆ ಮತದಾರರ ಗುರುತಿನ ಚೀಟಿಯನ್ನು ಸ್ಪೀಡ್‌ಪೋಸ್ಟ್‌ ಮೂಲಕ ತಲುಪಿಸುವ ಪ್ರಕ್ರಿಯೆಯನ್ನು ಉಡುಪಿ ಜಿಲ್ಲೆಯಲ್ಲಿ ಆರಂಭಿಸಲಾಗಿದೆ.
ಹೊಸ ನೋಂದಣಿ, ತಿದ್ದುಪಡಿ ಸಹಿತ ಸುಮಾರು 10 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಎಲ್ಲ ಅರ್ಜಿಗಳಿಗೂ ಸಂಬಂಧಿಸಿದಂತೆ ಮುದ್ರಣಕಾರ್ಯ ಪೂರ್ಣಗೊಂಡಿದ್ದು, ಈಗಾಗಲೇ 1,773 ಎಪಿಕ್‌ ಕಾರ್ಡ್‌ಗಳನ್ನು ಮತದಾರರಿಗೆ ತಲುಪಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಚುನಾವಣೆ ಶಾಖೆಯಲ್ಲಿ ಎಪಿಕ್‌ ಕಾರ್ಡ್‌ಗಳನ್ನು ಸ್ಪೀಡ್‌ಪೋಸ್ಟ್‌ಗೆ
ಕಳುಹಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಈ ಪ್ರಕ್ರಿಯೆ ಆರಂಭವಾಗಿದೆ. ಆದರೆ ಉಡುಪಿ ಜಿಲ್ಲೆಯಷ್ಟು ವ್ಯವಸ್ಥಿತವಾಗಿ ಅಲ್ಲಿ ಇನ್ನೂ ಆರಂಭವಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹೊಸ ಕಾರ್ಡ್‌ ಜತೆ ಸಂದೇಶ
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಾಯಿಸಿ, ಮತದಾರರಾಗಿರುವುದಕ್ಕೆ ಹರ್ಷವಾಗುತ್ತಿದೆ. ಭಾರತ ಚುನಾವಣೆ ಆಯೋಗ ನಿಮಗೆ ಅಭಿನಂದನೆ ಸಲ್ಲಿಸುತ್ತದೆ. ತಾವು ಪ್ರಜಾಪ್ರಭುತ್ವದಲ್ಲಿ ನಾಗರಿಕರಾಗಿ ಜವಾಬ್ದಾರಿ ಹೊಂದಿದ್ದೀರಿ. ಮುಂಬರುವ ಎಲ್ಲ ಚುನಾವಣೆಗಳಲ್ಲೂ ತಮ್ಮ ಮತವನ್ನು ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭೀತಿಯಿಂದ ಚಲಾಯಿಸಬಹುದು. ಮತದಾನದ ದಿನ ಮತ ಚಲಾಯಿಸುವ ಮೂಲಕ ಸದೃಢ ಪ್ರಜಾಪ್ರಭುತ್ವ ಸ್ಥಾಪಿಸಬಹುದು. ನಮ್ಮ ಮತ: ನಮ್ಮ ಹಕ್ಕು, ಮತದಾನ ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ತಪ್ಪದೆ ಮತಚಾಯಿಸಿ, ಮತದಾನದಿಂದ ಹೊರಗೆ ಉಳಿಯದಿರಿ ಎಂಬ ಸಂದೇಶ ಹೊಂದಿರುವ ಪತ್ರ(ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ)ವನ್ನು ಜತೆಗೆ ಕಳುಹಿಸಿಕೊಡಲಾಗುತ್ತಿದೆ.

ಮತದಾರರ ಪಟ್ಟಿ ಪರಿಷ್ಕರಣೆ
ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಚುನಾವಣ ಆಯೋಗವು ಈ ಬಾರಿಯೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆಯೋಜಿಸಿದೆ. 18 ವರ್ಷ ತುಂಬಿದ ಯುವ ಮತದಾರರು ನೋಂದಣಿ ಮಾಡಿಕೊಳ್ಳಬಹುದು. ಜನವರಿ, ಎಪ್ರಿಲ್‌, ಜುಲೈ ಹಾಗೂ ಅಕ್ಟೋಬರ್‌ ಹೀಗೆ ನಾಲ್ಕು ಅವಕಾಶ ನೀಡಲಾಗಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನ.9ರಿಂದ ಆರಂಭವಾಗಲಿದೆ. ಈ ವೇಳೆ ಹೊಸ ನೋಂದಣಿ, ತಿದ್ದುಪಡಿ, ಡಿಲೀಶನ್‌ ಹೀಗೆ ಎಲ್ಲದಕ್ಕೂ ಅವಕಾಶ ಇರುತ್ತದೆ. ಈ ಬಗ್ಗೆ ವಿಶೇಷ ಅಭಿಯಾನ ಕೂಡ ನಡೆಯಲಿದೆ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಅಭಿಯಾನಗಳನ್ನು ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಡಿಲೀಶನ್‌, ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶವಿರುತ್ತದೆ. ಓಟರ್‌ ಹೆಲ್ಪ್ ಲೈನ್ ಆ್ಯಪ್‌ ಮೂಲಕವೂ ಮಾಡಿಕೊಳ್ಳಬಹುದು. ಎಪಿಕ್‌ ಕಾರ್ಡ್‌ ಗಳನ್ನು ಸ್ಪೀಡ್‌ಪೋಸ್ಟ್‌ ಮೂಲಕ ಮತದಾರರ ಮನೆಗೆ ತಲುಪಿಸಲಾಗುವುದು.
-ಕೂರ್ಮಾ ರಾವ್‌ ಎಂ. ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.