“ಅಪರಾಧ-ಅಪಘಾತ ನಿಯಂತ್ರಣಕ್ಕೆ ಮೊದಲ ಆದ್ಯತೆ’

ಕುಂದಾಪುರದ ಎಎಸ್ಪಿಯಾಗಿ ಹರಿರಾಂ ಶಂಕರ್‌ ಅಧಿಕಾರ ಸ್ವೀಕಾರ

Team Udayavani, Sep 6, 2019, 5:41 AM IST

0509KDPP4

ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌ ಅವರಿಂದ ಅಧಿಕಾರ ಸ್ವೀಕರಿಸಿದ ಎಎಸ್ಪಿ ಹರಿರಾಂ ಶಂಕರ್‌.

ಕುಂದಾಪುರ: ಕುಂದಾಪುರ ಉಪವಿಭಾಗದ ನೂತನ ಎಎಸ್ಪಿಯಾಗಿ 2017ರ ಬ್ಯಾಚಿನ ಐಪಿಎಸ್‌ ಅಧಿಕಾರಿ ಹರಿರಾಂ ಶಂಕರ್‌ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇಲ್ಲಿನ ಪೊಲೀಸ್‌ ಉಪಾಧೀಕ್ಷಕರ ಕಚೇರಿಯಲ್ಲಿ ನಿರ್ಗಮನ ಡಿವೈಎಸ್ಪಿ ಬಿ.ಪಿ. ದಿನೇಶ್‌ ಕುಮಾರ್‌ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿರಾಂ ಶಂಕರ್‌, ಕುಂದಾಪುರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಅಪರಾಧ ಚಟುವಟಿಕೆ ನಿಯಂತ್ರಣ ಹಾಗೂ ಅಪಘಾತ ಪ್ರಕರಣಗಳು ಘಟಿಸದಂತೆ ತಡೆಯಲು ಮೊದಲ ಆದ್ಯತೆ ನೀಡಲಾಗುವುದು. ಇದರೊಂದಿಗೆ ಕಾನೂನು – ಸುವ್ಯವಸ್ಥೆಗೆ ಎಂದಿನಂತೆ ಒತ್ತು ನೀಡುತ್ತೇವೆ. ಅದಕ್ಕೂ ಮೊದಲು ಕುಂದಾಪುರ ಉಪ ವಿಭಾಗ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳುತ್ತೇನೆ. ಈ ಹಿಂದೆ ಇಲ್ಲಿ ನಡೆದಿರುವ ಕೊಲೆ, ಕಳ್ಳತನ ಮತ್ತಿತರ ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು, ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಟ್ರಾಫಿಕ್‌ ಸಮಸ್ಯೆಗೆ ಒತ್ತು
ಹೆದ್ದಾರಿ ಸಹಿತ ಕೆಲವೊಂದು ಪ್ರದೇಶದಲ್ಲಿ ಟ್ರಾಫಿಕ್‌ ಸಮಸ್ಯೆಗಳಿದ್ದು, ಅವುಗಳನ್ನು ಅಪಘಾತ ವಲಯಗಳಾಗಿ ಗೊತ್ತು ಮಾಡಿ, ತಜ್ಞರ ತಂಡದಿಂದ ಅಧ್ಯಯನ ನಡೆಸಿ, ಬ್ಲಾಕ್‌ ಸ್ಪಾಟ್‌ ಎಂದು ಗುರುತಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪ್ರಯತ್ನ ಮಾಡಲಾಗುವುದು. ಫ್ಲೆ$çಓವರ್‌, ರಸ್ತೆ ಕಾಮಗಾರಿಯು ಬಾಕಿಯಿದ್ದು, ಅದನ್ನೆಲ್ಲ ಪರಿಶೀಲಿಸಿ ಸಂಚಾರ ವ್ಯವಸ್ಥೆ ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ನೂತನ ಎಎಸ್ಪಿ ಹೇಳಿದರು.

2018 ರ ಮಾ. 22 ರಿಂದ ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಆಗಿದ್ದ ಬಿ.ಪಿ. ದಿನೇಶ್‌ ಕುಮಾರ್‌ ಅವರು ಈಗ ವರ್ಗಾವಣೆಗೊಂಡಿದ್ದು, ಹೊಸ ಹುದ್ದೆಗೆ ಇನ್ನಷ್ಟೇ ನಿಯೋಜನೆಗೊಳಿಸಬೇಕಿದೆ.

ಈ ಸಂದರ್ಭದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ, ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ್‌ ಗುನಗ, ಉಪ ವಿಭಾಗದ ವಿವಿಧ ಠಾಣೆಗಳ ಎಸ್‌ಐಗಳು, ಪೊಲೀಸ್‌ ಸಿಬಂದಿ ಉಪಸ್ಥಿತರಿದ್ದರು.

ಹರಿರಾಂ ಶಂಕರ್‌ ಪರಿಚಯ
ಕೇರಳದ ತೃಶ್ಶೂರ್‌ ಮೂಲದ ಹರಿರಾಂ ಶಂಕರ್‌ ಅವರು 2017 ಬ್ಯಾಚಿನ ಐಪಿಎಸ್‌ ಅಧಿಕಾರಿಯಾಗಿದ್ದು, ಬೆಳಗಾವಿಯ ಅಥಣಿಯಲ್ಲಿ ಪ್ರೊಬೇಶನರಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿ, ಬಳಿಕ 2 ತಿಂಗಳು ಹೈದರಬಾದಿನಲ್ಲಿ 2ನೇ ಹಂತದ ತರಬೇತಿ ಮುಗಿಸಿ, ಈಗ ಕುಂದಾಪುರಕ್ಕೆ ವರ್ಗವಣೆಗೊಂಡಿದ್ದಾರೆ. ಕ್ಯಾಲಿಕಟ್‌ ಎನ್‌.ಐ.ಟಿ.ಯಲ್ಲಿ ಮೆಕ್ಯಾನಿಕಲ್‌ ಎಂಜಿನಿಯರ್‌ ವ್ಯಾಸಂಗ ಮುಗಿಸಿ, ಸಿವಿಲ್‌ ಸರ್ವಿಸ್‌ ಪರೀಕ್ಷೆ ಬರೆದಿದ್ದರು.

2ನೇ ಐಪಿಎಸ್‌ ಅಧಿಕಾರಿ
ಕುಂದಾಪುರ ಉಪ ವಿಭಾಗದ ಮುಖ್ಯಸ್ಥರಾಗಿ 2007 ರಿಂದ ಈ ವರೆಗೆ 9 ಮಂದಿ ಕಾರ್ಯನಿರ್ವಹಿಸಿದ್ದು, ಹರಿರಾಂ ಶಂಕರ್‌ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡನೇ ಐಪಿಎಸ್‌ ಅ ಧಿಕಾರಿಯಾಗಿದ್ದಾರೆ. ಇದಕ್ಕೂ ಮೊದಲು 2010ರಿಂದ 2012 ರವರೆಗೆ ಡಾ| ರಾಮ್‌ ನಿವಾಸ್‌ ಸೆಪಟ್‌ ಎಎಸ್ಪಿಯಾಗಿದ್ದರು. 2007ರಿಂದ ಸಿ.ಕೆ. ಶಶಿಧರ್‌, ವಿಶ್ವನಾಥ್‌ ಪಂಡಿತ್‌, ಶೇಖರ ಎ. ಅಗಡಿ, ಸಿ.ಬಿ. ಪಾಟೀಲ್‌, ಎಂ. ಮಂಜುನಾಥ ಶೆಟ್ಟಿ, ಪ್ರವೀಣ್‌ ಎಚ್‌. ನಾಯಕ್‌ ಹಾಗೂ ಬಿ.ಪಿ. ದಿನೇಶ್‌ ಕುಮಾರ್‌ ಡಿವೈಎಸ್‌ಪಿಗಳಾಗ ಪದೋನ್ನತಿಗೊಂಡು ಇಲ್ಲಿ ಕಾರ್ಯನಿರ್ವಹಿಸಿದ್ದರೆ, 2012 ರಿಂದ 2013 ರವರೆಗೆ ಯಶೊದಾ ಎಸ್‌. ಒಂಟಿಗೋಡಿ ಅವರು ಕೆಎಸ್‌ಪಿಎಸ್‌ ಪರೀಕ್ಷೆ ಬರೆದು ನಿಯೋಜನೆಗೊಂಡಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.