ಗೊಂಬೆಯಾಟಕ್ಕೆ ಎಲ್ಲರ ಸಹಕಾರ ಅತ್ಯಗತ್ಯ: ಡಾ| ಸಂಧ್ಯಾ ಪೈ
ಉಪ್ಪಿನಕುದ್ರು: ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ
Team Udayavani, Apr 16, 2019, 6:15 AM IST
ನಾಗೂರು ಮಹಾಬಲೇಶ್ವರ ಶೇಟ್ರ ಅನಾರೋಗ್ಯದ ನಿಮಿತ್ತ ಪತ್ನಿಗೆ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಂದಾಪುರ: ಎಲ್ಲರೂ ಸಹಕಾರ ನೀಡಿದರೆ ಮಾತ್ರ ಗೊಂಬೆಯಾಟ ಕಲೆ ಮುಂದಿನ ದಿನಗಳಲ್ಲಿ ಉಳಿಯುತ್ತದೆ. ಈ ಪುಟ್ಟ ಊರಿನಲ್ಲಿ ಇಷ್ಟು ದೊಡ್ಡ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ. ಎಲ್ಲ ರಂಗಗಳ ಸಾಧಕರನ್ನು ಗುರುತಿಸಿ ಸಮ್ಮಾನಿಸುತ್ತಿರುವುದು ಸ್ತುತ್ಯರ್ಹ ಎಂದು “ತರಂಗ’ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್. ಪೈ ಹೇಳಿದರು.
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಚತುರ್ಥ ವಾರ್ಷಿಕೋತ್ಸವ ಮತ್ತು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಯನ್ನು ಪ್ರಶಸ್ತಿ ಪುರಸ್ಕೃತ ಮದ್ದಲೆಗಾರ ನಾಗೂರು ಮಹಾಬಲೇಶ್ವರ ಶೇಟ್ರ ಅನಾರೋಗ್ಯದ ನಿಮಿತ್ತ ಅವರ ಪತ್ನಿಗೆ ಪ್ರದಾನ ಮಾಡಲಾಯಿತು.
ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಕ್ರಮ ಉದ್ಘಾಟಿಸಿದರು.ಅಕಾಡೆಮಿಯ 50 ಕಾರ್ಯಕ್ರಮ ಗಳು ಮತ್ತು ಸಂಸ್ಥೆಯ ಕಳೆದ ವರ್ಷದ ಚಿತ್ರಣಗಳನ್ನೊಳಗೊಂಡ “ಗೊಂಬೆ ಪ್ರಪಂಚ’ ವಾರ್ಷಿಕ ಪತ್ರಿಕೆಯನ್ನು ನ್ಯಾಯವಾದಿ ಎ.ಎಸ್.ಎನ್. ಹೆಬ್ಟಾರ್ ಬಿಡುಗಡೆಗೊಳಿಸಿದರು.
ಗೊಂಬೆಯಾಟ ಕಲಾವಿದ ಯು. ವಾಮನ್ ಪೈ, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲ ಶರಣ್ ಭಟ್, ಉದ್ಯಮಿ ಅರುಣ್ ಕುಮಾರ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ರತ್ನಾಕರ್ ಪೈ ಉಪಸ್ಥಿತರಿದ್ದರು.
ಸಮ್ಮಾನ
ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಸೀನಿಯರ್ ಮ್ಯಾನೇಜರ್ ಬಾಬು ರಾಯ ಶೆಣೈ, ಉದಯ ಭಂಡಾರ್ಕಾರ್, ವಸಂತಿ ಆರ್. ಪಂಡಿತ್, ನಾಗಶ್ರೀ ಗಣೇಶ್ ಸೇರುಗಾರ್ ಮತ್ತು ಗುರುದೀಪಕ್ ಕಾಮತ್, ಶಾಂತಾ ವಾಸುದೇವ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ಹಿರಿಯ ಗೊಂಬೆ
ಯಾಟ ಕಲಾವಿದ ವೆಂಕಟರಮಣ ಬಿಡುವಾಳ್ ಅವರಿಗೆ ಆರ್ಥಿಕ ಧನ ಸಹಾಯ ನೀಡಲಾಯಿತು.
ಗೊಂಬೆಯಾಟ ಪ್ರಾತ್ಯಕ್ಷಿಕೆ, ವಿವಿಧ ಮನೋರಂಜನೆ ಕಾರ್ಯಕ್ರಮ ಗಮನ ಸೆಳೆಯಿತು. ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಪ್ರಸ್ತಾವನೆಗೈದರು. ಶಿಕ್ಷಕ ನಾಗೇಶ್ ಶ್ಯಾನುಭಾಗ್, ಚೇತನಾ ಶ್ಯಾನುಭಾಗ್, ರಾಜೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ಭರತ್ ಮೈಪಾಡಿ ಮತ್ತು ಪ್ರಭಾಕರ್ ಆಚಾರ್ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು