ವಿಮೆ ಪಡೆಯಲು ಸುಳ್ಳು ದಾಖಲೆ, ಕಟ್ಟುಕತೆ: ಕೇಸು


Team Udayavani, Dec 2, 2022, 11:21 PM IST

ವಿಮೆ ಪಡೆಯಲು ಸುಳ್ಳು ದಾಖಲೆ, ಕಟ್ಟುಕತೆ: ಕೇಸು

ಪಡುಬಿದ್ರಿ: ಬಜಾಜ್‌ ಅಲಯನ್ಸ್‌ ಜನರಲ್‌ ಇನ್ಶೂರೆನ್ಸ್‌ ಕಂಪೆನಿಯಿಂದ ವಾಹನ ವಿಮಾ ದುರ್ಲಾಭ ಪಡೆಯಲು ಆರೋಪಿ ಗಳಾದ ಕಂದಲ್‌ ಕೋಡಿ ನೌಶಾದ್‌ (59) ಹಾಗೂ ಆತನ ಮಗ ನಬೀಲ್‌ ಕೆ. ಅವರು ಪೊಲೀಸ್‌ ಇಲಾಖೆಗೆ, ನ್ಯಾಯಾಲಯಕ್ಕೆ ಸುಳ್ಳು ಕತೆ ಕಟ್ಟಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ವಂಚಿಸಿರುವುದಾಗಿ ಕಂಪೆನಿಯ ಆಪರೇಷನ್‌ ಮ್ಯಾನೇಜರ್‌ ಚಂದ್ರ ಶೇಖರ್‌ ಅವರು ಪಡುಬಿದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕಂದಲ್‌ ಕೋಡಿ ನೌಶಾದ್‌ ಜಾಗ್ವಾರ್‌ ಕಾರಿನ ಮಾಲಕರಾಗಿದ್ದು, 2ನೇ ಆರೋಪಿ ನಬೀಲ್‌ ಕೆ. ನೌಶಾದ್‌ ಜಾಗ್ವಾರ್‌ ಕಾರನ್ನು ಚಲಾಯಿಸಿಕೊಂಡು ಆ. 13ರಂದು ಉಚ್ಚಿಲ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿರುವಾಗ ತೆಂಕ ಎರ್ಮಾಳು ಗ್ರಾಮದಲ್ಲಿ ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಮಗುಚಿ ಬಿದ್ದ ಕಾರಣ ಕಾರು ಜಖಂಗೊಂಡಿತ್ತು. ಈ ಕಾರಣಕ್ಕೆ ಕಾರು ಮಾಲಕ ಅಲಯನ್ಸ್‌ ಜನರಲ್‌ ಇನ್ಶೂರೆನ್ಸ್‌ ಕಂಪೆನಿಗೆ ವಿಮೆ ಪಡೆಯಲು ಅರ್ಜಿ ಸಲ್ಲಿಸಿದ್ದರು.

ವಿಮೆ ಅರ್ಜಿ ವಿಚಾರಣೆಯ ಸಮಯ ಕಂಪೆನಿಯ ಆಂತರಿಕ ತನಿಖಾ ತಂಡ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಿದಾಗ ಅಪಘಾತ ಸಮಯ ಕಾರನ್ನು ನಬೀಲ್‌ ಚಲಾಯಿಸುತ್ತಿದ್ದರು. ಕಾರಿನ ಒಳಗಡೆ ಅಪರಿಚಿತ ಮಹಿಳೆಯೊಬ್ಬರು ಇದ್ದರು ಎಂಬ ಮಾಹಿತಿ ಇತ್ತು. ಆದರೆ 1ನೇ ಆರೋಪಿಯು ವಿಮಾ ಅರ್ಜಿಯ ಜತೆ ಸಲ್ಲಿಸಿದ ದಾಖಲಾತಿಗಳನ್ನು ಪರಿಶೀಲಿಸಿದಾಗ ಅಪಘಾತದ ಸಮಯದಲ್ಲಿ ಕಾರನ್ನು ಚಲಾಯಿಸುತ್ತಿದ್ದ ಚಾಲಕನಿಗೆ ಎಲ್‌ಎಲ್‌ಆರ್‌ ಇದ್ದು, ಪಕ್ಕದಲ್ಲಿ 1ನೇ ಆರೋಪಿ ನೌಶಾದ್‌ ಕಾರಲ್ಲೇ ಕುಳಿತಿದ್ದರು ಎಂದೂ, ಅವರಿಗೆ ಡಿ.ಎಲ್‌. ಇರುವುದಾಗಿ ದಾಖಲಾತಿಯನ್ನು ನೀಡಿದ್ದರು. ಅಪಘಾತದ ಸಮಯದಲ್ಲಿ ಕಾರು ಮಾಲಕನ ಮೊಬೈಲ್‌ ಇರುವ ಸ್ಥಳವು ಅಪಘಾತ ಸ್ಥಳವಲ್ಲದ ಬೇರೆ ಸ್ಥಳದಲ್ಲಿ ಇದ್ದುದಾಗಿ ತಿಳಿದುಬಂದಿದೆ.

ನಬೀಲ್‌ ತನ್ನ ಡಿ.ಎಲ್‌. ದಾಖಲಾತಿಯನ್ನು ತಿರುಚಿದ ಮತ್ತು 1ನೇ ಆರೋಪಿ ನೌಶಾದ್‌ ಅಪಘಾತ ಸಮಯದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿರುವುದಾಗಿ ಕಟ್ಟು ಕಥೆಯನ್ನು ಮಾಡಿ ಸುಳ್ಳು ಮಾಹಿತಿ ನೀಡಿರುವುದಾಗಿದೆ. ಮೋಸದಿಂದ ಕಂಪೆನಿ ವಿಮೆಯನ್ನು ಪಡೆಯಲು ಯತ್ನಿಸಿದ ಕುರಿತು ನೀಡಲಾದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.