ಮಂಚಿಯಲ್ಲಿ ಅಗ್ನಿ ಅವಘಡ: ಅಕೇಶಿಯಾ ಮರ, ಕಟ್ಟಿಗೆ ರಾಶಿ ಬೆಂಕಿಗೆ ಆಹುತಿ
Team Udayavani, Jan 10, 2023, 4:13 PM IST
ಮಣಿಪಾಲ: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕಾಡಿನಲ್ಲಿ ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಇಡೀ ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿದೆ. ಇದರಿಂದ ಸುತ್ತಮುತ್ತ ಪರಿಸರದಲ್ಲಿ ಕೆಲಕಾಲ ದಟ್ಟ ಹೊಗೆ ಆವರಿಸಿಕೊಂಡಿತ್ತು. ರಾಜೀವನಗರದ ರತ್ನ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ ಅಕೇಶಿಯ ಮರಗಳು ಬೆಂಕಿಗೆ ಆಹುತಿಯಾಗಿವೆ.
ಮೊದಲಿಗೆ ಕಾಡಿನಲ್ಲಿ ಕಾಣಿಸಿಕೊಂಡ ಬೆಂಕಿಯ ಸಣ್ಣ ಕಿಡಿ, ನೋಡ ನೋಡುತ್ತಿದ್ದಂತೆ ವ್ಯಾಪಕವಾಗಿ ಹರಡಿದೆ. ರಾಜೀವನಗರದ 6ನೇ ಅಡ್ಡ ರಸ್ತೆಯ ಬಳಿಯ ಎರಡು ಎಕರೆಯಷ್ಟು ವ್ಯಾಪ್ತಿಯಲ್ಲಿ ಬೆಂಕಿ ಅಟ್ಟಹಾಸ ಮೆರೆದಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಪಾದಚಾರಿಗೆ ಬೈಕ್ ಢಿಕ್ಕಿ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು