ಮೀನುಗಾರರಿಗೆ ಗರಿಷ್ಠ ಪರಿಹಾರಕ್ಕೆ ಮನವಿ
Team Udayavani, Apr 4, 2020, 10:33 AM IST
ಉಡುಪಿ: ಕರಾವಳಿ ಕರ್ನಾಟಕದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡಿರುವ ಮೀನುಗಾರಿಕೆ ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತ ಗೊಂಡಿದ್ದು, ಮೀನುಗಾರರು ಸಂಕಷ್ಟ ಕ್ಕೀಡಾಗಿದ್ದಾರೆ. ಅವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗರಿಷ್ಠ ಪರಿಹಾರ ನೀಡಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಋತುವಿನ ಆರಂಭದಲ್ಲಿಯೇ ಜಿಎಸ್ಟಿ, ಹವಾಮಾನ ವೈಪರೀತ್ಯ ದಿಂದಾಗಿ 2 ತಿಂಗಳು ಮೀನುಗಾರಿಕೆಗೆ ಹಿನ್ನಡೆಯಾಗಿತ್ತು. ಬಳಿಕ ಮತ್ಸéಕ್ಷಾಮ ಎದುರಾಯಿತು. ಇದೀಗ ಲಾಕ್ಡೌನ್ ಮೀನುಗಾರರ ಗಾಯದ ಮೇಲೆ ಬರೆ ಎಳೆದಿದೆ. ದ.ಕ., ಉಡುಪಿ ಮತ್ತು ಉ.ಕ. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಮಂದಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೋವಿಡ್ 19 ಪರಿಣಾಮ ಮಾ. 20 ರಿಂದ ಮೀನುಗಾರಿಕೆ ಸ್ಥಗಿತವಾಗಿದೆ. ಜೂನ್ನಿಂದ ಆಗಸ್ಟ್ ವರೆಗೆ ಮೀನುಗಾರಿಕೆಗೆ ನಿಷೇಧವಿದೆ. ಈಗಿನ ಪರಿಸ್ಥಿತಿ ಮುಂದುವರಿದರೆ ಸುಮಾರು 5 ತಿಂಗಳು ಮೀನುಗಾರಿಕೆ ಸಂಪೂರ್ಣ ಸ್ತಬ್ಧವಾಗಿ ಮೀನುಗಾರರ ಬದುಕು ದುರ್ಭರವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸರಕಾರ ಕೂಡಲೇ ಪರಿಹಾರ ಕ್ರಮ ಕೈಗೊಳ್ಳದಿ ದ್ದಲ್ಲಿ ಮುಂದಿನ ಋತುವಿನ ಆರಂಭವೇ ಸಂಕಷ್ಟ ಮಯವಾದೀತು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮೀನುಗಾರರ ಎಲ್ಲ ಸಾಲಗಳಿಗೆ 5 ತಿಂಗಳ ಬಡ್ಡಿ ಮನ್ನಾ ಮಾಡುವುದಲ್ಲದೆ ಗರಿಷ್ಠ ಪರಿಹಾರವನ್ನು ಮಂಜೂರು ಮಾಡಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ