ಜಿಲ್ಲೆಯ ಮೊದಲ ಮಲೆಕುಡಿಯ ಭವನ ಸಿದ್ದ

ಕಾರ್ಕಳದ ಮಾಳದಲ್ಲಿ 2 ಕೋ.ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, Apr 8, 2022, 11:01 AM IST

male-kudi

ಕಾರ್ಕಳ: ಮಲೆಕುಡಿಯ ಸಮುದಾಯದ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಇನ್ನಿತರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ಕಾರ್ಕಳ ತಾಲೂಕಿನ ಪೇರಡ್ಕ ಗ್ರಾಮದ ಮಾಳದಲ್ಲಿ 2. ಕೋ.ರೂ. ವೆಚ್ಚದಲ್ಲಿ ಉಡುಪಿ ಶೈಲಿಯಲ್ಲಿ ಸುಸಜ್ಜಿತ ಜಿಲ್ಲಾ ಮಲೆಕುಡಿಯ ಸಂಘದ ಸಮುದಾಯ ಭವನ ನಿರ್ಮಾಣವಾಗುತ್ತಿದೆ. ಕಾಮಗಾರಿಗಳು ಪೂರ್ಣ ವಾಗುವ ಹಂತದಲ್ಲಿದೆ.

ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಅತೀ ಮಲೆಕುಡಿಯ ಸಮುದಾಯದ ಮಂದಿ ವಾಸವಿರುವುದು ಕಾರ್ಕಳ, ಹೆಬ್ರಿ ತಾಲೂಕುಗಳ ವ್ಯಾಪ್ತಿಯಲ್ಲಿ. ಜಿಲ್ಲೆಯಲ್ಲಿ 4,500 ಮಲೆಕುಡಿಯ ಸಮುದಾಯದ ಜನರಿದ್ದಾರೆ. ಹೆಬ್ರಿ ತಾ|ನ ಕಬ್ಬಿನಾಲೆ, ಕಾರ್ಕಳ ತಾ|ನ ಮಾಳ, ಈದು ಪರಿಸರದಲ್ಲಿ ಹೆಚ್ಚು ಮಂದಿ ವಾಸವಿದ್ದಾರೆ.

ಸಮುದಾಯದ ವಿವಿಧ ಚಟುವಟಿಕೆಗೆ ಸೂಕ್ತ ಸಮುದಾಯ ಭವನ ಜಿಲ್ಲಾ ಮಟ್ಟದಲ್ಲಿ ಇರಲಿಲ್ಲ. ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳಿಗಿರುವ ಸಣ್ಣ ಸಮುದಾಯ ಭವನಗಳನ್ನೇ ಬಳಸಿಕೊಳ್ಳಲಾಗುತ್ತಿದೆ. ಮಲೆಕುಡಿಯ ಸಮುದಾಯಕ್ಕೆ ಮೀಸಲಾಗಿ ಇದುವರೆಗೆ ಸಮುದಾಯ ಭವನ ಇರಲಿಲ್ಲ. ಈಗ ಕಾರ್ಕಳದಲ್ಲಿ ಜಿಲ್ಲೆಯ ಮೊದಲ ಮಲೆಕುಡಿಯ ಸಮುದಾಯ ಭವನ ನಿರ್ಮಾಣವಾಗುತ್ತಿದೆ.

ಅನುದಾನಕ್ಕೆ ಸಚಿವರ ಪ್ರಯತ್ನ

ಮಾಳದಲ್ಲಿ ಈ ಹಿಂದೆ ಹಳೆಯ ಕಟ್ಟಡವಿದ್ದ ಸ್ಥಳದಲ್ಲಿ ಸಣ್ಣದಾದ ಭವನ ನಿರ್ಮಾಣವಾಗಿತ್ತಾದರೂ ಅದು ಶಿಥಿಲಗೊಂಡಿತ್ತು. ಚಟುವಟಿಕೆ ನಡೆಸಲು ಪೂರಕವೂ, ಯೋಗ್ಯವೂ ಆಗಿರಲಿಲ್ಲ. ಹೀಗಾಗಿ ನೂತನ ಸಮುದಾಯ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಸಮುದಾಯದ ಮುಖಂಡರೆಲ್ಲರೂ ಸೇರಿ ಕ್ಷೇತ್ರದ ಶಾಸಕ, ಸಚಿವ ವಿ.ಸುನಿಲ್‌ಕುಮಾರ್‌ ಅವರ ಮೇಲೆ ನಿರಂತರ ಒತ್ತಡ ತರುವ ಪ್ರಯತ್ನ ನಡೆಸಿದ್ದರು. ಪರಿಣಾಮ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ 2 ಕೋ.ರೂ. ಅನುದಾನ ಬಿಡುಗಡೆಗೊಂಡು ಕಾಮಗಾರಿ ಆರಂಭಿಸಲಾಗಿತ್ತು.

ಮಲೆಕುಡಿಯರ ಜಿಲ್ಲಾ ಸಮುದಾಯ ಭವನವನ್ನು ಉಡುಪಿ ಶೈಲಿಯಲ್ಲಿ ಅಕರ್ಷಕವಾಗಿ ನಿರ್ಮಿಸಲಾಗುತ್ತಿದೆ. ಭವನದ ಕಟ್ಟಡದ ಅಡಿಪಾಯ, ಗೋಡೆ, ಛಾವಣಿ, ಗಾರೆ ಕೆಲಸಗಳೆಲ್ಲವೂ ಮುಗಿದಿದೆ. ಕಿಟಕಿ ಬಾಗಿಲು, ಜೋಡಣೆ, ಪೈಂಟಿಂಗ್‌ ಇನ್ನಿತರ ಕೆಲಸಗಳಷ್ಟೇ ಬಾಕಿ ಉಳಿದಿವೆ. ಮೇಲಂತಸ್ತಿನಲ್ಲಿ ಕಾರ್ಯಕ್ರಮ ನಡೆಸಲು ಅನುಕೂಲವಾಗುವಂತೆ ಅತ್ಯಾಕರ್ಷಕವಾಗಿ ಮೇಲ್ಛಾವಣಿ ನಿರ್ಮಿಸಲಾಗಿದೆ. ಕೆಳ ಅಂತಸ್ತಿನಲ್ಲಿ ಭೋಜನಶಾಲೆ ಇರಲಿದೆ.

ಮಲೆಕುಡಿಯ ಜನಾಂಗವು ಪ್ರಾಚೀನ ಜನಾಂಗ ಗಳಲ್ಲಿ ಒಂದಾಗಿದ್ದು, ತುಳುನಾಡಿನ ಮೂಲ ನಿವಾಸಿಗರಾಗಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಹೆಚ್ಚಾಗಿ ವಾಸವಿರುವರು. ದ.ಕ. ಜಿಲ್ಲೆಯ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಈ ಭಾಗದಲ್ಲಿ ಈ ಸಮುದಾಯದ ಮಂದಿ ಹೆಚ್ಚಿದ್ದಾರೆ.

ಪ್ರಕೃತಿ ರಮಣೀಯ ಸ್ಥಳದಲ್ಲಿದೆ ಭವನ

ಕಾರ್ಕಳ-ಬಜಗೋಳಿ-ಕುದುರೆಮುಖ ಹೆದ್ದಾರಿ ಬದಿಯಲ್ಲಿ ಸಮುದಾಯ ಭವನ ಸುಸಜ್ಜಿತ, ಆಕರ್ಷಣೀಯವಾಗಿ ನಿರ್ಮಾಣವಾಗುತ್ತಿದೆ. ಪಕ್ಕದಲ್ಲೇ ಕಡಾರಿ ನದಿಯೂ ಹರಿಯುತ್ತಿದೆ. ಪ್ರಕೃತಿ ರಮಣೀಯ ಪರಿಸರ ವೀಕ್ಷಿಸುವ ತಾಣವೂ ಇದಾಗಿದ್ದು ಇಲ್ಲೇ ಭವನ ನಿರ್ಮಾಣವಾಗುತ್ತಿರುವುದು ಎಲ್ಲ ದೃಷ್ಟಿಯಿಂದಲೂ ಅನುಕೂಲವಾಗಿದೆ.

ಉತ್ತಮ ವ್ಯವಸ್ಥೆ ಭವನಕ್ಕೆ ಸಂಬಂಧಿಸಿ ಸಮುದಾಯದ ಮಂದಿ ತನ್ನಲ್ಲಿ ಅನುದಾನಕ್ಕೆ ಮನವಿ ಮಾಡಿಕೊಂಡಿದ್ದರು. ಭವನಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿತ್ತು. ಉತ್ತಮ ವ್ಯವಸ್ಥೆಗಳು ಭವನದಲ್ಲಿ ಇರಲಿದೆ. ಸಮಾಜದ ಮಂದಿಗೆ ಇದರಿಂದ ಬಹಳ ಅನುಕೂಲವಾಗಲಿದೆ. –ವಿ.ಸುನಿಲ್‌ಕುಮಾರ್‌, ಸಚಿವ

ಶೀಘ್ರ ಪೂರ್ಣ ಭವನವನ್ನು 2 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 1.5 ಕೋ.ರೂ. ಈಗಾಗಲೇ ನೀಡಲಾಗಿದೆ. ಇನ್ನುಳಿದಂತೆ 50 ಲಕ್ಷ ರೂ. ನೀಡುವುದಕ್ಕೆ ಬಾಕಿಯಿದೆ. ಶೀಘ್ರ ಬಾಕಿ ಉಳಿದ ಕೆಲಸಗಳು ನಡೆದು ಉದ್ಘಾಟನೆಗೆ ಸಿದ್ಧಗೊಳಿಸಲಾಗುತ್ತಿದೆ. –ದೂದ್‌ಪೀರ್‌, ಯೋಜನಾ ಸಮನ್ವಯಾಧಿಕಾರಿ, ಐಟಿಡಿಪಿ ಇಲಾಖೆ ಉಡುಪಿ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.