ಕಡ್ಡಾಯಗೊಳ್ಳದ ಫಾಸ್ಟಾಗ್‌; ವಾಹನ ಸಂಚಾರ ಎಂದಿನಂತೆ


Team Udayavani, Jan 16, 2020, 12:54 AM IST

fastage

ಕೋಟ: ಕೇಂದ್ರ ಸರಕಾರದ ಆದೇಶ ದಂತೆ ಜ. 15ರಿಂದ ದೇಶದ ಎಲ್ಲ ಟೋಲ್‌ ಪ್ಲಾಜಾಗಳಲ್ಲಿ ಫಾಸ್ಟಾಗ್‌ ಕಡ್ಡಾಯಗೊಂಡು ಎರಡು ಗೇಟ್‌ಗಳನ್ನು ಹೊರತುಪಡಿಸಿ ಮಿಕ್ಕೆಲ್ಲವು ನಗದು ರಹಿತವಾಗಿ ಕಾರ್ಯನಿರ್ವಹಿಸಬೇಕಿತ್ತು. ಆದರೆ ಬುಧವಾರ ಈ ಆದೇಶ ಕಡ್ಡಾಯವಾಗಿ ಜಾರಿಗೊಂಡಿಲ್ಲ ಹಾಗೂ ಕರಾವಳಿಯ ಎಲ್ಲ ಟೋಲ್‌ ಗೇಟ್‌ಗಳಲ್ಲಿ ಸಂಚಾರ ಹಿಂದಿನಂತೆ ಮುಂದುವರಿದಿದೆ.

ಉಡುಪಿ, ದ.ಕ. ಟೋಲ್‌ಗ‌ಳಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದ ಎರಡು ಟೋಲ್‌ಪ್ಲಾಜಾಗಳಲ್ಲಿ 2 ಗೇಟುಗಳು ಸ್ಥಳೀಯರಿಗೆ, 2 ತುರ್ತು ಪ್ರವೇಶಕ್ಕೆ ಹಾಗೂ 2ರಲ್ಲಿ ನಗದು ವ್ಯವಹಾರ ನಡೆಯುತ್ತಿತ್ತು. ಆದೇಶದ ಪ್ರಕಾರ ಜ. 15ಕ್ಕೆ ಈ ವ್ಯವಸ್ಥೆ ರದ್ದುಗೊಂಡು 2 ಗೇಟ್‌ ಹೊರತುಪಡಿಸಿ ಮಿಕ್ಕೆಲ್ಲ ಫಾಸ್ಟಾ Âಗ್‌ ಆಗಬೇಕಿತ್ತು. ಆದರೆ ಈ ರೀತಿ ಮಾಡಿಲ್ಲ. ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಎನ್‌.ಎಚ್‌ಎಐಯಿಂದ ಯಾವುದೇ ಸೂಚನೆ ಹೊರಬಿದ್ದಿಲ್ಲ ಎನ್ನಲಾಗಿದೆ.

ಜ. 16ರಿಂದ ದುಪ್ಪಟ್ಟು ಶುಲ್ಕ ಸಾಧ್ಯತೆ
ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್‌ ಫ್ಲಾಜಾ ದಲ್ಲಿ ಫಾಸ್ಟಾ Âಗ್‌ ಅಳವಡಿಸದ ವಾಹನದವರಿಗೆ ಜ. 16ರ ಬಳಿಕ ದುಪ್ಪಟ್ಟು ಶುಲ್ಕ ವಿಧಿಸುವ ಸಾಧ್ಯತೆ ಇದೆ. ಬುಧವಾರದವರೆಗೆ ಹಣ ಪಾವತಿ ಸುವ ವಾಹನಗಳು ಹಿಂದಿನ ಮೊತ್ತದಲ್ಲೇ ಶುಲ್ಕ ವಿಧಿಸಿ ಸಾಗಿವೆ. ಫಾಸ್ಟಾ Âಗ್‌ನ ಅಳವಡಿಕೆ ಕಾರ್ಯ ನಿರಂತರವಾಗಿ ನಡೆಯುತ್ತಿದೆ.

ಹೆಜಮಾಡಿ: ನಗದು ಪಾವತಿಗೆ ಒಂದೇ ದ್ವಾರ
ಪಡುಬಿದ್ರಿ: ಹೆಜಮಾಡಿ ಟೋಲ್‌ ಗೇಟ್‌ನಲ್ಲಿ ಬುಧವಾರ ಮಂಗಳೂರಿಗೆ ತೆರಳುವ ವಹನಗಳ ದಟ್ಟಣೆ ಇದ್ದುದರಿಂದ ಎರಡು ನಗದು ಪಾವತಿ ದ್ವಾರಗಳು ಕಾರ್ಯವೆಸಗಿವೆ. ಗುರುವಾರದಿಂದ ಒಂದೇ ನಗದು ಪಾವತಿ (7ನೇ ದ್ವಾರ) ದ್ವಾರವು ಕಾರ್ಯವೆಸಗಲಿದೆ. ನಾಳೆಯಿಂದ ಫಾಸ್ಟಾ Âಗ್‌ ದ್ವಾರದಲ್ಲಿ ಇದನ್ನು ಹೊಂದದ ವಾಹನಗಳು ಬಂದಲ್ಲಿ ದುಪ್ಪಟ್ಟು ಪಾವತಿಸಿ ತೆರಳಬೇಕಾಗುತ್ತದೆ ಎಂದು ಹೆಜಮಾಡಿ ಟೋಲ್‌ ಗೇಟ್‌ ಮೂಲಗಳು ತಿಳಿಸಿವೆ.

ಬಗೆಹರಿಯದ ಬಸ್‌ ಸಮಸ್ಯೆ
ಉಳ್ಳಾಲ: ಕಡ್ಡಾಯ ಟೋಲ್‌ ಆರಂಭವಾದರೆ ಮಂಗಳೂರು-ತಲಪಾಡಿ ನಡುವೆ ಸಂಚರಿಸುವ ಎಲ್ಲ ಬಸ್‌ಗಳು ಕಡ್ಡಾಯ ಟೋಲ್‌ನಡಿ ಬರುವುದರಿಂದ ಎಷ್ಟು ಟೋಲ್‌ ಕಟ್ಟಬೇಕು ಎಂಬ ವಿಚಾರದಲ್ಲಿ ಯಾವುದೇ ಒಪ್ಪಂದ ನಡೆದಿಲ್ಲ. ಟೋಲ್‌ ಕಡ್ಡಾಯ ಆದರೆ ಗೇಟ್‌ ಬಳಿಯೇ ಬಸ್‌ ಸಂಚಾರ ಮೊಟಕುಗೊಳಿಸುವ ಸಾಧ್ಯತೆಯಿದ್ದು ಮೇಲಿನ ತಲಪಾಡಿ ಮತ್ತು
ಕೇರಳದ ಗಡಿ ಪ್ರದೇಶಕ್ಕೆ ತೆರಳುವ ಪ್ರಯಾಣಿಕ ರಿಗೆ ತೊಂದರೆಯಾಗಲಿದೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.