ಪುರಾತನ ವಿಗ್ರಹ, ಪೂಜಾ ಸಾಮಗ್ರಿ ಪತ್ತೆ
Team Udayavani, Aug 13, 2017, 7:20 AM IST
ಹೆಬ್ರಿ: ಕಾರ್ಕಳ ತಾಲೂಕಿನ ಮುನಿಯಾಲು ಚಟ್ಕಲ್ಪಾದೆ ಸಮೀಪದ ಸಂಜೀವಿನಿ ಫಾರ್ಮ್ ಜಾಗದಲ್ಲಿ ನಾಗಬನದ ಕೆಲಸಮಾಡುತ್ತಿರುವಾಗ ಮಣ್ಣಿನ ಅಡಿಯಲ್ಲಿ ಪುರಾತನ ವಿಗ್ರಹಗಳು ಹಾಗೂ ಪೂಜಾ ಸಾಮಗ್ರಿಗಳು ಶುಕ್ರವಾರ ಪತ್ತೆಯಾಗಿವೆ.
ಜಾಗದಲ್ಲಿರುವ ನಾಗಬನದ ಜೀರ್ಣೋದ್ಧಾರ ಕಾಮಗಾರಿ ಪ್ರಗತಿ ಯಲ್ಲಿದ್ದು ನಾಗಬನದ ಪಕ್ಕದಲ್ಲಿ ಸುಮಾರು ಎರಡೂವರೆ ಅಡಿ ಎತ್ತರದ ಶಿಲೆಕಲ್ಲನ್ನು ತೆಗೆದು ನಾಗಬನದ ಬಳಿ ಇಡುವಾಗ ಕಲ್ಲಿನ ಅಡಿಯಲ್ಲಿ ದೇವಿಯ ಮೂರ್ತಿ, ಗಣಪತಿ ಮೂರ್ತಿ, ಆರತಿ, ಶಂಖ, ಘಂಟಾಮಣಿ, ಕೂರ್ಮಾ ವತಾರದ ಮೂರ್ತಿ ಸಹಿತ ಪೂಜಾ ಸಾಮಗ್ರಿಗಳು ಪತ್ತೆಯಾಗಿವೆ. ಬೃಹತ್ ಕಲ್ಲಿನ ಮೇಲೆ ಶಿವಲಿಂಗ ಮತ್ತು ಸೂರ್ಯ ಚಂದ್ರರ ಚಿತ್ರವನ್ನು ಕೆತ್ತಲಾಗಿದೆ. ಅಜೆಕಾರು ಕಂದಾಯ ನಿರೀಕ್ಷಕ ಮಂಜುನಾಥ ನಾಯಕ್, ವರಂಗ ಗ್ರಾಮ ಲೆಕ್ಕಾಧಿಕಾರಿ ಹಿತೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ತಿಂಗಳಿಂದ ಕೆಲಸ ಪ್ರಗತಿಯಲ್ಲಿದ್ದು ಇಂದು ಎತ್ತರದ ಶಿಲೆಕಲ್ಲನ್ನು ತೆಗೆಯುವಾಗ ಮಣ್ಣಿನ ಅಡಿಯಲ್ಲಿ ಪುರಾತನ ವಿಗ್ರಹಗಳು ಹಾಗೂ ಪೂಜಾ ಸಾಮಗ್ರಿಗಳು ಸಿಕ್ಕಿವೆ ಎಂದು ಸಂಜೀವಿನಿ ಫಾರ್ಮ್ ಮತ್ತು ಡೇರಿ ಕಾರ್ಯದರ್ಶಿ ಸವಿತಾ ಆರ್. ಆಚಾರ್ಯ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
MUST WATCH
ಹೊಸ ಸೇರ್ಪಡೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್