ಪಂಪ್‌ಸೆಟ್‌ ಆಧಾರ್‌ ಜೋಡಣೆಗೆ ರೈತರಿಗಿಲ್ಲ ಆಸಕ್ತಿ

ಸಂಘಟನೆಗಳ ವಿರೋಧ, ರೈತರ ನಿರುತ್ಸಾಹ

Team Udayavani, Feb 15, 2020, 6:08 AM IST

vidyuth-cut

ಮೆಸ್ಕಾಂ ಪಂಪ್‌ಸೆಟ್‌ ಸಂಪರ್ಕ ಹೊಂದಿರುವವರ ಆಧಾರ್‌ ಸಂಗ್ರಹ ಮಾಡುತ್ತಿದೆ. ಇತರ ಸಂಪರ್ಕಗಳಿಗೆ ಬಿಲ್‌ ಪಾವತಿ ಇದ್ದರೆ ಆ ಸಂದರ್ಭವಾದರೂ ಮಾಹಿತಿ ಪಡೆಯಬಹುದಾಗಿದೆ.

ಕುಂದಾಪುರ: ರೈತರ ಪಂಪ್‌ಸೆಟ್‌ಗಳ ಸಂಪರ್ಕಕ್ಕೆ ಆಧಾರ್‌ ಸಂಖ್ಯೆ ಜೋಡಣೆಗೆ ಮೆಸ್ಕಾಂ ನೀಡಿದ್ದ ಸೂಚನೆಗೆ ರೈತರು ನಿರುತ್ಸಾಹ ತೋರಿಸಿದ್ದಾರೆ. ಇನ್ನೂ ಶೇ.25ರಷ್ಟು ಮಂದಿ ಕೂಡ ಆಧಾರ್‌ ಪ್ರತಿ ನೀಡಿಲ್ಲ. ಇದೀಗ ಮೆಸ್ಕಾಂ ಲೈನ್‌ಮೆನ್‌ಗಳು ಮನೆ ಮನೆ ತಿರುಗಿ ಆಧಾರ್‌ ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದಾರೆ. ಜ.31 ಇದ್ದ ಗಡುವನ್ನು ಫೆ.29ರ ವರೆಗೆ ವಿಸ್ತರಿಸಲಾಗಿದೆ.

ಆಧಾರ್‌ ಜೋಡಣೆ
ರಾಜ್ಯದ ಎಲ್ಲ ಕೃಷಿ ಪಂಪ್‌ಸೆಟ್‌ಗಳು ಮತ್ತು ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಸೌಲಭ್ಯ ಪಡೆಯುವವರ ಕುರಿತು ಜ. 31ರೊಳಗೆ ವರದಿ ಒಪ್ಪಿಸುವಂತೆ ಮೆಸ್ಕಾಂ ಸೇರಿದಂತೆ ಎಲ್ಲ ವಿದ್ಯುತ್ಛಕ್ತಿ ಸರಬರಾಜು ಕಂಪೆನಿಗಳಿಗೆ ರಾಜ್ಯದ ಆರ್ಥಿಕ ಇಲಾಖೆ ನಿರ್ದೇಶಿಸಿದೆ. ಆದರೆ ಮೆಸ್ಕಾಂ ಪಂಪ್‌ಸೆಟ್‌ ಸಂಪರ್ಕ ಹೊಂದಿರುವವರ ಆಧಾರ್‌ ಸಂಗ್ರಹ ಮಾಡುತ್ತಿದೆ. ಇತರ ಸಂಪರ್ಕಗಳಿಗೆ ಬಿಲ್‌ ಪಾವತಿ ಇದ್ದರೆ ಆ ಸಂದರ್ಭವಾದರೂ ಮಾಹಿತಿ ಪಡೆಯಬಹುದಾಗಿದ್ದು ಪಂಪ್‌ಸೆಟ್‌ಗಳಿಗೆ ಉಚಿತವಾದ ಕಾರಣ ಮಾಹಿತಿಯನ್ನು ತಂದು ಕೊಡದೇ ಇದ್ದರೆ ಹೋಗಿಯೇ ಸಂಗ್ರಹಿಸಬೇಕಾಗುತ್ತದೆ.

ಅರ್ಹರ ಪತ್ತೆ
ಆಧಾರ್‌ ಸಂಗ್ರಹದ ಹಿಂದೆ ಬೇರೆಯದೇ ಸಂಶಯ ರೈತರನ್ನು ಕಾಡುತ್ತಿದೆ. ಅಸಲಿಗೆ 10 ಎಚ್‌ಪಿವರೆಗೆ ಮಾತ್ರ ರೈತರಿಗೆ ಉಚಿತ ವಿದ್ಯುತ್‌ ನೀಡಬಹುದಾಗಿದ್ದು ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಸಂಪರ್ಕ ಪಡೆದರೆ ಬಳಕೆಯ ದರ ವಿಧಿಸಬಹುದು. ಕೆಲವು ರೈತರು 10 ಎಚ್‌ಪಿಗಿಂತಲೂ ಹೆಚ್ಚು ಸಾಮರ್ಥ್ಯದ ಸಂಪರ್ಕಗಳನ್ನು ಹೊಂದಿದ್ದಾರೆ. ಇನ್ನು ಕೆಲವು ರೈತರು ರಾಜ್ಯದ ಬೇರೆ ಬೇರೆ ಕಡೆ ತೋಟಗಳನ್ನು ಹೊಂದಿದ್ದರೆ, ಅಲ್ಲಿಯೂ ಪಂಪ್‌ಸೆಟ್‌ ಸಂಪರ್ಕ ಪಡೆದಿದ್ದು ಅವುಗಳೆಲ್ಲ ಒಟ್ಟಾಗುವಾಗ 10 ಎಚ್‌ಪಿ ದಾಟುತ್ತದೆ. ಇದನ್ನು ಕಂಡು ಹಿಡಿಯುವುದು ಕೂಡ ಉದ್ದೇಶ. ಈ ಮೂಲಕ 10 ಎಚ್‌ಪಿಗಿಂತ ಕಡಿಮೆ ಸಾಮರ್ಥ್ಯದ ಸಂಪರ್ಕ ಹೊಂದಿದ ರೈತರು ಎಷ್ಟು ಎಂದು ಪತ್ತೆ ಹಚ್ಚುವುದು ಕೂಡ ಈ ಕ್ರಮದಲ್ಲಿ ಸೇರಿದೆ.

ವಿರೋಧ
ಭಾರತೀಯ ಕಿಸಾನ್‌ ಸಂಘದ ಕುಂದಾಪುರ ತಾಲೂಕು ಸಮಿತಿ ಆಧಾರ್‌ ದಾಖಲೆಗಳನ್ನು ನೀಡದಿರಲು ತೀರ್ಮಾನಿಸಿದೆ. ಕರಾವಳಿಯಲ್ಲಿ 4ರಿಂದ 5 ತಿಂಗಳು ಮಾತ್ರ ರೈತರು ಕೃಷಿ ಪಂಪುಗಳ ಮೂಲಕ ವಿದ್ಯುತ್‌ ಬಳಕೆ ಮಾಡುತ್ತಿದ್ದು, 2010ರಲ್ಲಿ ಮೆಸ್ಕಾಂ ಮೀಟರ್‌ ಅಳವಡಿಸಿ, ರೀಡಿಂಗ್‌ ಮಾಡಿ ನೀಡಿದ ಲೆಕ್ಕದಂತೆ ಪ್ರತಿ ಪಂಪಿನ ವಾರ್ಷಿಕ ವಿದ್ಯುತ್‌ ಬಳಕೆ 1,000 ಯುನಿಟ್‌ಗಿಂತ ಕಡಿಮೆ ಇದೆ. ಆದರೆ ಮೆಸ್ಕಾಂ ಕಂಪೆನಿಯು ಸರಾಸರಿ ಬಳಕೆಯ ಆಧಾರದಲ್ಲಿ ಪ್ರತಿ ಪಂಪಿಗೆ ಸರಕಾರದಿಂದ 5,500 ಯುನಿಟ್‌ಗಳಿಗೆ ಸಹಾಯಧನವನ್ನು ಪಡೆಯುತ್ತಿದೆ. ಪ್ರತಿ ಯುನಿಟ್‌ಗೆ 5.51 ರೂ.ನಂತೆ ಸರಕಾರಿ ಸಹಾಯಧನವನ್ನು ಭರಿಸಿಕೊಂಡಿದೆ. ಭಾ.ಕಿ.ಸಂ. ರೈತರ ಆಧಾರ್‌ ದಾಖಲೆಯನ್ನು ನೀಡದಿರಲು ತೀರ್ಮಾನಿಸಿದೆ.

ಯಾಕಾಗಿ?
10 ಎಚ್‌ಪಿ ಮತ್ತು ಕಡಿಮೆ ಸಾಮರ್ಥ್ಯದ ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ ಇದೆ. ಇದಕ್ಕೆ ವಿದ್ಯುತ್ಛಕ್ತಿ ಕಂಪೆನಿಗಳಿಗೆ ಸರಕಾರದಿಂದ ಹಣ ಪಾವತಿಯಾಗುತ್ತಿದೆ. ಕೃಷಿ ಪಂಪ್‌ಸೆಟ್‌ ಹೊಂದಿದ್ದೂ ಈ ವರೆಗೆ ಆಧಾರ್‌ ಮೊದಲಾದ ದಾಖಲೆಗಳನ್ನು ನೀಡದೆ ಇರುವ ಗ್ರಾಹಕರಿಂದ ಅವುಗಳನ್ನು ಸಂಗ್ರಹಿಸುವುದು, ರಾಜ್ಯದಲ್ಲಿ ಎಷ್ಟು ರೈತರು ಕೃಷಿ ಪಂಪ್‌ ಸೆಟ್‌ ಹೊಂದಿದ್ದಾರೆ? ಯಾರಿಗೆ ಯಾವ ರೀತಿಯ ಸಬ್ಸಿಡಿ ದೊರೆಯುತ್ತಿದೆ? ಎಂದು ತಿಳಿಯುವುದು ಇದರ ಮೊದಲ ಉದ್ದೇಶ.

ಉಚಿತ ವಿದ್ಯುತ್ ಕಟ್
ಆಧಾರ್‌ ಜೋಡಣೆಯಾದ ಬಳಿಕ 10 ಎಚ್‌ಪಿಗಿಂತ ಹೆಚ್ಚು ಸಾಮರ್ಥ್ಯ ಹೊಂದಿರುವ ರೈತರ ಪಂಪ್‌ಸೆಟ್‌ ಸಂಪರ್ಕದ ಉಚಿತ ವಿದ್ಯುತ್‌ಗೆ ಕೊಕ್ಕೆ ಬೀಳಲಿದೆಯೇ ಎಂಬ ಆತಂಕ ರೈತರಲ್ಲಿದೆ. ಅಷ್ಟಲ್ಲದೇ 10ಎಚ್‌ಪಿ ಸಾಮರ್ಥ್ಯದವರೆಗಿನ ಸಂಪರ್ಕಗಳಿಗೆ ಮಾತ್ರ ಸರಕಾರ ಸಬ್ಸಿಡಿ ನೀಡಲಿದೆಯೇ, ರೈತರು ಬಿಲ್‌ ಪಾವತಿಸಿ ಸರಕಾರ ರೈತರ ಖಾತೆಗೆ ಸಬ್ಸಿಡಿ ಹಾಕಲಿದೆಯೇ ಎಂಬಂತಹ ಅನುಮಾನಗಳೂ ಮೂಡಿವೆ.

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.