ಬಂಟಕಲ್ಲು ಕಾಲೇಜು ಬಳಿ ಕಾಡಿಗೆ ಬೆಂಕಿ
Team Udayavani, Mar 2, 2019, 12:35 AM IST
ಶಿರ್ವ: ಬಂಟಕಲ್ಲು ಎಂಜಿನಿಯರಿಂಗ್ ಕಾಲೇಜು ಬಳಿ ಪೆಟ್ರೊಲ್ ಪಂಪ್ನ ಎದುರುಗಡೆ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ತಗಲಿದ್ದು ಉಡುಪಿ ಅಗ್ನಿಶಾಮಕ ದಳದವರ ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿ ಹತೋಟಿಗೆ ಬಂದಿದೆ.
ಉರಿ ಬಿಸಿಲಿನ ತಾಪಕ್ಕೆ ವಿದ್ಯುತ್ ಟ್ರಾನ್ಸ್ಫೋರ್ಮರ್ನಲ್ಲಿ ಶಾರ್ಟ್ ಸರ್ಕ್ನೂಟ್ನಿಂದ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಎಕರೆ ಪ್ರದೇಶಕ್ಕೆ ಬೆಂಕಿ ತಗಲಿತ್ತು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೇಮಾರು ಸಾಂದೀಪನೀ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ಅಗ್ನಿಶಾಮಕದಳದವರಿಗೆ ಕರೆ ಮಾಡಿದ್ದು ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದರು. ಪರಿಸರದಲ್ಲಿಯೇ ಪೆಟ್ರೋಲ್ ಪಂಪ್ ಇದ್ದು ಸಕಾಲಿಕ ಕಾರ್ಯಾಚರಣೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ಸ್ವಲ್ಪದರಲ್ಲಿಯೇ ತಪ್ಪಿದೆ.
ಉಡುಪಿ ಅಗ್ನಿಶಾಮಕ ದಳದ ಅಧಿಕಾರಿ ವಿ.ಎಲ್.ನಾಯಕ್ ಮತ್ತು ಸಿಬಂದಿ, ಶಿರ್ವ ಪೊಲೀಸ್ ಠಾಣೆಯ ಎಎಸ್ಐ ಭೋಜ ಮತ್ತು ಸಿಬಂದಿ, ಬಂಟಕಲ್ಲು ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ|ಡಾ| ತಿರುಮಲೇಶ್ವರ ಭಟ್, ಕಾಲೇಜಿನ ವಿದ್ಯಾರ್ಥಿಗಳು ಶಿರ್ವ ಗ್ರಾ.ಪಂ.ಸದಸ್ಯ ಕೆ.ಆರ್. ಪಾಟ್ಕರ್,ಗ್ರಾಮಸ್ಥರು ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದರು.
ಬೇಕಿದೆ ಅಗ್ನಿ ಶಾಮಕ ಠಾಣೆ
ಶಿರ್ವವನ್ನು ಕೇಂದ್ರೀಕರಿಸಿಕೊಂಡು ಸುತ್ತಮುತ್ತಲಿನ ಮಜೂರು, ಕುತ್ಯಾರು,ಕಳತ್ತೂರು, ಮುದರಂಗಡಿ, ಬೆಳ್ಮಣ್, ಸೂಡ,ಪಳ್ಳಿ, ಬೆಳ್ಳೆ ಪ್ರದೇಶಗಳಿಗೆ ಅನುಕೂಲವಾಗುವಂತೆ ಅಗ್ನಿಶಾಮಕ ದಳದ ಠಾಣೆಯ ಅಗತ್ಯವಿದೆ. ಶಿರ್ವ ಆಸುಪಾಸಿನ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿದರೆ 25 ಕಿ.ಮೀ. ದೂರದ ಉಡುಪಿಯಿಂದ ಅಗ್ನಿಶಾಮಕದಳ ದವರು ಬರುವಾಗ ಎಲ್ಲವೂ ಸುಟ್ಟು ಹೋಗಿರುತ್ತದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು,ಅಧಿಕಾರಿಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದ್ದು ತುರ್ತು ಅಗ್ನಿಶಾಮಕ ದಳದ ಅವಶ್ಯಕತೆಯಿದೆ ಎಂದು ಶಿರ್ವ ಗ್ರಾ.ಪಂ.ಸದಸ್ಯ ಕೆ.ಆರ್.ಪಾಟ್ಕರ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ