ಅಂಗಡಿಗೆ ಬೆಂಕಿ: ಅಪರಾಧ ಸಾಬೀತು
Team Udayavani, Dec 6, 2018, 11:06 AM IST
ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿಯಲ್ಲಿ ಕೋಮುದ್ವೇಷದಿಂದ ಅಂಗಡಿಗೆ ಬೆಂಕಿ ಹಾಕಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ತಪ್ಪಿತಸ್ಥರಿಗೆ ಡಿ.10ರಂದು ಶಿಕ್ಷೆ ಪ್ರಕಟಿಸುವುದಾಗಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಗಂಗೊಳ್ಳಿ ಬಾದ್ಶಾ ಮೊಹಲ್ಲಾದ ಮಹ್ಮದ್ ಜುನೈದ್ ಹಾಗೂ ವೆಲ್ಡಿಂಗ್ ಜಾಫರ್ ಯಾನೆ ಜಾಫರ್ ಅವರು 2015ರ ಜ. 21ರಂದು ನುಸುಕಿನ ಜಾವ 2.20ಕ್ಕೆ ಗಂಗೊಳ್ಳಿ ಮುಖ್ಯರಸ್ತೆಯ ವೆಂಕಟೇಶ ಭಾಸ್ಕರ ಶೆಣೈ ಅವರ ಅಂಗಡಿಯ ಗೋದಾಮು, ಕಾರು ಹಾಗೂ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದರು. ಪ್ರಕರಣದಲ್ಲಿ ಒಟ್ಟು 28 ಸಾಕ್ಷಿಗಳಿದ್ದು, ಈ ಪೈಕಿ 14 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಅವರು ಅಪರಾಧ ಸಾಬೀತಾಗಿದೆ ಎಂದು ಪ್ರಕಟಿಸಿದ್ದಾರೆ. ಸರಕಾರದ ಪರ ಜಿಲ್ಲಾ ಸಹಾಯಕ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ