ಶಿಥಿಲಾವಸ್ಥೆಯಲ್ಲಿ ಮೀನು ಮಾರುಕಟ್ಟೆ , ರಸ್ತೆ ಬದಿಯಲ್ಲೆ ವ್ಯಾಪಾರ

ಕೊಳಲಗಿರಿ ಹಸಿ ಮೀನು ಮಾರಾಟಕ್ಕೆ ಸ್ಥಳದ ಕೊರತೆ

Team Udayavani, Jan 21, 2020, 5:03 AM IST

2001UDBB1A

ಉಡುಪಿ: ಮೀನು ವ್ಯಾಪಾರ ಇವರ ಬದುಕಿಗೆ ಆಧಾರ. ಅದನ್ನು ನಡೆಸಲು ಈಗ ಸಂಚಕಾರ ಬಂದಿದೆ. ಸ್ಥಳದ ಕೊರತೆಯಿಂದ ಕೊಳಲಗಿರಿಯ ಮೂರು ಮಂದಿ ಹಸಿ ಮೀನು ಮಾರಾಟ ಬಡ ಮಹಿಳೆಯರು ರಸ್ತೆ ಬದಿ ವ್ಯಾಪಾರ ನಡೆಸುತ್ತಿದ್ದು, ಅವರ ಬದುಕು ದುಸ್ಥಿತಿಗೆ ತಲುಪಿದೆ.

ಕೊಳಲಗಿರಿ ಪೇಟೆ ಬಳಿ ಹಸಿಮೀನು ಮಾರುಕಟ್ಟೆಯಿದೆ. ಮೀನು ಮಾರಾಟಕ್ಕೆ ಕಟ್ಟೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಮೂರು ಮಂದಿ ಬಡ ಮಹಿಳೆಯರು ಕಟ್ಟೆಯಲ್ಲಿ ಕುಳಿತು ಮೀನು ಮಾರಾಟ ನಡೆಸುತ್ತಿದ್ದರು. ಗ್ರಾಹಕರು ಮಾರುಕಟ್ಟೆಗೆ ಬಂದು ಇವರ ಬಳಿಯಿಂದ ಮೀನು ಖರೀದಿಸುತ್ತಿದ್ದರು. ವ್ಯಾಪಾರ ಉತ್ತಮವಾಗಿತ್ತು.

ಶಿಥಿಲ ಮಾರುಕಟ್ಟೆ
ಕಳೆದ ಮಳೆಗಾಲ ಸುರಿದ ಭಾರಿ ಗಾಳಿಮಳೆಗೆ ಕುಸಿದಿದೆ. ಛಾವಣಿಯ ಹೆಂಚುಗಳು ಬಿದ್ದು ಪುಡಿಪುಡಿಯಾಗಿವೆ. ಕಟ್ಟಡದ ಗೋಡೆಗಳು ನೆಲಕ್ಕೆ ಉರುಳಿ ಬಿದ್ದಿದೆ.

ಪೀಠೊಪಕರಣಗಳು ಒಂದೊಂದೇ ನೆಲಕ್ಕೆ ಉರುಳು ಬೀಳುತ್ತಿವೆ. ಮಾರುಕಟ್ಟೆ ಒಳಗೆ ಕುಳಿತು ವ್ಯಾಪಾರ ನಡೆಸಲು ಅಸಾಧ್ಯ ಸ್ಥಿತಿಯಿದೆ. ವ್ಯಾಪಾರಕ್ಕೆ ಯೋಗ್ಯವಿಲ್ಲದ ಮತ್ತು ಅಭದ್ರತೆಯ ಕಟ್ಟೆಯಲ್ಲಿ ವ್ಯಾಪಾರ ನಡೆಸಲಾಗದೆ ಮೂರು ಮಂದಿ ಮಹಿಳೆಯರು ಕಟ್ಟಡದಿಂದ‌ ಹೊರ ಬಂದರು.

ಮಹಿಳೆಯರಿಗೆ ಈಗ ಮೀನು ಮಾರಾಟಕ್ಕೆ ಸೂಕ್ತ ಜಾಗವಿಲ್ಲ. ಪಕ್ಕದಲ್ಲಿ ರಸ್ತೆ ಬದಿ ಕುಳಿತು ವ್ಯಾಪಾರ ನಡೆಸುತ್ತಿದ್ದಾರೆ. ಬಿಸಿಲಿಗೆ ಮೈಯೊಡ್ಡಿ ವ್ಯಾಪಾರ ನಡೆಸುತ್ತಿದ್ದಾರೆ. ಹತ್ತಾರು ಸಮಸ್ಯೆಗಳು ಇವರನ್ನು ಕಾಡುತ್ತಿವೆೆ. ಶಿಥಿಲ ಮಾರುಕಟ್ಟೆ ಉಪ್ಪೂರು ಗ್ರಾ.ಪಂ ವ್ಯಾಪ್ತಿಯಲ್ಲಿದೆ. ಮೀನು ಮಾರಾಟಕ್ಕೆ ಸೂಕ್ತ ಜಾಗವಿಲ್ಲದೆ ವ್ಯಾಪಾರಸ್ಥರಿಗೆ ತೊಂದರೆ ಆಗುತ್ತಿರುವು ದನ್ನು ಮನಗಂಡ ಗ್ರಾ.ಪಂ. 10 ವರ್ಷಗಳ ಹಿಂದೆ ಮಾರುಕಟ್ಟೆ ನಿರ್ಮಿಸಿತ್ತು, ಬಳಿಕ ನಿರ್ವಹಣೆ ಮಾಡಿಲ್ಲ. ದುರಸ್ತಿಯೂ ನಡೆಸಿಲ್ಲ. ಹೀಗಾಗಿ ಮಾರುಕಟ್ಟೆ ದುಸ್ತಿತಿಗೆ ತಲುಪಿತ್ತು.

ಜಾಗ ಗುರುತಿಸಲಾಗಿದೆ
ಶೌಚಾಲಯ ನಿರ್ಮಿಸಲೆಂದು ಪಂಚಾಯತು ಬಸ್‌ ತಂಗುದಾಣದ ಹಿಂಭಾಗ ಸ್ಥಳ ಗುರುತಿಸಿದೆ. ಆದರೆ ಶೌಚಾಲಯ ನಿರ್ಮಿಸುವಲ್ಲಿ ಹಿಂದೆ ಬಿದ್ದಿದೆ. ಪೇಟೆಯಲ್ಲಿ ಸಮಸ್ಯೆ ತಾಂಡವಾಡುತ್ತಿದೆ. ಮೀನುಗಾರರ ಅಭಿವೃದ್ಧಿಗಾಗಿ ಲಕ್ಷಗಟ್ಟಲೆ ಖರ್ಚು ಮಾಡುವ ಸರಕಾರ ಬಡ ಮೀನುಗಾರರನ್ನು ನಿರ್ಲಕ್ಷಿಸುತ್ತಿದೆ. ಮೂಲ ಸೌಕರ್ಯಗಳನ್ನು ಒದಗಿಸುತ್ತಿಲ್ಲ. ಅಲಕ್ಷ್ಯ ವಹಿಸುತ್ತಿದೆ ಎನ್ನುವುದಕ್ಕೆ ನಮ್ಮ ಸ್ಥಿತಿಯೇ ನಿದರ್ಶನ ಎಂದು ಹಸಿ ಮೀನು ವ್ಯಾಪಾರ ನಿರತ ಬೇಬಿ ಪುತ್ರನ್‌ ಮತ್ತು ಗೋದನ್‌ ಮೈನಾ ಅಳಲು ತೋಡಿಕೊಳ್ಳುತ್ತಿದ್ದಾರೆ.

ವ್ಯಾಪಾರಕ್ಕೆ ತೊಂದರೆ
ಅನೇಕ ವರ್ಷಗಳಿಂದ ಮೀನು ವ್ಯಾಪಾರ ನಡೆಸುತ್ತಿದ್ದೇವೆ. ಮೊದಲು ಮೀನು ಮಾರುಕಟ್ಟೆ ಒಳಗೆ ಕುಳಿತುಕೊಳ್ಳುತ್ತಿದ್ದೆವು. ಕಟ್ಟಡ ಬಿದ್ದು ಅನೇಕ ಸಮಯಗಳಾಗಿವೆ. ಬಳಿಕ‌ ರಸ್ತೆ ಬಿದಿ ಕುಳಿತು ವ್ಯಾಪಾರ ಮಾಡುತ್ತಿದ್ದೇವೆ. ದುರಸ್ತಿಗಾಗಿ ಪಂಚಾಯತಿಗೆ ದೂರು ನೀಡಿದ್ದೇವೆ. ಇದುವರೆಗೆ ದುರಸ್ತಿ ಮಾಡಿಕೊಟ್ಟಿಲ್ಲ. ಮೀನು ಖರೀದಿಸಲು ಬರುವವರಿಗೆ ಮತ್ತು ವ್ಯಾಪಾರ ನಡೆಸುವ ನಮಗೆ ತೊಂದರೆಯಾಗಿದೆ ಎನ್ನುವುದು ಹಸಿ ಮೀನು ಮಾರಾಟ ಮಹಿಳೆ ಶಾರದಾ ಅವರ ಅಂಬೋಣ.

ಕ್ರಿಯ ಯೋಜನೆ
ಮಾರುಕಟ್ಟೆ ದುರಸ್ತಿ ಹಾಗೂ ಶೌಚಾಲಯ ನಿರ್ಮಾಣ ಎರಡಕ್ಕೂ ಕ್ರಿಯಾಯೋಜನೆ ಸಿದ್ದಪಡಿಸಿದ್ದೇವೆ. ಶೀಘ್ರದಲ್ಲಿ ದುರಸ್ತಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಎರಡು ಆರಂಭವಾಗುತ್ತದೆ. ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಉಪ್ಪೂರು ಗ್ರಾಪಂನ ಅಧ್ಯಕ್ಷೆ ಆರತಿ ಅವರು ಹೇಳಿದರು. ಇದುವೆರೆಗೆ ಪ್ರಯೋಜವಾಗಿಲ್ಲ
ಪೇಟೆಯಲ್ಲಿ ಮಾರುಕಟ್ಟೆ ಮತ್ತು ಶೌಚಾಲಯ ಎರಡು ಇಲ್ಲದೆ ಸಮಸ್ಯೆ ಗಳಾಗುತ್ತಿವೆ. ಈ ಕುರಿತು ಪಂಚಾಯತು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರುವ ಪ್ರಯತ್ನವನ್ನು ಮಾಡುತ್ತಲೇಬಂದಿದ್ದೇವೆ. ಇದುವರೆಗೆ ಪ್ರಯೋಜನವಾಗಿಲ್ಲ ಎಂದು ಕೊಳಲಗಿರಿ ವ್ಯಾಪಾರಸ್ಥರಾದ ಅರುಣ್‌ ಅವರ ಅಭಿಪ್ರಾಯ.

ಮೂಗಿಗೆ ಬಡಿತಿದೆ ವಾಸನೆ
ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯವೂ ಇಲ್ಲ. ಅಂಗಡಿ-ಮುಂಗಟ್ಟುಗಳ ಮಂದಿ, ಮಹಿಳೆಯರು, ಮಕ್ಕಳು ಹೀಗೆ ಎಲ್ಲರೂ ರಸ್ತೆ ಬದಿಯ ಪೊದೆಗಳಲ್ಲಿ ಶೌಚ ಮಾಡುತ್ತಿದ್ದಾರೆ. ಪರಿಸರ ದುರ್ನಾತ ಬೀರುತ್ತಿದೆ. ಇದರಿಂದ ಮಹಿಳೆಯರಿಗೆ ವ್ಯಾಪಾರ ನಡೆಸಲು ಸಾಧ್ಯವಾಗುತ್ತಿಲ್ಲ. ರಸ್ತೆಯಲ್ಲಿ ತೆರಳುವವರ ಮೂಗಿಗೂ ವಾಸನೆ ಬಡಿಯುತ್ತಿದೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.