ಹೊಳೆ ಮೀನುಗಳಿಗೆ ಮೀನು ಪ್ರಿಯರ ಗಾಳ!

ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಬೆಲೆ ಬಲು ದುಬಾರಿ

Team Udayavani, Jul 10, 2019, 5:57 AM IST

gala

ಕಟಪಾಡಿ : ಮಾರುಕಟ್ಟೆಗೆ ಮೀನು ಬರುವುದು ಕಡಿಮೆಯಾಗುತ್ತಿದ್ದಂತೆ, ಇತ್ತ ಮೀನು ಪ್ರಿಯರು ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವ ಖುಷಿಯಲ್ಲಿದ್ದಾರೆ.

ಮಣಿಪುರ, ಉದ್ಯಾವರ, ಕಟಪಾಡಿ, ಕೆಮ್ತೂರು, ದುರ್ಗಾ ನಗರ, ನಾಯ್ಕ ತೋಟ, ಮಟ್ಟು, ಕುರ್ಕಾಲು, ರೈಲ್ವೇ ಮೇಲ್ಸೇತುವೆ, ಹೊಳೆಯ ಮೇಲ್ಸೇತುವೆಯ ತಪ್ಪಲುಗಳಲ್ಲಿ ಗಾಳ ಹಾಕಿ ಸಿಹಿನೀರಿನ ಮೀನಿಗಾಗಿ ಹಲವಾರು ಮಂದಿ ಜಾಲಾಡುತ್ತಿದ್ದಾರೆ.

ಸಮುದ್ರದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ನಿಷೇಧವಿರುವುದರಿಂದ ಸಮುದ್ರದ ಮೀನುಗಳು ದೊರಕುತ್ತಿಲ್ಲ. ತಾಜಾ ಮೀನಿಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಮಾಂಸಾಹಾರಿಗಳು ಕೆರೆ ಅಥವಾ ಹೊಳೆ ಮೀನುಗಳನ್ನೇ ಅವಲಂಬಿಸಬೇಕಾಗಿದೆ. ಆದ್ದರಿಂದ ಸಿಹಿನೀರಿನ ಮೀನುಗಾರಿಕೆ ಚುರುಕುಗೊಂಡಿದೆ. ಮಳೆ ಬರುತ್ತಿದ್ದಂತೆ ಗಾಳ ಹಾಕಿದ ಮತ್ತು ಬಲೆಬೀಸಿ ತಂದ ಹೊಳೆಯ ತಾಜಾ ಮೀನುಗಳೂ ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಉತ್ತಮ ಬೇಡಿಕೆ

ಹೊಳೆ ಮೀನುಗಳಿಗೆ ಉತ್ತಮ ಬೇಡಿಕೆ ಇದೆ. ಹಳ್ಳ ತೊರೆಗಳು ಮಳೆಗಾಲದಲ್ಲಿ ತುಂಬಿಹರಿಯುವುದರಿಂದ ಮೀನುಗಳ ಸಂತತಿಯೂ ಹೆಚ್ಚು ಈ ತಾಜಾ ಮೀನುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ದರದಲ್ಲಿ ವಿಕ್ರಯವಾಗುತ್ತಿವೆ. ಮೀನು ಪ್ರಿಯರೂ ಹವ್ಯಾಸಿಗಳಾಗಿ ಹೊಳೆ ದಡದಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಾರೆ. ಹೊಳೆ ಮೀನು ಗಳು ಕೆಲವರಿಗೆ ಅನಿವಾರ್ಯವಾದರೆ, ರುಚಿ ಅರಿತವರು ದುಬಾರಿಯಾದರೂ ಮೀನು ಖರೀದಿಗೆ ಮುಗಿಬೀಳುತ್ತಿದ್ದಾರೆ.

ವಿವಿಧ ಮೀನು ಲಭ್ಯ
ಬಯ್ಯ, ಕೊಕ್ಕರ್‌, ಕಂಡಿಗೆ, ಕುರ್ಚಿ, ಮಟ್ಟೆ, ಏರಿ, ಕೆಂಬೇರಿ, ಕುಲೇಜಿ, ಕುದಂರ್‌ ತರು ಇತ್ಯಾದಿ ವಿಧದ ಹೊಳೆಯ ಮೀನುಗಳು ನಮ್ಮ ಗಾಳಕ್ಕೆ ಸಿಗುತ್ತದೆ. ಇದೇ ನಮಗೆ ಮಳೆಗಾಲದ ಆಹಾರ. ಬೆಳಗ್ಗೆಯಿಂದ ಮಧ್ಯಾಹ್ನ ಸುಮಾರು 3 ಗಂಟೆಯವರೆಗೂ ಮೀನಿನ ಬೇಟೆ ನಡೆಸುತ್ತೇವೆ.
-ಸಂತೋಷ್‌ ಕುಂದರ್‌, – ನಿತ್ಯಾನಂದ ಕೊಡವೂರು
ಮಾರಾಟ ಮಾಡುವುದಿಲ್ಲ

ನಾವು ಮೀನು ಪ್ರಿಯರು. ಮಾರಾಟ ಮಾಡುವುದಿಲ್ಲ. ಹೆಚ್ಚುವರಿ ಸಿಕ್ಕರೆ ಗೆಳೆಯರಿಗೆ ಹಂಚುತ್ತೇವೆ. ಸುಮಾರು ನಾಲ್ಕು ಸಾವಿರ ರೂ. ಬೆಲೆಯಷ್ಟರ ಮೀನುಗಳನ್ನು ನಾವು ಗಾಳ ಹಾಕಿ ಹಿಡಿಯುತ್ತೇವೆ.
– ಕಿಶೋರ್‌, ಉಮೇಶ್‌ ಅಗ್ರಹಾರ, ಪ್ರವೀಣ್‌

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.