ಸರಕಾರಿ ಕಚೇರಿಗಳಲ್ಲಿ ದಲ್ಲಾಳಿ, ಪ್ರಭಾವಿಗಳಿಗೆ ಅಂಕುಶ: ಸುನಿಲ್
Team Udayavani, Feb 13, 2022, 6:12 AM IST
ಕಾರ್ಕಳ: ಸರಕಾರಿ ಕಚೇರಿಗಳಲ್ಲಿ ದಲ್ಲಾಳಿಗಳು, ಪ್ರಭಾವಿಗಳಿಗೆ ಅಂಕುಶ ಹಾಕಿ ಜನಸಾಮಾನ್ಯರೇ ನೇರವಾಗಿ ಬಂದು ಕೆಲಸ ಮಾಡಿಸಿಕೊಂಡು ಹೋಗುವಂತಹ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಕಾರ್ಕಳದಲ್ಲಿ ಕಡತ ವಿಲೇವಾರಿ ಸಪ್ತಾಹಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕೊರೊನಾ, ಲಾಕ್ಡೌನ್ನಿಂದ ಜನಸಾಮಾನ್ಯರ ಕಚೇರಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಕೊರೊನಾ ಕರ್ತವ್ಯದಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದು ಕೂಡ ಹಿನ್ನಡೆಗೆ ಇನ್ನೊಂದು ಕಾರಣ. ನಿಧಾನಗತಿ ಪಡೆದಿದ್ದ ಆಡಳಿತಕ್ಕೆ ವೇಗ ನೀಡಲಾಗುತ್ತಿದ್ದು, ಮೊದಲ ಹೆಜ್ಜೆಯಾಗಿ ಕಾರ್ಕಳದಲ್ಲಿ ಕಡತ ವಿಲೇವಾರಿ ಸಪ್ತಾಹ, ಬೃಹತ್ ಕಂದಾಯ ಮೇಳ ನಡೆಯಲಿದೆ. ಮಾರ್ಚ್ನಲ್ಲಿ ದ.ಕ. ಜಿಲ್ಲೆಯಲ್ಲಿ ಚಾಲನೆ ನೀಡಲಿದ್ದೇವೆ ಎಂದರು.
ಈ ಪ್ರಕ್ರಿಯೆಯನ್ನು ಮುಂದೆ ರಾಜ್ಯದ ಎಲ್ಲೆಡೆಗೆ ವಿಸ್ತರಿಸಿ ಜಡ್ಡುಗಟ್ಟಿದ ಇಲಾಖೆಗಳ ಆಡಳಿತಕ್ಕೆ ಚುರುಕು ನೀಡುವ ಕಾರ್ಯ ಮಾಡಲಿದ್ದೇವೆ. ಸರಕಾರಿ ಕಚೇರಿಗಳು ಸಾರ್ವಜನಿಕ ಸೇವೆಗೆ ಮುಕ್ತವಾಗಿರಬೇಕು. ದಲ್ಲಾಳಿ ಇಲ್ಲದೆ, ಪ್ರಭಾವ ಬಳಸದೆ ಸಾಮಾನ್ಯ ಜನರ ಕೆಲಸಗಳು ಆಗುತ್ತಿಲ್ಲ; ಅಧಿಕಾರಿಗಳು ಬಾಹ್ಯ ಒತ್ತಡವಿಲ್ಲದೆ ಕಡತ ಮುಟ್ಟುತ್ತಿಲ್ಲ ಎನ್ನುವ ದೂರುಗಳಿವೆ. ಈ ಮನಸ್ಥಿತಿಯಿಂದ ಅಧಿಕಾರಿಗಳು ಹೊರ ಬಂದು ಕೆಲಸ ಮಾಡಬೇಕು. ಕಚೇರಿಗೆ ಬರುವ ಜನಸಾಮಾನ್ಯರನ್ನು ಕುಳ್ಳಿರಿಸಿ ಅವರ ಸಮಸ್ಯೆ ಆಲಿಸಬೇಕು. ಇಂತಹದ್ದೊಂದು ವಾತಾವರಣ ಕಚೇರಿಗಳಲ್ಲಿ ಸೃಷ್ಟಿಯಾಗಬೇಕು. ದಲ್ಲಾಳಿ, ಪ್ರಭಾವಿ ಪರಂಪರೆ ದೂರವಾಗಬೇಕು ಎಂದರು.
ಮಾ. 10: ಯಕ್ಷರಂಗಾಯಣಕ್ಕೆ ಭೂಮಿ ಪೂಜೆ :
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉತ್ಸವ ನಡೆಸಲಾಗುವುದು. ಬಜೆಟ್ನಲ್ಲಿ ಅನುದಾನ ಕೇಳಲಾಗಿದೆ. ಮುಂದೂಡಲ್ಪಟ್ಟ ಕಾರ್ಕಳ ಉತ್ಸವವನ್ನು ಮಾ. 10ರಿಂದ 20ರ ವರೆಗೆ ನಡೆಸಲು ನಿರ್ಧರಿಸಿದ್ದೇವೆ. ಮಾ. 10ರಂದು ಯಕ್ಷರಂಗಾಯಣ ಕೇಂದ್ರಕ್ಕೆ ಭೂಮಿ ಪೂಜೆ ನಡೆಯಲಿದೆ ಎಂದು ಸಚಿವ ಸುನಿಲ್ ಕುಮಾರ್ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು