ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲ: ಫೆ. 22 ರಿಂದ ಅತಿರುದ್ರ ಮಹಾಯಾಗ ಆರಂಭ


Team Udayavani, Feb 21, 2023, 5:43 PM IST

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲ: ಫೆ. 22 ರಿಂದ ಅತಿರುದ್ರ ಮಹಾಯಾಗ ಆರಂಭ

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ. 22 ರಿಂದ ಮಾ.5ರ ತನಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯಲಿದೆ ಎಂದು ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು.

ದೇಗುಲದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನಗಳ ಕಾಲ ನಿರಂತರವಾಗಿ ಯಾಗ ನಡೆಯಲಿದೆ. ಇದಕ್ಕಾಗಿ ವೇದಿಕೆ, ಯಾಗ ಮಂಟಪ ರಚಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿಶೇಷವಾದ ವೇದಿಕೆಗಳನ್ನು ರಚಿಸಲಾಗಿದೆ ಎಂದರು.

ಯಾಗಕ್ಕೆ ಆಗಮಿಸುತ್ತಿರುವ 180 ಋತ್ವಿಜರ ವಾಸ್ತವ್ಯಕ್ಕಾಗಿ ವಸತಿಗೃಹ ನಿರ್ಮಿಸಲಾಗಿದೆ. 12 ದಿನಗಳ ಕಾಲ ನಡೆಯಲಿರುವ ಯಾಗದಲ್ಲಿ ಭಾಗವಹಿಸುವ 35 ಸಾವಿರದಿಂದ 1 ಲಕ್ಷದ ವರೆಗಿನ ಭಕ್ತರಿಗೆ ಅನ್ನಸಂತರ್ಪಣೆಗೆ ಬೇಕಾಗುವ ಭೋಜನ ವ್ಯವಸ್ಥೆಗೆ ಪಾಕ ಶಾಲೆ, ಭೋಜನ ಶಾಲೆ, ಉಗ್ರಾಣ ಸಜ್ಜುಗೊಳಿಸಲಾಗಿದೆ. ಭಕ್ತರಿಗೆ ಬೇಕಾಗುವ ಮಾಹಿತಿ ಕೇಂದ್ರ, ಸ್ವಾಗತ ಕೇಂದ್ರ, ಸೇವಾ ಕೇಂದ್ರ, ಧನಸಹಾಯ ಮಾಡುವ ಭಕ್ತರಿಗೆ ಪ್ರಸಾದ ಕೌಂಟರ್‌ನ ವ್ಯವಸ್ಥೆಗೊಳಿಸಲಾಗಿದೆ ಎಂದವರು ತಿಳಿಸಿದರು.

ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಮಹೇಶ್‌ ಠಾಕೂರ್‌ ಮಾತನಾಡಿ, ಯಾಗದ ಪ್ರಯುಕ್ತ ಪ್ರತಿನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಯಾಗಕ್ಕಾಗಿ ಮಾಹೆ ವಿ.ವಿ. ಮತ್ತು ಖಾಸಗಿಯವರಿಂದ 7 ರಿಂದ 8 ಎಕರೆ ಜಾಗವನ್ನು ಬಳಸಿಕೊಳ್ಳಲಾಗಿದೆ. ದೇಗುಲ ಮತ್ತು ಭಕ್ತರ ಸಹಕಾರದೊಂದಿಗೆ ಸುಮಾರು 4 ಕೋ.ರೂ. ವೆಚ್ಚದಲ್ಲಿ ಯಾಗ ಜರಗಲಿದೆ ಎಂದರು.

ಮಾ. 2, 3, 4ರಂದು ವಾರಣಾಸಿಯ ಗಂಗಾರತಿ ತಂಡದಿಂದ “ಶಿವಾರತಿ’ ಮಾಡಿಸಲಾಗುವುದು. ಫೆ. 22ರಿಂದ ಭಕ್ತರಿಂದ ಹೊರೆಕಾಣಿಕೆ ಸ್ವೀಕರಿಸಲಾಗುವುದು. ವಿಶೇಷ ಆಕರ್ಷಣೆಯಾಗಿ ಪುಂಗನೂರು ತಳಿಯ 5 ಹಸುಗಳನ್ನು ದೇಗುಲಕ್ಕೆ ತರಲಾಗಿದೆ. ಸುಮಾರು 2,000 ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿತ್ಯ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಸಚಿವರು, ಗಣ್ಯರು ಭಾಗವಹಿಸುವರು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎಂದು ತಿಳಿಸಿದರು.

ಮಾ. 4ರ ಸಂಜೆ ದೇಗುಲಕ್ಕೆ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳನ್ನು ವಿಶೇಷ ಮೆರವಣಿಗೆಯಲ್ಲಿ ಕರೆ ತರಲಾಗುವುದು. ಸಂಜೆ 5.30ಕ್ಕೆ ಸ್ವಾಮೀಜಿಯವರು ಅನುಗ್ರಹ ಭಾಷಣ ಮಾಡಲಿದ್ದಾರೆ. ಅನಂತರ ಸ್ವಾಮೀಜಿಯವರಿಂದ ಶ್ರೀಚಂದ್ರಮೌಳೀಶ್ವರ ಸ್ವಾಮಿಗೆ ಪೂಜೆ ನೆರವೇರಲಿದೆ. ಮಾ. 5ರಂದು ಯಾಗ ಮಂಟಪದಲ್ಲಿ ಬೆಳಗ್ಗೆ 6.30ರಿಂದ ಏಕಾದಶಿ ಕುಂಡಗಳಲ್ಲಿ ಅತಿರುದ್ರ ಮಹಾಯಾಗ, 11.30ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಸ್ವಾಮೀಜಿಯವರಿಂದ ಕಲಶಾಭಿಷೇಕ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಲಿದೆ ಎಂದವರು ತಿಳಿಸಿದರು.

ದೇಗುಲದ ಮೊಕ್ತೇಸರ ದಿನೇಶ್‌ ಪ್ರಭು, ಟ್ರಸ್ಟಿ ಸಂಜಯ ಪ್ರಭು, ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಕುಕ್ಕೆಹಳ್ಳಿ, ಕೋಶಾಧಿಕಾರಿ ಸತೀಶ್‌ ಪಾಟೀಲ್‌, ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಎಸ್‌. ಮಧ್ದೋಡಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ, ಕಾರ್ಯಾಲಯ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಶಿವಪಾಡಿಗೆ ಚಿತ್ರನಟ ರಕ್ಷಿತ್‌ ಶೆಟ್ಟಿ ಭೇಟಿ: ಪುಂಗನೂರು ಗೋವುಗಳನ್ನು ಮುದ್ದಾಡಿದ ನಟ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.