ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ
Team Udayavani, Mar 15, 2023, 10:03 AM IST
ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತತ್ ಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಪ್ಲಾಸ್ಟಿಕ್ ಜತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ