ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತದಿಂದ ಸೌಲಭ್ಯ ದೊರೆಯುವಂತಾಗಬೇಕು: ಜಿಲ್ಲಾಧಿಕಾರಿ


Team Udayavani, Dec 20, 2019, 6:30 PM IST

dc-1

ಉಡುಪಿ: ಜನಸಾಮಾನ್ಯರ ಕಂದಾಯ, ಪಿಂಚಣಿ ಮತ್ತು ಇತರ ಸಮಸ್ಯೆಗಳ ಬಗ್ಗೆ ಅರಿತು ಜಿಲ್ಲಾಡಳಿತವೇ ಸಂಬಂಧ‌ಪಟ್ಟ ಫ‌ಲಾನುಭವಿಯ ಮನೆ ಬಾಗಿಲಿಗೆ ತೆರಳಿ, ಅಲ್ಲೇ ಸೌಲಭ್ಯವನ್ನು ಮಂಜೂರು ಮಾಡುವುದರ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಲು ಜಿಲ್ಲಾಡಳಿತದ ಮೂಲಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ಶುಕ್ರವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಉಡುಪಿ, ಕಾಪು ಮತ್ತು ಬ್ರಹ್ಮಾವರ ವ್ಯಾಪ್ತಿಯ ಕಂದಾಯ ಅದಾಲತ್‌, ಪಿಂಚಣಿ ಅದಾಲತ್‌ ಮತ್ತು ಪೌತಿ ಅದಾಲತ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರು ತಮ್ಮ ಸಮಸ್ಯೆಗಳನ್ನು ಹಿಡಿದುಕೊಂಡು ಕಚೇರಿಯಿಂದ ಕಚೇರಿಗಳಿಗೆ ಅಲೆದಾಡಬಾರದು. ಬದಲಿಗೆ ಜಿಲ್ಲಾಡಳಿತದ ಬಳಿಯೇ ಸಾರ್ವನಿಕರಿಗೆ ಸಂಬಂಧ‌ಪಟ್ಟ ಅಗತ್ಯ ದಾಖಲೆಗಳು ಲಭ್ಯವಿದ್ದಲ್ಲಿ ನೇರವಾಗಿ ಜನರ ಮನೆಬಾಗಿಲಿಗೆ ತೆರಳಿ, ಅಲ್ಲೇ ಸಂಬಂಧ‌ಪಟ್ಟ ಯೋಜನೆಯ ಅರ್ಜಿ ಭರ್ತಿ ಮಾಡಿಸಿ, ಸ್ಥಳದಲ್ಲೇ ಸೌಲಭ್ಯ ಮಂಜೂರು ಮಾಡಬೇಕು. ಸ್ಥಳದಲ್ಲೇ ಮಂಜೂರು ಮಾಡಲು ಸಾಧ್ಯವಾಗದ ಪ್ರಕರಣಗಳಲ್ಲಿ ಕಾಲಮಿತಿಯಲ್ಲಿ ಜನರಿಗೆ ಸೇವೆಯನ್ನು ಒದಗಿಸುವಂತಾಗಬೇಕು. ಜಿಲ್ಲೆಯಲ್ಲಿ ಪೌತಿ ಸಮಸ್ಯೆಗಳು ಬಹಳಿಷ್ಟಿದೆ. ಕುಟುಂಬದ ಹಿರಿಯರು ಮೃತಪಟ್ಟ ನಂತರ, ಅವರ ಉತ್ತರಾಧಿಕಾರಿಗಳು ಹೆಸರು ತಿದ್ದುಪಡಿ ಮಾಡದೇ ಇರುವುದರಿಂದ ಆಸ್ತಿ, ಮುಂದಿನ ತಲೆಮಾರಿಗೆ ವರ್ಗಾವಣೆಯಾಗದೆ ಉಳಿದುಕೊಂಡಿದೆ. ಪೌತಿಗೆ ಸಂಬಂಧಪಟ್ಟ ಅರ್ಜಿಗಳನ್ನು ಬಗೆಹರಿಸಲು ಉಡುಪಿಯಲ್ಲಿ ಮೊತ್ತ ಮೊದಲ ಬಾರಿಗೆ ಪೌತಿ ಅದಾಲತ್‌ನ್ನು ಏರ್ಪಡಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, ಕಂದಾಯ, ಪಿಂಚಣಿ ಮತ್ತು ಪೌತಿಗೆ ಸಂಬಂಧಪಟ್ಟ ಎಲ್ಲ ಸಮಸ್ಯೆಗಳಿಗೂ ಒಂದೇ ಸೂರಿನಡಿ ಪರಿಹಾರ ದೊರಕಿಸಿಕೊಡುವ ಪ್ರಯತ್ನದ ಭಾಗವಾಗಿ ಕಂದಾಯ ಮತ್ತು ಪಿಂಚಣಿ ಅದಾಲತ್‌ಗಳನ್ನು ನಡೆಸಲಾಗುತ್ತಿದೆ. ಜನ ಸಾಮಾನ್ಯರಿಗೆ ಆಸರೆಯಾಗುವಂತಹ ಪಿಂಚಣಿ ಸೇವೆಯಲ್ಲಿ ಸಮಸ್ಯೆಗಳು ಉದ್ಭಸುತ್ತಿದ್ದು, ವ್ಯವಸ್ಥೆಯನ್ನು ಸರಳೀಕೃತಗೊಳಿಸಬೇಕೆನ್ನುವುದು ಈ ಕ್ರಾರ್ಯಕ್ರಮದ ಉದ್ದೇಶ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಎಲ್ಲ ತಾಲೂಕುಗಳಲ್ಲಿ ಕ್ರಮವಾಗಿ ಕಂದಾಯ ಮತ್ತು ಪಿಂಚಣಿ ಅದಾಲತ್‌ಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಕಾಪು ಶಾಸಕ ಲಾಲಾಜಿ. ಆರ್‌. ಮೆಂಡನ್‌, ಉಡುಪಿ ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್‌ ಪೂಜಾರಿ, ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು, ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ತಹಶೀಲ್ದಾರ್‌ಗಳು, ಗ್ರಾಮ ಲೆಕ್ಕಿಗರು, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ಕಂದಾಯ ಸೇವೆಯನ್ನು ನೀಡುವಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಇದನ್ನು ಇನ್ನು ಮುಂದೆಯೂ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳೂ ಶ್ರಮವಹಿಸಬೇಕು. ಕಂದಾಯ, ಪಿಂಚಣಿ ಮತ್ತು ಪೌತಿಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಮೊದಲ ಸುತ್ತಿನಲ್ಲಿ ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಅದಾಲತ್‌ಗಳನ್ನೂ ಎರಡು ಮತ್ತು ಮೂರನೇ ಸುತ್ತಿನಲ್ಲಿ ಕಾರ್ಕಳ, ಕುಂದಾಪುರ ಹಾಗೂ ಹೆಬ್ರಿ ತಾಲೂಕಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು.
-ಜಿ. ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.