ಮೀನುಗಾರರ ರಜೆ ವೇತನ ಕನ್ನಡಿ ಗಂಟು

ಕೇಂದ್ರ-ರಾಜ್ಯಗಳ ಕೋಟ್ಯಂತರ ರೂ. ಅನುದಾನ ಬಾಕಿ

Team Udayavani, Sep 12, 2019, 5:49 AM IST

0909KOTA1M

ಕೋಟ: ಮೀನುಗಾರಿಕೆ ರಜೆಯ ಅವಧಿಯಲ್ಲಿ ಸಣ್ಣ ಮೀನುಗಾರರಿಗೆ ಅರ್ಥಿಕವಾಗಿ ಸಹಕಾರಿಯಾಗುವ ನಿಟ್ಟಿನಲ್ಲಿ ಜಾರಿಯಾದ ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆಯು ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಪಾವತಿಯಾಗಬೇಕಿದ್ದ ಕೋಟ್ಯಂತರ ರೂಪಾಯಿ ಬಾಕಿ ಇರುವುದರಿಂದ ಬಹುತೇಕ ಸ್ಥಗಿತಗೊಂಡಿದೆ.
ಉಡುಪಿ ಹಾಗೂ ದ.ಕ. ಜಿಲ್ಲೆಯಲ್ಲಿ 2017ರಲ್ಲಿ 16,937 ಮಂದಿ, 2018ರಲ್ಲಿ 16,669 ಮಂದಿ, 2019ರಲ್ಲಿ 12,578 ಮಂದಿ ಯೋಜನೆಯ ಸದಸ್ಯರಾಗಿದ್ದರು. ಆದರೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅನುದಾನದ ಬಹುತೇಕ ಪಾವತಿಯಾಗಿಲ್ಲ.

ಏನಿದು ಯೋಜನೆ
ಆರ್ಥಿಕವಾಗಿ ಹಿಂದುಳಿದ ಮೀನುಗಾರರು ಸೆಪ್ಟಂಬರ್‌ನಿಂದ ಮೇ ತನಕ ಯಾವುದೇ ಮೀನು ಗಾರಿಕೆ ಸಹಕಾರಿ ಸಂಸ್ಥೆಗಳಲ್ಲಿ ಮಾಸಿಕ 165 ರೂ.ಗಳನ್ನು ಠೇವಣಿ ಇಡಬೇಕು. ಒಂಬತ್ತು ತಿಂಗಳಲ್ಲಿ ಓರ್ವ ಸದಸ್ಯನ ಖಾತೆಯಲ್ಲಿ ಸಂಗ್ರಹವಾದ 1,500 ರೂ.ಗೆ ರಾಜ್ಯ ಹಾಗೂ ಕೇಂದ್ರ ಸರಕಾರ ತಲಾ 1,500 ರೂ. ನೀಡುತ್ತದೆ. ಸಂಗ್ರಹವಾಗುವ ಒಟ್ಟು 4,500 ರೂ.ಗಳನ್ನು ಜೂನ್‌, ಜುಲೈ, ಆಗಸ್ಟ್‌ನ ಮೀನುಗಾರಿಕೆ ರಜೆ ಅವಧಿಯಲ್ಲಿ ರಜಾ ವೇತನ ರೂಪದಲ್ಲಿ ನೀಡಲಾಗುತ್ತದೆ.

ಕಟ್ಟಿದ ಹಣವೂ ಕೈ ಸೇರಲು ವಿಳಂಬ
ಸದಸ್ಯರು ತಿಂಗಳಿಗೆ 165ರಂತೆ 9 ತಿಂಗಳು ಪಾವತಿಸಿದ 1,500 ರೂ. ವಾಪಸು ಕೈ ಸೇರಲು ಹಲವು ಸಮಯ ಬೇಕಾಗುತ್ತಿದೆ. 2018ರಲ್ಲಿ ಪಾವತಿಸಿದ ಹಣ ಇದೀಗ ಜಮೆ ಆಗುವ ಹಂತದಲ್ಲಿದೆ. ಒಟ್ಟಾರೆ ರಜಾ ಅವಧಿಯಲ್ಲಿ ಅನುಕೂಲವಾಗಲಿದೆ ಎನ್ನುವ ನಿಟ್ಟಿನಲ್ಲಿ ಯೋಜನೆಯಲ್ಲಿ ತೊಡಗಿಸಿಕೊಂಡ ಸಾವಿರಾರು ಮೀನುಗಾರರಿಗೆ ಯಾವುದೇ ಪ್ರಯೋಜನವಾಗದ ಕುರಿತು ಸಾಕಷ್ಟು ಬೇಸರವಿದೆ ಹಾಗೂ ಸಮಸ್ಯೆಯನ್ನು ಸರಿಪಡಿಸುವಂತೆ ಆಗ್ರಹ ಕೇಳಿ ಬರುತ್ತಿದೆ.

ಯೋಜನೆಯಲ್ಲಿ ಹಣ ತೊಡಗಿಸಿದ ಮೀನುಗಾರರು ಆಗಾಗ ಸಂಘಕ್ಕೆ ಭೇಟಿ ನೀಡಿ ವಿಚಾರಿಸುತ್ತಾರೆ. ಸರಕಾರದ ಅನುದಾನದ ಜತೆಗೆ ಕಟ್ಟಿದ ಹಣವು ಸರಿಯಾಗಿ ಕೈ ಸೇರದ ಕುರಿತು ಅವರಿಗೆ ಬೇಸರವಿದೆ. ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕಿದೆ.
– ಅಶೋಕ್‌ ಕೋಡಿಕನ್ಯಾಣ, ಅಧ್ಯಕ್ಷರು ಕೋಡಿ ಮೀನುಗಾರರ ಸಹಕಾರಿ ಸಂಘ

ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಆದ್ದರಿಂದ ಯೋಜನೆಯಲ್ಲಿ ಒಂದಷ್ಟು ಮಾರ್ಪಾಟುಗೊಳಿಸಿ ಮೀನುಗಾರರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವ
ಚಿಂತನೆ ಇದೆ.
– ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವರು

ಯೋಜನೆಯ ಸದಸ್ಯರಿಗೆ ಸರಕಾರದ ಅನುದಾನ ಬಾಕಿ ಇದೆ. ಸುಮಾರು ಹತ್ತು ವರ್ಷಗಳಿಂದ ಜಾರಿಯಲ್ಲಿರುವ ಈ ಯೋಜನೆಯಲ್ಲಿ ಈ ಹಿಂದೆಯೂ ಕೆಲವೊಮ್ಮೆ ವಿಳಂಬವಾಗಿದೆ. ಆದರೆ ಇಷ್ಟು ದೀರ್ಘ‌ ಅವಧಿ ಹೀಗಾಗಿರುವ ಇದೇ ಮೊದಲು. ಸದಸ್ಯರು 2017-18ನೇ ಸಾಲಿನಲ್ಲಿ ಪಾವತಿಸಿದ ಉಳಿತಾಯದ ಹಣವನ್ನು ಅವರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
– ಗಣೇಶ್‌, ಉಪನಿರ್ದೇಶಕರು
ಮೀನುಗಾರಿಕೆ ಇಲಾಖೆ, ಮಂಗಳೂರು ವಲಯ

 ರಾಜೇಶ್‌ ಗಾಣಿಗ  ಅಚ್ಲಾಡಿ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.