ನಕಲಿ ನೋಟು ನೀಡಿ ಸಾರ್ವಜನಿಕರಿಗೆ ಮೋಸ
Team Udayavani, Oct 7, 2017, 12:01 PM IST
ಕೋಟ: ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಅಂಗಡಿ ಹಾಗೂ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವಂತೆ ನಟಿಸಿ ಐನೂರು ರೂ ಮುಖ ಬೆಲೆಯ ಹಲವು ನಕಲಿ ನೋಟುಗಳನ್ನು ಚಲಾವಣೆ ಮಾಡಿ ಸಾರ್ವಜನಿಕರಿಗೆ ಮೋಸ ಮಾಡಿದ ಘಟನೆ ಗುರುವಾರ ಸಾಸ್ತಾನ ಮೀನು ಮಾರುಕಟ್ಟೆ ಸಮೀಪ ಸಂಭವಿಸಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ಇಲ್ಲಿನ ಅಂಗಡಿಯೊಂದಕ್ಕೆ ಭೇಟಿ ನೀಡಿ ಸ್ವಲ್ಪ ಸಾಮಾನು ಖರೀದಿ ಮಾಡಿ ನಕಲಿ ನೋಟನ್ನು ನೀಡಿ ಚಿಲ್ಲರೆ ಪಡೆದ, ಅನಂತರ ಮೀನು ಮಾರುಕಟ್ಟೆಗೆ ತೆರಳಿ ಮೀನು ವ್ಯಾಪಾರ ನಡೆಸಿ ನಾಲ್ಕೈದು ಮಂದಿಗೆ ಈ ನೋಟನ್ನು ನೀಡಿದ್ದಾನೆ ಹಾಗೂ ಸುಮಾರು ಎರಡು ಗಂಟೆಗಳ ಕಾಲ ಇದೇ ಪರಿಸರದಲ್ಲಿ ಓಡಾಡುತ್ತಿದ್ದ ಎನ್ನಲಾಗಿದೆ.
ಸಂಜೆ ವೇಳೆ ಅಂಗಡಿಯವರು ಬೇರೆ ಗಿರಾಕಿಗಳಿಗೆ ಈ ನೋಟು ನೀಡಿದಾಗ ನಕಲಿ ಎಂಬ ಸಂಶಯ ವ್ಯಕ್ತವಾಗಿದ್ದು, ಅನಂತರ ಪರಿಶೀಲಿಸಿದಾಗ ಅವುಗಳು ಕಲರ್ ಝೆರಾಕ್ಸ್ ಮಾಡಿದ ಕಾಗದಗಳು ಎಂದು ತಿಳಿದು ಬಂತು ಆಗ ಎಲ್ಲರೂ ಮೋಸ ಹೋಗಿರುವುದು ತಿಳಿಯಿತು. ನೋಟನ್ನು ಸ್ವಲ್ಪವೂ ಅನುಮಾನ ಬಾರದಂತೆ ಝೆರಾಕ್ಸ್ ಮಾಡಿ ಕಟ್ಟಿಂಗ್ ಮಾಡಲಾಗಿತ್ತು.
ಮಹಿಳೆಯರೇ ಟಾರ್ಗೆಟ್: ಅಂಗಡಿ, ಮೀನು ಮಾರುಕಟ್ಟೆ ಎಲ್ಲ ಕಡೆಗಳಲ್ಲಿ ಮಹಿಳೆಯರ ಬಳಿಯೇ ಈತ ವ್ಯವಹಾರ ನಡೆಸಿದ್ದು, ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮೋಸಗೊಳಿಸಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರಿಂದ ತನಿಖೆ : ಸಾರ್ವಜನಿಕರು ಸಂಜೆ ವೇಳೆ ಕೋಟ ಪೊಲೀಸರಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ನೋಟುಗಳನ್ನು ವಶಕ್ಕೆ ಪಡೆದು ನಕಲಿ ಎಂದು ದೃಢಪಡಿಸಿದ್ದಾರೆ ಹಾಗೂ ಆರೋಪಿಯನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡದ್ದಾರೆ.
ಪ್ರಯೋಜನಕ್ಕಿರದ ಸಿ.ಸಿ. ಕೆಮರಾಗಳು
ಆರೋಪಿಯನ್ನು ಪತ್ತೆ ಹಚ್ಚುವ ಸಲುವಾಗಿ ಇಲ್ಲಿನ ಕೆಲವು ಅಂಗಡಿಗಳ ಸಿ.ಸಿ.ಕೆಮರಾಗಳನ್ನು ಪರಿಶೀಲನೆ ನಡೆಸಲಾಯಿತು. ರಸ್ತೆ ಪಕ್ಕದಲ್ಲಿರುವ ಕಟ್ಟಡದ ಸಿ.ಸಿ. ಕೆಮರಾಗಳನ್ನು ಅಂಗಡಿ ಬಾಗಿಲ ತನಕ ಮಾತ್ರ ಕವರ್ ಆಗುವಂತೆ ವ್ಯವಸ್ಥೆ ಮಾಡಿರುವುದರಿಂದ ಆರೋಪಿಯ ಚಹರೆ ಪತ್ತೆ ಹಚ್ಚಲು ಕಷ್ಟವಾಗಿದೆ.
ಒಂದು ವೇಳೆ ಕೆಮರಾ ರಸ್ತೆ ಕವರ್ ಆಗುವಂತಿದ್ದರೆ ಆರೋಪಿಯ ಕುರಿತು ಸುಳಿವು ಸುಲಭವಾಗಿ ದೊರೆಯುತ್ತಿತ್ತು ಎನ್ನಲಾಗಿದೆ. ಆದ್ದರಿಂದ ಎಲ್ಲ ಕಡೆ ರಸ್ತೆ ಆಸು-ಪಾಸಿನಲ್ಲಿರುವ ಸಿ.ಸಿ.ಕೆಮರಾಗಳನ್ನು ರಸ್ತೆಯ ಚಿತ್ರಣ ಕವರ್ ಆಗುವಂತೆ ವ್ಯವಸ್ಥೆ ಮಾಡಿದರೆ ಇಂತಹ ತುರ್ತು ಸಂದರ್ಭದಲ್ಲಿ ಸಹಾಯವಾಗುತ್ತದೆ ಎಂಬ ಅಭಿ ಪ್ರಾಯ ಸಾರ್ವಜನಿಕರಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ