‘ಹಸಿರು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯ’
Team Udayavani, Jun 8, 2019, 6:00 AM IST
ಮಲ್ಪೆ : ಪ್ರಕೃತಿ ಉಳಿಸುವ ಅಭಿಯಾನ ಪ್ರತಿಯೊಬ್ಬರ ಮನದಲ್ಲಿ ಮನೆಯಲ್ಲಿ ಆದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ನಮ್ಮ ಭಾರತದ ಜನಸಂಖ್ಯೆಯ ಮೂವತ್ತಮೂರು ಶೇಖಡಾವಾರು ಅರಣ್ಯ ಪ್ರದೇಶವಿರಬೇಕಿದ್ದು ಇದೀಗ ತುಂಬ ಕಡಿಮೆ ವನ ಸಂಪತ್ತು ನಮ್ಮದಾಗಿದೆ. ಹಾಗಾಗಿ ಹಸಿರು ಬೆಳೆಸಿ ಉಳಿಸುವ ಕೆಲಸ ಕಾರ್ಯಗಳನ್ನು ಪ್ರತಿಯೊಬ್ಬ ನಾಗರಿಕ ತನ್ನ ಕರ್ತವ್ಯವೆಂಬಂತೆ ಮಾಡಬೇಕಾಗಿದೆ ಎಂದು ಅರಣ್ಯಾಧಿಕಾರಿ ಜೀವನ್ದಾಸ್ ಶೆಟ್ಟಿ ಅವರು ಹೇಳಿದರು.
ಅವರು ಕೊಡ ವೂರುಶಂಕರನಾರಾಯಣ ದೇವಸ್ಥಾನ, ಸುಮನಸಾ ಸಂಸ್ಥೆ, ಅರಣ್ಯ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೊಡವೂರು ದೇವಳದ ವಠಾರದಲ್ಲಿ ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು.
ನಗರಸಭಾ ಸದಸ್ಯ ವಿಜಯ ಕೊಡವೂರು ಮಾತನಾಡಿ ಆಧುನಿಕತೆಯ ನೆಪದಲ್ಲಿ ಒಂದೊಂದು ಮರ ಉರುಳಿದಾಗ ಎರಡೆರಡು ಸಸಿನೆಡುವ ಸಂಕಲ್ಪ ಮಾಡಿದರೆ ಮಾತ್ರ ಮುಂದಿನ ಜನಾಂಗ ಶುದ್ಧ ಗಾಳಿ, ನೀರು, ಆಹಾರ ಪಡೆಯಲು ಸಾಧ್ಯ ಎಂದು ಹೇಳಿದರು.
ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭಾಸ್ಕರ ಬಾಚನಬೈಲು, ಎ. ರಾಜ ಶೇರಿಗಾರ್, ದೇವಳದ ಪಿಆರ್ಒ ಉಮೇಶ್ ರಾವ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್, ಕೊಡವೂರು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಹಿರಿಯ ಶಿಕ್ಷಕಿ ಮಲ್ಲಿಕಾ ಕೊಡವೂರು, ದುರ್ಗಾ ಮಹಿಳಾ ಮಂಡಲದ ಅಧ್ಯಕ್ಷೆ ಸರೋಜಿನಿ ಉಪಸ್ಥಿತರಿದ್ದರು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಸದಸ್ಯ ಜನಾರ್ದನ ಕೊಡವೂರು ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ