11 ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿ ಕೇಂದ್ರ ಸ್ಥಾಪನೆ
ಮೀನುಗಾರಿಕೆ ಇಲಾಖೆ, ಕೆಎಫ್ಡಿಸಿ ನೇತೃತ್ವ ; ಮಲ್ಪೆ , ಮಂಗಳೂರಿನಿಂದ ತಾಜಾ ಮೀನು
Team Udayavani, Feb 10, 2020, 6:15 AM IST
ಕೋಟ: ಕರಾವಳಿಯ ಸ್ವಾದಿಷ್ಟಮಯ ಮೀನಿನ ಖಾದ್ಯಗಳನ್ನು ರಾಜ್ಯದ ಇತರ ಜಿಲ್ಲೆ ಗಳ ಜನರಿಗೂ ಅತ್ಯಂತ ಕಡಿಮೆ ಬೆಲೆಯಲ್ಲಿ ಉಣ ಬಡಿಸುವ ಉದ್ದೇಶದಿಂದ ರಾಜ್ಯ ಸರಕಾರದ ಮೀನು ಗಾರಿಕೆ ಇಲಾಖೆ ಮತ್ತು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ಕೆಎಫ್ಡಿಸಿ)ದ ಮೂಲಕ 11 ಜಿಲ್ಲೆಗಳಲ್ಲಿ ಹೊಸದಾಗಿ ಮತ್ಸ್ಯದರ್ಶಿನಿ ಕೇಂದ್ರ ಸ್ಥಾಪನೆಗೆ ಸರಕಾರ ತೀರ್ಮಾನಿಸಿದೆ.
ಮತ್ಸ್ಯದರ್ಶಿನಿ ಕೇಂದ್ರಗಳು ಈಗಾಗಲೇ ಕೆಲವೆಡೆ ಕಾರ್ಯಾಚರಿಸುತ್ತಿದ್ದು, ಬೆಂಗಳೂರು, ತುಮಕೂರು, ಶಿವಮೊಗ್ಗ, ಕೋಲಾರ, ಬಳ್ಳಾರಿ ಯಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಮುಂದಿನ ದಿನಗಳಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ, ರಾಯಚೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರು, ಉಡುಪಿ ಜಿಲ್ಲೆಗಳಿಗೆ ಈ ಕೇಂದ್ರ ವನ್ನು ವಿಸ್ತರಿಸಲು ಇಲಾಖೆ ಸಕಲ ಸಿದ್ಧತೆ ನಡೆಸಿದೆ.
ಕೇಂದ್ರದ ವೈಶಿಷ್ಟ್ಯವೇನು?
ಮತ್ಸ್ಯದರ್ಶಿನಿ ಕೇಂದ್ರಗಳಲ್ಲಿ ಖಾಸಗಿ ಹೊಟೇಲ್ಗಳಿಗಿಂತ ಅರ್ಧದಷ್ಟು ಕಡಿಮೆ ಬೆಲೆಗೆ ಮೀನೂಟ ದೊರೆಯುತ್ತದೆ. ಎಲ್ಲ ಜಿಲ್ಲಾ ಕೇಂದ್ರಗಳಿಗೂ ಮಲ್ಪೆ ಮತ್ತು ಮಂಗಳೂರಿನಿಂದ ಶುಚಿ- ರುಚಿ ಯಾದ ಮೀನು ರವಾನೆಯಾಗುತ್ತದೆ. ತುಮಕೂರಿನ ಹೊಟೇಲೊಂದ ರಲ್ಲಿ ಮೀನೂಟದ ರುಚಿ ಸವಿದ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು ಹಾಗೂ ಎಲ್ಲ ಕಡೆಗಳಿಗೆ ವಿಸ್ತರಿಸುವ ಚಿಂತನೆ ನಡೆಸಿದ್ದರು. ಮತ್ಸ್ಯ ದರ್ಶಿನಿಯ ಹಲವು ಕೇಂದ್ರಗಳು ರಾಜ್ಯದಲ್ಲಿ ಖಾಸಗಿ ಏಜೆನ್ಸಿಗಳ ಮೂಲಕವೂ ನಡೆಯುತ್ತಿವೆ.ಆದರೆ ಇದೀಗ ಹೊಸದಾಗಿ ಆರಂಭಗೊಳ್ಳಲಿರುವ 11 ಕೇಂದ್ರಗಳ ಸಂಪೂರ್ಣ ನಿರ್ವಹಣೆಯನ್ನು ನೇರವಾಗಿ ಕೆಎಫ್ಡಿಸಿಯೇ ನೋಡಿ ಕೊಳ್ಳಲಿದೆ.
ಸ್ಥಳ ಗುರುತಿಸುವಂತೆ ಸೂಚನೆ
ಹೊಸದಾಗಿ ಆರಂಭಗೊಳ್ಳಲಿರುವ ಮತ್ಸ್ಯದರ್ಶಿನಿ ಕೇಂದ್ರಗಳಿಗೆ ಸೂಕ್ತ ಸ್ಥಳವನ್ನು ಕಾದಿರಿಸುವಂತೆ ಈಗಾಗಲೇ ಆಯಾಯ ಜಿಲ್ಲಾಧಿಕಾರಿಗಳಿಗೆ ಕೆಎಫ್ಡಿಸಿ ಮನವಿ ಮಾಡಿದ್ದು ಹಲವು ಜಿಲ್ಲೆಗಳು ಸ್ಥಳ ಗುರುತಿಸಿ ಕಾದಿರಿಸಿವೆ. ಎಲ್ಲ ಕೇಂದ್ರಗಳಿಗೂ ಕರಾವಳಿಯಿಂದ ಮೀನು ಸರಬ ರಾಜು ಮಾಡಲು ಹೊಸ ಇನ್ಸುಲೇಟರ್ ವಾಹನ ಖರೀದಿಗೂ ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಸಂಚಾರಿ ಮಳಿಗೆಗಳು
ಮತ್ಸ್ಯದರ್ಶಿನಿ ಕೇಂದ್ರದ ಜತೆಗೆ ಮೊಬೈಲ್ ಕ್ಯಾಂಟೀನ್ ಮಾದರಿಯ 20 ಹೊಸ ಮೊಬೈಲ್ ದರ್ಶಿನಿಗಳು, ಖಾಸಗಿ ಏಜೆನ್ಸಿಗಳಿಗೆ ಹೆಚ್ಚುವರಿ ಮತ್ಸ್ಯದರ್ಶಿನಿ ಕೇಂದ್ರ ಹಾಗೂ ಹೊಸದಾಗಿ 25 ಸಂಚಾರಿ ಮೀನು ಮಾರಾಟ ಮಳಿಗೆ ಸ್ಥಾಪಿಸಲು ಕೆಎಫ್ಡಿಸಿ ತಯಾರಿ ನಡೆಸಿದೆ.
ಶೀಘ್ರದಲ್ಲೇ ಆರಂಭ
ರಾಜ್ಯದ ಎಲ್ಲ ಜಿಲ್ಲೆಗಳ ಜನರು ಕಡಿಮೆ ಬೆಲೆಗೆ ಕರಾವಳಿಯ ಶುಚಿ-ರುಚಿಯಾದ ಮೀನಿನ ಊಟ ಸವಿಯಬೇಕು ಎನ್ನುವ ನಿಟ್ಟಿನಲ್ಲಿ 11 ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿ ಕೇಂದ್ರಗಳನ್ನು ತೆರೆಯಲು ಆದೇಶ ನೀಡಲಾಗಿದೆ. ಕೆಎಫ್ಡಿಸಿ ಎಲ್ಲ ತಯಾರಿಗಳನ್ನು ನಡೆಸಿದ್ದು ಶೀಘ್ರದಲ್ಲಿ ಈ ಕೇಂದ್ರಗಳು ಆರಂಭಗೊಳ್ಳಲಿವೆ.
– ಕೋಟ ಶ್ರೀನಿವಾಸ ಪೂಜಾರಿ,
ಮೀನುಗಾರಿಕೆ ಸಚಿವರು
ಅನುಮೋದನೆಗೆ ಕಾಯಲಾಗುತ್ತದೆ
ಮತ್ಸ್ಯದರ್ಶಿನಿ ಕೇಂದ್ರಕ್ಕೆ ಎಲ್ಲ ತಯಾರಿ ಮುಗಿದಿದೆ. ಹೆಚ್ಚುವರಿ ಅನುದಾನಕ್ಕಾಗಿ ಆರ್ಕೆವಿವೈಗೆ ಪ್ರಸ್ತಾವನೆ ಸಲ್ಲಿಸ ಲಾಗಿದ್ದು ಅನುಮೋದನೆಗಾಗಿ ಕಾಯ ಲಾಗು ತ್ತಿದೆ. ಜತೆಗೆ ಹೊಸದಾಗಿ ಮೊಬೈಲ್ ದರ್ಶಿನಿ, ಖಾಸಗಿ ಏಜೆನ್ಸಿಗಳಿಗೆ ಮತ್ಸ್ಯ ದರ್ಶಿನಿ ಕೇಂದ್ರ, ಸಂಚಾರಿ ಮೀನು ಮಾರಾಟ ಮಳಿಗೆ ಮುಂತಾದ ಯೋಜನೆ ಗಳನ್ನು ಜಾರಿ ಗೊಳಿಸುವ ಯೋಜನೆ ಇದೆ.
– ಎಂ.ಎಲ್. ದೊಡ್ಮನೆ,
ಮುಖ್ಯ ವ್ಯವಸ್ಥಾಪಕ ನಿರ್ದೇಶಕರು ಕೆಎಫ್ಡಿಸಿ
-ರಾಜೇಶ್ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ