ಕೊನೆಗೂ ಕಾರ್ಕಳದ ಈಜುಕೊಳ ಸಾರ್ವಜನಿಕರಿಗೆ ಮುಕ್ತ

ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ 15 ದಿವಸ ಉಚಿತ ಪ್ರವೇಶ

Team Udayavani, Aug 17, 2019, 5:04 AM IST

1608KKRAM12A

ವಿಶೇಷ ವರದಿ –ಕಾರ್ಕಳ : ಕೋಟಿ ಚೆನ್ನಯ ಥೀಮ್‌ ಪಾರ್ಕ್‌ ಬಳಿಯಿರುವ ತಾಲೂಕು ಕ್ರೀಡಾಂಗಣದಲ್ಲಿ 1.5 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾದ ಈಜುಕೊಳವೀಗ ಸಾರ್ವಜನಿಕ ರಿಗೆ ಮುಕ್ತವಾಗಿದೆ. ಈಜುಕೊಳ ನಿರ್ಮಾಣವಾಗಿ ಎರಡು ವರ್ಷ ಕಳೆದರೂ ಸಾರ್ವಜನಿಕರ ಉಪ ಯೋಗಕ್ಕೆ ಲಭ್ಯವಾಗದ ಕಾರಣ ಸಾರ್ವಜನಿಕ ವಲಯದಿಂದ ಭಾರಿ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಇದೀಗ ಆ. 15ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಕಾರ್ಕಳದ ಜನತೆಗೆ ಹೊಸ ಕೊಡುಗೆಯಾಗಿ ಮುಕ್ತವಾಗಿದೆ.

ಅಡೆತಡೆಗಳಿತ್ತು
ವಿವಿಧ ಇಲಾಖೆಗಳ ಅನುದಾನ ದಿಂದ ಸುಸಜ್ಜಿತ ಈಜುಕೊಳ ನಿರ್ಮಾಣ ವಾಯಿತಾದರೂ ಬಳಿಕ ಹಲವು ಸಮಸ್ಯೆ ಎದುರಿಸುವಂತಾಯಿತು. ಮೊದಲಾಗಿ ಕೊಳಕ್ಕೆ ನೀರು ಪೂರೈಸುವುದೇ ದೊಡ್ಡ ಸಮಸ್ಯೆಯಾಗಿ ಕಂಡು ಬಂದಿತು. ಬೋರ್‌ವೆಲ್‌ ಕೊರೆಯಲು ನೀರಿನ ಮೂಲವಿಲ್ಲ ಎಂದು ತಜ್ಞರು ತಿಳಿಸಿದರು. ಆ ಬಳಿಕ ಸಮೀಪದ ರಾಮಸಮುದ್ರ ಜಲಮೂಲ ದಿಂದ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡಲಾಯಿತಾದರೂ ಬೇಸಗೆಯಲ್ಲಿ ಕುಡಿಯುವ ನೀರಿನ ಬವಣೆ ತಲೆದೋರಿದ ಹಿನ್ನೆಲೆಯಲ್ಲಿ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು.

ವಿಸ್ತೀರ್ಣ
ಪುರಸಭಾ ವ್ಯಾಪ್ತಿಯಲ್ಲಿನ 10.38 ಎಕ್ರೆ ವಿಸ್ತೀರ್ಣದ ತಾಲೂಕು ಕ್ರೀಡಾಂಗಣದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಈಜುಕೊಳವು 54 ಅಡಿ ಅಗಲ, 82 ಅಡಿ ಉದ್ದ
ದೊಂದಿಗೆ 3-5 ಅಡಿ ಆಳ ಹೊಂದಿದೆ. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅನುದಾನದಲ್ಲಿ ನಿರ್ಮಾಣ ಗೊಂಡ ಈ ಈಜುಕೊಳದ ಕಾಮಗಾರಿ ಹೊಣೆ ನಿರ್ಮಿತಿ ಕೇಂದ್ರ ವಹಿಸಿತ್ತು.

ಈಜುಕೊಳಕ್ಕೆ 5 ಲಕ್ಷ ಅನುದಾನ
ಸಾರ್ವಜನಿಕ ಈಜುಕೊಳ ಅಭಿವೃದ್ಧಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 45 ಲಕ್ಷ ರೂ., ಮಲೆನಾಡು ಅಭಿವೃದ್ಧಿ ಮಂಡಳಿಯಿಂದ ಒಟ್ಟು 91.65 ಲಕ್ಷ ರೂ., ವಿಧಾನ ಪರಿಷತ್‌ (ಭಾನುಪ್ರಕಾಶ್‌) ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿತ್ತು.

ಓಸೋನ್‌ ಐಸ್‌ ಸ್ಥಾಪನೆ
ಕಾರ್ಕಳ ಜನತೆಯ ಬಹುದಿನಗಳ ಬೇಡಿಕೆಯೊಂದು ಈಡೇರುತ್ತಿದೆ. ಈಜುಕೊಳದ ನೀರಿನ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ 6.5 ಲಕ್ಷ ರೂ. ವೆಚ್ಚದಲ್ಲಿ ಓಝೋನ್‌ ಐಸ್‌ ಸ್ಥಾಪನೆಯಾಗಲಿದೆ.
-ಪ್ರವೀಣ್‌ ಕೆ. ಕೋಟ್ಯಾನ್‌ , ಕ್ರೀಡಾಂಗಣ ಸಮಿತಿ ಸದಸ್ಯರು

15 ದಿನ ಉಚಿತ
ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಕಾರ್ಕಳದ ಜನತೆಗೆ ಉಡುಗೊರೆಯಾಗಿ 15 ದಿನಗಳ ಕಾಲ ಉಚಿತ ಪ್ರವೇಶವಿದೆ. ಈಜು ಆಸಕ್ತರು ನೈಲಾನ್‌ ಬಟ್ಟೆ ಧರಿಸುವುದು ಕಡ್ಡಾಯವೆಂದು ಕ್ರೀಡಾಂಗಣ ಸಮಿತಿಯವರು ತಿಳಿಸಿದ್ದಾರೆ.

ಸಮಯ
ಬೆಳಗ್ಗೆ 6ರಿಂದ 11 ಹಾಗೂ ಸಂಜೆ 3ರಿಂದ 7.

ಬೇಬಿ ಪೂಲ್‌ ಸೇರ್ಪಡೆ
ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹೊಸದಾಗಿ ಬೇಬಿ ಪೂಲ್‌ ನಿರ್ಮಿಸಲಾಗಿದೆ. ಮಕ್ಕಳಿಗೆ ಅನುಕೂಲಕರವಾಗಿ 2 ಅಡಿ ಆಳದಲ್ಲಿ 12 ಅಡಿ ಅಗಲ ಹಾಗೂ 20 ಅಡಿ ಉದ್ದದಲ್ಲಿ ರಚನೆ ಮಾಡಲಾಗಿದೆ.

ದರ
ಸ್ವಿಮ್ಮಿಂಗ್‌ ಫ‌ೂಲ್‌ ಪ್ರವೇಶ ಶುಲ್ಕ 25 ರೂ. ನಿಗದಿಗೊಳಿಸಲಾಗಿದೆ. ತಿಂಗಳ ಸದಸ್ಯತ್ವಕ್ಕೆ 600 ರೂ., ವರ್ಷದ ಸದಸ್ಯತ್ವಕ್ಕೆ 6, 000 ರೂ. ಎಂದು ಫ‌ಲಕ ಅಳವಡಿಸಲಾಗಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.