ಲಿಂಗ ತಾರತಮ್ಯಕ್ಕೆ ಭ್ರೂಣ ಲಿಂಗ ಪತ್ತೆ ಕಾರಣ: ಡಾ| ರಾಮರಾವ್‌


Team Udayavani, Jul 22, 2018, 6:30 AM IST

2107kdpp7.jpg

ಕುಂದಾಪುರ: ಪ್ರಸ್ತುತ ಉಡುಪಿಯಲ್ಲಿಯೇ ಲಿಂಗಾನುಪಾತದಲ್ಲಿ ವ್ಯತ್ಯಾಸವಿದ್ದು, ಒಂದು ಸಾವಿರ ಪುರುಷರಿಗೆ 950 ಮಂದಿ ಮಹಿಳೆಯರಿದ್ದಾರೆ. ಈ ರೀತಿಯ ಲಿಂಗ ತಾರತಮ್ಯಕ್ಕೆ ಭ್ರೂಣ ಲಿಂಗ ಪತ್ತೆ ಕೂಡ ಒಂದು ಪ್ರಮುಖ ಕಾರಣ ಎಂದು ಉಡುಪಿ ಜಿಲ್ಲಾಸ್ಪತ್ರೆಯ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮರಾವ್‌ ಹೇಳಿದರು. 

ಶನಿವಾರ ಕುಂದಾಪುರದ ಭಂಡಾಕಾರ್ ಕಾಲೇಜಿನಲ್ಲಿ ತಾ|  ಕಾನೂನು ಸೇವಾ ಸಮಿತಿ, ಬಾರ್‌ ಅಸೋಸಿಯೇಶನ್‌ ಕುಂದಾಪುರ, ಅಭಿಯೋಗ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭ್ರೂಣ ಲಿಂಗ ತಪಾಸಣೆ ತಡೆಯ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. 

ಪುರುಷ ಹಾಗೂ ಮಹಿಳಾ ಅಸಮಾನತೆ ಎಲ್ಲ ಕಡೆಗಳಲ್ಲಿಯೂ ಇದ್ದು, ಈ ಸಮಸ್ಯೆಯ ಗಂಭೀರತೆ ನಾವೆಲ್ಲರೂ ಅರಿಯಬೇಕಿದೆ. ಭ್ರೂಣ ಲಿಂಗ ತಪಾಸಣೆ ತಡೆಯ ಕುರಿತು ಇನ್ನಷ್ಟು ಅರಿವು ಮೂಡಬೇಕಿದೆ. ಪರಸ್ಪರ ಪುರುಷ, ಸ್ತ್ರೀಯರ ಮಧ್ಯೆ ತುಂಬಾ ತಾರತಮ್ಯವಿದೆ. ಅದಕ್ಕೆ ಕಾರಣಗಳು ಹಲವು ಎಂದರು.

ಸಹಬಾಳ್ವೆಯಿಂದ ಸಂತೋಷ
ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಕುಂದಾಪುರ ತಾ| ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಡಿ.ಪಿ.ಕುಮಾರಸ್ವಾಮಿ ಮಾತನಾಡಿ, ಜೀವನದಲ್ಲಿ ಕುಟುಂಬ, ಸಮಾಜದೊಂದಿಗೆ ಹೊಂದಾಣಿಕೆ  ಬಹಳ ಮುಖ್ಯ. ಹೀಗಿದ್ದಾಗ ಎಲ್ಲವನ್ನೂ ಕಲಿಯುವುದರ ಜತೆಗೆ ಬದುಕನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ. ಪರಸ್ಪರರೊಂದಿಗೆ ಹೊಂದಾಣಿಕೆಗಳು ನಮ್ಮನ್ನು ಸಂತೋಷದಿಂದಿರಲು ಸಹಕಾರಿಯಾಗುತ್ತದೆ ಎಂದರು. 

ಕುಂದಾಪುರ ಬಾರ್‌ ಅಸೋಸಿ ಯೇಶನ್‌ನ ಅಧ್ಯಕ್ಷ ಸಳ್ವಾಡಿ ನಿರಂಜನ ಹೆಗ್ಡೆ, ಅಧ್ಯಕ್ಷತೆ ವಹಿಸಿದ್ದರು.  ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶಚಂದ್ರ ಶೆಟ್ಟಿ, ಬಾರ್‌ ಅಸೋಸಿಯೇಶನ್‌ನ ಪ್ರ. ಕಾರ್ಯದರ್ಶಿ ಎಚ್‌. ಪ್ರಮೋದ್‌ ಹಂದೆ ಉಪಸ್ಥಿತರಿದ್ದರು. 

ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ ನಾರಾಯಣ ಶೆಟ್ಟಿ ಸ್ವಾಗತಿಸಿದರು. ಇಂಗ್ಲೀಷ್‌ ವಿಭಾಗದ ಉಪಾನ್ಯಾಸಕ ಶರಣ್‌ ಕಾರ್ಯಕ್ರಮ ನಿರ್ವಹಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಶುಭಕರಾಚಾರಿ ವಂದಿಸಿದರು.

ತಂತ್ರಜ್ಞಾನ ಸದುದ್ದೇಶಕ್ಕೆ ಬಳಕೆಯಾಗಲಿ
ತಂತ್ರಜ್ಞಾನ ನಮ್ಮ ಎಲ್ಲೆಗಳನ್ನು ಮೀರಿ ಬೆಳೆದಿದೆ. ಅದರ ಪ್ರಗತಿ ಸಮಾಜದ ಸ್ವಾಸ್ಥ್ಯ ಹಾಗೂ ಸದ್ಭಳಕೆಗೆ ವಿನಿಯೋಗವಾಗಬೇಕೇ ಹೊರತು, ದುರ್ಬಳಕೆ ಆಗಬಾರದು. ತಂತ್ರಜ್ಞಾನದಲ್ಲಿ ಒಂದಾದ ಭ್ರೂಣ ತಪಾಸಣೆ ಮೆಷಿನ್‌ ಹುಟ್ಟುವ ಮಗುವಿನ ದೈಹಿಕ ಲೋಪದೋಷಗಳನ್ನು ಆರೋಗ್ಯದ ಸಮಸ್ಯೆ ಅರಿಯಲು ಬಳಸಬೇಕು. ಆದರೆ ಇದನ್ನು ಲಿಂಗ ತಪಾಸಣೆಗೆ ಬಳಸುತ್ತಿರುವುವುದು ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ. ಹೆಣ್ಣು ಲಿಂಗ ಭ್ರೂಣ ಹತ್ಯೆಯಾಗುತ್ತಿದೆ. ಇದರಿಂದ ಸಾಮಾಜಿಕ ಅಭದ್ರತೆ, ಅಸಮತೋಲನಕ್ಕೆ ದಾರಿಯಾಗಿದೆ. ಇದರ ಅರಿವಿನ ಜತೆಗೆ ಕಾನೂನಿನ ಅರಿವು ಇರಬೇಕಾಗಿದೆ.
– ಶ್ಯಾಮಲಾ ಭಂಡಾರಿ, ವಕೀಲರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.