ಮೂಳೂರು: ಕಾರ್ಪೊರೇಶನ್ ಬ್ಯಾಂಕ್ನಲ್ಲಿ ಬೆಂಕಿ
Team Udayavani, Feb 7, 2019, 12:55 AM IST
ಕಾಪು: ಮೂಳೂರು ಕಾರ್ಪೊರೇಶನ್ ಬ್ಯಾಂಕ್ನಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದಾಗಿ ಬೆಂಕಿ ಅವಘಢ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿಯುಂಟಾಗಿದೆ.
10 ಲಕ್ಷ ರೂ. ನಷ್ಟ ಅಂದಾಜು
ಬೆಂಕಿ ಅವಘಡದಿಂದಾಗಿ ಸರ್ವರ್ ರೂಮ್ ಸಂಪೂರ್ಣ ಸುಟ್ಟುಕರಕಲಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ಸೊತ್ತು ನಷ್ಟ ಅಂದಾಜಿಸಲಾಗಿದೆ.
ಸಮಯ ಪ್ರಜ್ಞೆ ಮೆರೆದ ಸ್ಥಳೀಯರು
ಬ್ಯಾಂಕ್ನ ಕಟ್ಟಡದಲ್ಲಿ ಬೆಂಕಿ ಕಂಡು ಬಂದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದರು. ತುರ್ತಾಗಿ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ದೊಡ್ಡ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಬ್ಯಾಂಕ್ನ ಎಜಿಎಂ ಕೆ. ಶ್ಯಾಮ್ಪ್ರಸಾದ್ ಶ್ಯಾನುಭೋಗ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ, ಹಾನಿ ಪರಿಶೀಲನೆ ನಡೆಸಿದೆ. ಎಲ್ಲಾ ವ್ಯವಸ್ಥೆಗಳನ್ನೂ ಶೀಘ್ರದಲ್ಲಿ ಸರಿಪಡಿಸಿ ಗ್ರಾಹಕರ ಸೇವೆಗೆ ಸನ್ನದ್ಧಗೊಳಿಸುವಂತೆ ಶಾಖಾಧಿಕಾರಿ ಮತ್ತು ಸಿಬಂದಿಗಳಿಗೆ ಸೂಚನೆ ನೀಡಿದ್ದಾರೆ.
ದಾಖಲೆ ಪತ್ರಗಳು, ಲಾಕರ್ ಸೇಫ್
ಬೆಂಕಿ ಅವಘಡದಿಂದ ಬ್ಯಾಂಕ್ನಲ್ಲಿರುವ ದಾಖಲೆ ಪತ್ರಗಳಿಗಾಗಲೀ, ಲಾಕರ್ಗಾಗಲೀ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಗ್ರಾಹಕರು ಯಾವುದೇ ಕಾರಣಕ್ಕೂ ಆತಂಕಿತರಾಗಬೇಕಿಲ್ಲ ಎಂದು ಶಾಖಾ ಪ್ರಬಂಧಕ ಅಂಕುರ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ