ಮೀನುಗಾರರಿಗೆ ಸರಕು ಸಾಗಾಟ ವಾಹನದಲ್ಲಿ ಸಂಚರಿಸಲು ಅವಕಾಶ ನೀಡಲು ಮನವಿ
Team Udayavani, Jul 13, 2019, 5:12 AM IST
ಉಡುಪಿ: ಕರಾವಳಿ ಕರ್ನಾಟಕದ ಮೀನುಗಾರರಿಗೆ ಸರಕು ಸಾಗಾಟದ ವಾಹನದಲ್ಲಿ ಸಂಚರಿಸಲು ಅವಕಾಶ ನೀಡಬೇಕು ಎಂದು ದ.ಕ.ಜಿಲ್ಲಾ ಮೊಗವೀರ ಮಹಾಜನ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿದೆ.
ಮಳೆಗಾಲದ ಸಮಯದಲ್ಲಿ ನಾಡ ದೋಣಿಗಳಲ್ಲಿ ದುಡಿಯುವ ಮೀನುಗಾರರು ಮೀನುಗಾರಿಕಾ ಬಲೆ ಮತ್ತು ಇತರ ಪರಿಕರಗಳೊಂದಿಗೆ ಸರಕು ಸಾಗಾಟದ ಟೆಂಪೋದಲ್ಲಿ ಬಂದರುಗಳಿಗೆ ತೆರಳುವಾಗ ಮತ್ತು ಮಹಿಳೆಯರು ಮೀನು ಮಾರಾಟಕ್ಕೆ ಸಣ್ಣ ಟೆಂಪೋದಲ್ಲಿ ಸಂಚರಿಸುವಾಗ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಮುಂಜಾನೆ ಯಾವುದೇ ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಮತ್ತು ಮೀನುಗಾರ ಮಹಿಳೆಯರಿಗೆ ಬುಟ್ಟಿಯೊಂದಿಗೆ ಬಸ್ಸುಗಳಲ್ಲಿ ಸಂಚರಿಸಲು ಅವಕಾಶ ನೀಡದ ಕಾರಣ ಸರಕು ಸಾಗಾಟದ ವಾಹನಗಳಲ್ಲಿ ಪ್ರಯಾಣಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ಈ ವಾಹನಗಳಲ್ಲಿ ಸಂಚರಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಸಮಿತಿಯ ಸದಸ್ಯರಾದ ಲೀಲಾಧರ ಪಡುಬಿದ್ರಿ, ವಿನಯ ಕರ್ಕೆರ, ರವೀಂದ್ರ ಶ್ರಿಯಾನ್, ದಾಸ ಕೋಟ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ