ಉಡುಪಿ : ಇಎಸ್‌ಐ ಆಸ್ಪತ್ರೆಗೆ ಜಾಗ ಗುರುತಿಸಲು ಸೂಚನೆ


Team Udayavani, Aug 24, 2022, 12:37 PM IST

ಉಡುಪಿ : ಇಎಸ್‌ಐ ಆಸ್ಪತ್ರೆಗೆ ಜಾಗ ಗುರುತಿಸಲು ಸೂಚನೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರಕಾರದಿಂದ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆ, ಔಷಧಾಲಯ ನಿರ್ಮಾಣಕ್ಕೆ ಅಗತ್ಯವಿರುವ ಜಮೀನನ್ನು ಆದಷ್ಟು ಶೀಘ್ರದಲ್ಲಿ ಗುರುತಿಸಿ, ಆಸ್ಪತ್ರೆ ಕಾಮಗಾರಿ ಆರಂಭಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಹೇಳಿದರು.

ಅವರು ಮಂಗಳವಾರ ವೀಡಿಯೋ ಸಂವಾದದ ಮೂಲಕ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕಾಲು ಸಂಕಗಳನ್ನು ಗುರುತಿಸಿ, ಆ ಭಾಗದಲ್ಲಿ ಸೇತುವೆಗಳನ್ನು ನಿರ್ಮಿ ಸಲು ಆದ್ಯತೆಯ ಮೇರೆಗೆ ಕಾರ್ಯೋ ನ್ಮುಖರಾಗುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯ ಗೊಳ್ಳುವ ಹಾಗೆ ನೋಡಿ ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜಲಜೀವನ ಮಿಷನ್‌ ಯೋಜನೆಯಡಿ ಕೈಗೊಂಡಿರುವ ಕಾಮ ಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸಲು ಎಲ್ಲ ಕಾಮಗಾರಿ ಗಳಿಗೆ ನೋಡಲ್‌ ಅಧಿಕಾರಿ ಗಳನ್ನು ನೇಮಿಸುವಂತೆ ಹಾಗೂ ಜಿ.ಪಂ. ಸಿಇಒ ಈ ಬಗ್ಗೆ ವಿಶೇಷ ಗಮನಹರಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾತನಾಡಿ, ಹಾನಿಗೀಡಾದ ಶಾಲೆ, ಅಂಗನವಾಡಿಗಳ ದುರ ಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಾನಿಯಾದ ರಸ್ತೆಗಳ ಸಣ್ಣ ಪುಟ್ಟ ದುರಸ್ತಿ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ ಎಂದರು.

ಮಾನ್ಸೂನ್‌ ನಿಂದಾಗಿ ಉಂಟಾ ಗಿರುವ ಹಾನಿ ಹಾಗೂ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿಗಳು, ಪ್ರಾಕೃ ತಿಕ ವಿಕೋ ಪದ ಸಂದರ್ಭ ತುರ್ತು ಅಗತ್ಯವಿರುವ ಬೋಟು, ಲೈಫ್ ಜಾಕೇಟ್, ಲೈಫ್ ಬಾಯ್‌ ಮತ್ತಿತ್ತರ ಉಪಕರಣಗಳನ್ನು ಸುಮಾರು ರೂ.20 ಲಕ್ಷ ವೆಚ್ಚದಲ್ಲಿ ಖರೀದಿಸಲಾಗಿದ್ದು, ಅದರಂತೆ ಸಂಬಂಧಿತ ಇಲಾಖೆಗಳಿಗೆ ಹಸ್ತಾಂತರಿಸಲಾಗುವುದು ಎಂದರು.
ಮಳೆಯಿಂದ ಹಾನಿಗೊಳಗಾಗುವ ಮನೆಗಳ ವಿವರಗಳನ್ನು ರಾಜೀವ ಗಾಂಧಿ ವಸತಿ ನಿಗ ಮದ ತಂತ್ರಾಂಶದಲ್ಲಿ ದಾಖಲಿಸಲಾಗುತ್ತಿದ್ದು, 2019, 2020, 2021ರ ಸಾಲಿನಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುತ್ತಿರುವುದಾಗಿ ಡಿಸಿ ತಿಳಿಸಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲುಸಂಕ ಅಗತ್ಯವಿರುವ ಕಾಲು ಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ತಿಳಿಸಿದರು. ಜಿ.ಪಂ. ಸಿಇಒ ಪ್ರಸನ್ನ ಎಚ್‌., ಜಿಲ್ಲೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.