ಟೋಲ್‌ ವಿನಾಯಿತಿಗಾಗಿ ಆಮರಣಾಂತ ಉಪವಾಸ


Team Udayavani, Jan 24, 2019, 12:50 AM IST

toll.jpg

ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಪಡುಬಿದ್ರಿಯ ನಾಗರಿಕ ಸಮಿತಿ ಸದಸ್ಯರು, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ಮತ್ತು ನವಯುಗ ನಿರ್ಮಾಣ ಕಂಪೆನಿಯ ರಾಘವೇಂದ್ರ ಅವರೊಂದಿಗೆ ಪಡುಬಿದ್ರಿ ಜಿ. ಪಂ. ವ್ಯಾಪ್ತಿಯ ಎಲ್ಲ ವಾಹನಗಳಿಗೆ ಸುಂಕ ವಿನಾಯಿತಿಗಾಗಿ ನಡೆಸಲಾದ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ. ನಾಳೆಯಿಂದ ಕರವೇ ಪಡುಬಿದ್ರಿಯಲ್ಲಿ ಆಮರಣಾಂತ ಉಪವಾಸವನ್ನು ಆರಂಭಿಸಲಿದೆ. 

ಜಿಲ್ಲೆಯಲ್ಲಿ ಸಾಸ್ತಾನ ಟೋಲ್‌ ಗೇಟ್‌ನಲ್ಲಿ ನೀಡಿದಂತಹ ವಿನಾಯಿತಿಯನ್ನು ಹೆಜಮಾಡಿಯಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯ್‌ ವ್ಯಾಪ್ತಿಗೂ ನೀಡಲೇ ಬೇಕು. ನವಯುಗ ಕಂಪೆನಿ ಅವೈಜ್ಞಾನಿಕ ಕಾಮಗಾರಿಗಳಿಂದ ಅದೆಷ್ಟೋ ಜೀವಹಾನಿಗಳಾಗಿವೆ. ಜಿಲ್ಲೆಯ ಎಲ್ಲೂ ಹಸುರು ಹೊದಿಕೆಯ ಕೆಲಸ ಕಾರ್ಯಗಳಾಗಿಲ್ಲ. ಜನ ಸಾಮಾನ್ಯರಿಗಾಗಿ ಬಸ್‌ ನಿಲ್ದಾಣಗಳನ್ನು ರಚಿಸಲಾಗಿಲ್ಲ. ಸರ್ವಿಸ್‌ ರಸ್ತೆ ಮೊದಲೇ ಇಲ್ಲ. ಹೆಜಮಾಡಿಯಲ್ಲಿ ಸ್ಕೈವಾಕ್‌ ನಿರ್ಮಾಣ ಅತ್ಯಗತ್ಯವಾಗಿದ್ದು ಅದನ್ನೂ ನಿಭಾಯಿಸದೇ ಕೇವಲ ಟೋಲ್‌ ವಸೂಲಿಗಾಗಿ ಜನತೆಯನ್ನು ಪೀಡಿಸಲಾಗುತ್ತಿದೆ.

ತಮ್ಮ ಪ್ರತಿಭಟನೆ ಯೊಂದಿಗೆ ನಾಳೆಯಿಂದ ಆಮರಣಾಂತ ಉಪವಾಸವನ್ನೂ ಆರಂಭಿಸುವ ನಿರ್ಧಾರವನ್ನೂ ಪಡುಬಿದ್ರಿ ನಾಗರಿಕ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಹಾಗೂ ಕರವೇ ನಾಯಕ ಅನ್ಸಾರ್‌ ಅಹಮ್ಮದ್‌ ಮತ್ತಿತರರು ಅಪರ ಜಿಲ್ಲಾಧಿಕಾರಿ ಸಮಕ್ಷಮ ನಡೆದ ಸಭೆಯಲ್ಲಿ ಹೇಳಿದರು. 

ಸಭೆಯಲ್ಲಿ ಡಾ| ದೇವಿಪ್ರಸಾದ್‌ ಶೆಟ್ಟಿ, ಗುಲಾಂ ಮಹಮ್ಮದ್‌, ಮೂಲ್ಕಿಯ ನಾಗರಿಕ ಸಮಿತಿ ಅಧ್ಯಕ್ಷ, ಮೂಲ್ಕಿ ಪುರಸಭಾಧ್ಯಕ್ಷ ಸುನಿಲ್‌ ಅಳ್ವ , ಮೂಲ್ಕಿ ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಮಧು ಆಚಾರ್ಯ, ದಸಂಸ ನಾಯಕ ಲೋಕೇಶ್‌ ಕಂಚಿನಡ್ಕ ಮತ್ತಿತರರು ಮಾತನಾಡಿದರು. 

ಇದೇ ವೇಳೆ ನವಯುಗ ಅಧಿಕಾರಿ ರಾಘವೇಂದ್ರ ಯಾವುದೇ ತಿರ್ಮಾನಕ್ಕೆ ಬರಲು ಇನ್ನೂ ಮೂರು ದಿನಗಳ ಕಾಲಾವಕಾಶವನ್ನು ಬಯಸಿದರು. 

ಪಡುಬಿದ್ರಿಯ ಟೆಂಪೋ ನಿಲ್ದಾಣದ ಬಳಿ ತಮ್ಮ ಪ್ರತಿಭಟನ ಸ್ಥಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅನ್ಸಾರ್‌ ಅಹಮ್ಮದ್‌ ಹಾಗೂ ಕಾಪು ಘಟಕಾಧ್ಯಕ್ಷ ಸೆಯ್ಯದ್‌ ನಿಝಾಮ್‌ ಮತ್ತಿತರರು ತಮ್ಮ ಆಮರಣಾಂತ ಉಪವಾಸವನ್ನು ಆರಂಭಿಸಲಿರುವುದಾಗಿ ಆಸೀಫ್‌ ಆಪದಾºಂಧವ ತಿಳಿಸಿದ್ದಾರೆ. 

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.