ಸರಕಾರ ವಿರುದ್ಧ ಹೋರಾಟಕ್ಕೆ ಮೀನುಗಾರರ ಸಜ್ಜು


Team Udayavani, Jan 3, 2019, 8:50 PM IST

fishermen-strike-3-1.jpg

ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ 7 ಮಂದಿ ಮೀನುಗಾರರು ಸಹಿತ ಬೋಟ್‌ ನಾಪತ್ತೆಯಾಗಿ ಈವರೆಗೂ ತುರ್ತು ಕ್ರಮ ಕೈಗೊಳ್ಳದ ಕೇಂದ್ರ ಹಾಗೂ ರಾಜ್ಯ ಸರಕಾರ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಜ. 6ರಂದು ಕರಾವಳಿಯ ಮೂರು ಜಿಲ್ಲೆಯ ಮೀನುಗಾರರು ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ರಾಷ್ಟ್ರೀಯ ಹೆದ್ದಾರಿ ತಡೆಗೊಳಿಸಿ ಪ್ರತಿಭಟನೆ ನಡೆಸುವ ಬಗ್ಗೆ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದ ಬೃಹತ್‌ ಸಮಾಲೋಚರ ಸಭೆಯಲ್ಲಿ ಒಕ್ಕೊರಲ ತೀರ್ಮಾನ  ಕೈಗೊಳ್ಳಲಾಗಿದೆ.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಮಾತನಾಡಿ ಮೀನುಗಾರರು ನಾಪತ್ತೆಯಾಗಿ ಈಗಾಗಲೇ 19 ದಿನ ಕಳೆದಿವೆ. ಇವರ  ಪತ್ತೆಗೆ ಗಂಭೀರ ಪ್ರಯತ್ನ ನಡೆದಿಲ್ಲ. ಜೀವವನ್ನು ಪಣಕ್ಕಿಟ್ಟು ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವವರ ರಕ್ಷಣೆ ಮುಖ್ಯ. ಮೀನುಗಾರರೆಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದರು.

ಬೋಟ್‌ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್‌ ಸುವರ್ಣ ಮಾತನಾಡಿ ಕಡಲಲ್ಲಿ ಮೀನುಗಾರರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲವಾಗಿದೆ. ಮುಂದೆ ಕಡಲಿಗಿಳಿಯಲು ಭಯವಾಗುತ್ತಿದೆ. ಮೀನುಗಾರರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಬೀದಿಗೆ ಬರುವಂತಾಗಿದೆ. 45 ಲಕ್ಷ ಜನಸಂಖ್ಯೆ ಹೊಂದಿರುವ ಮೀನುಗಾರರ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ, ಮುಂದೆ ರಾಜ್ಯ ಸರಕಾರಕ್ಕೆ ಉಳಿಗಾಲ ಇಲ್ಲದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಗುಂಡು ಬಿ. ಅಮೀನ್‌, ವಾಸುದೇವ ಬೋಳಾರ್‌, ನಿತಿನ್‌ ಕುಮಾರ್‌, ನಾಗರಾಜ್‌ ಸುವರ್ಣ, ಗುರುದಾಸ್‌ ಬಂಗೇರ, ದಾಸ ಕುಂದರ್‌, ನಿತಿನ್‌ ಕುಮಾರ್‌,  ಬಿ.ಬಿ. ಕಾಂಚನ್‌, ವಿನಯ ಕರ್ಕೇರ, ಜಯ ಸಿ. ಕೋಟ್ಯಾನ್‌, ವಿಜಯ ಬಂಗೇರ ಹೆಜಮಾಡಿ, ಪ್ರಶಾಂತ್‌ ಕುಮಾರ್‌, ಶಶಿಧರ ತಿಂಗಳಾಯ, ಕಿಶೋರ್‌ ಪಡುಕರೆ, ಚಂದ್ರಕಾಂತ್‌ ಕರ್ಕೇರ, ಹರಿಶ್ಚಂದ್ರ ಕಾಂಚನ್‌, ಮಂಜು ನೀಲಾವರ, ಬೇಬಿ ಎಚ್‌. ಸಾಲ್ಯಾನ್‌, ಜಲಜಾ ಕೋಟ್ಯಾನ್‌ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಬಂದ್‌ಗೆ ಬೆಂಬಲ
ಜ. 6ರಂದು ನಡೆಯಲಿರುವ ಹೆದ್ದಾರಿ ಬಂದ್‌ ಪ್ರತಿಭಟನೆಗೆ ಮಲ್ಪೆ ಕನ್ನಿ ಪಾರ್ಟಿ ಮೀನುಗಾರರ ಸಂಘ ಪೂರ್ಣ ಬೆಂಬಲ ಸೂಚಿಸಿದ್ದು, ಕನ್ನಿ ಮತ್ತು ಕೊಟ್ಟು ಸೇರಿದಂತೆ ಎರಡು ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಅಧ್ಯಕ್ಷ ದಾಸ ಕುಂದರ್‌ ತಿಳಿಸಿದ್ದಾರೆ. ಜತೆಗೆ ಮಲ್ಪೆ ಮಂಜುಗಡ್ಡೆ ಸ್ಥಾವರ ಮಾಲಕರ ಸಂಘದ ಮಲ್ಪೆ ಘಟಕವೂ ಬಂದ್‌ಗೆ ಬೆಂಬಲ ಸೂಚಿಸಿದೆ.

ಜ. 6ರ ಹೆದ್ದಾರಿ ತಡೆಗೆ ಬೆಂಬಲ: ಕಡ್ಡಾಯ ರಜೆ ಘೋಷಣೆ
ಕರಾವಳಿಯ ಮೀನುಗಾರಿಕಾ ಸಂಘಟನೆಗಳು ಜ.6ರಂದು ಆಯೋಜಿಸಿರುವ ರಾಷ್ಟ್ರೀಯ ಹೆದ್ದಾರಿ ತಡೆಗೆ ನಮ್ಮ ಸಂಘದ ಸಂಪೂರ್ಣ ಬೆಂಬಲವಿದೆ ಎಂದು ಉಡುಪಿ ತಾ| ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್‌.ಸಾಲ್ಯಾನ್‌ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಉಡುಪಿ ತಾಲೂಕು ಹಸಿಮೀನು ಮಾರಾಟಗಾರರ ಸಂಘ ಸೇರಿದಂತೆ ಕುಂದಾಪುರ ತಾ| ಜೈ ಕರ್ನಾಟಕ ಚಿಲ್ಲರೆ ಮೀನುವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ಅಂದು ಉಡುಪಿ ಜಿಲ್ಲೆಯ ಎಲ್ಲ ಮೀನು ಮಾರುಕಟ್ಟೆಗಳಿಗೆ ಕಡ್ಡಾಯ ರಜೆ ಘೋಷಿಸಲಾಗಿದೆ. ಅಂದು ಮೀನುಮಾರುಕಟ್ಟೆಗಳಲ್ಲಿ ವಹಿವಾಟು ನಡೆಯುವುದಿಲ್ಲ ಗ್ರಾಹಕರು ಸಹಕರಿಸಬೇಕು. ಉಡುಪಿ ಮತ್ತು ಕುಂದಾಪುರದ ಎರಡೂ ಸಂಘಟನೆಗಳ ಮಹಿಳೆಯರು ಬೆಳಗ್ಗಿನಿಂದಲೇ ಪ್ರತಿಭಟನೆಯಲ್ಲಿ ಪಾಲ್ಗೊಳ್ಲಲಿದ್ದಾರೆೆ ಎಂದು ಉಡುಪಿ ತಾಲೂಕು ಮಹಿಳಾ ಹಸಿಮೀನುಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್‌.ಸಾಲ್ಯಾನ್‌ ಮತ್ತು ಕುಂದಾಪುರ ತಾಲೂಕು ಜೈಕರ್ನಾಟಕ ಚಿಲ್ಲರೆ ಮೀನುವ್ಯಾಪಾರಸ್ಥರ ಸಂಘದ ಅಧ್ಯಕ್ಷೆ ರತ್ನ ಮೊಗವೀರ ಬೀಜಾಡಿ ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸರಕಾರದ ಚೆಲ್ಲಾಟ
ಸರಕಾರ ಹಿಂದಿನಿಂದಲೂ ಮೀನುಗಾರ ಜತೆ ಚೆಲ್ಲಾಟವಾಡುತ್ತಾ ಬಂದಿದ್ದು, ಈ ಪ್ರಕರಣದಿಂದ ಅದು ಸಾಬೀತಾಗಿದೆ. ಮೀನುಗಾರಿಕೆ ಸಚಿವರಾಗಲಿ, ಉಸ್ತುವಾರಿ ಮಂತ್ರಿಯಾಗಲಿ ಸಭೆ ಕರೆದು ಇದುವರೆಗೂ ಮೀನುಗಾರರೊಂದಿಗೆ ಚರ್ಚಿಸಿಲ್ಲ. ಜ. 6ರಂದು ನಡೆಯುವ ರಾಸ್ತಾ ರೋಕೋ ಚಳವಳಿ ಪಾಲ್ಗೊಳ್ಳುವ ಮೂಲಕ ನಮ್ಮ ಶಕ್ತಿ ಪ್ರದರ್ಶಿಸಿ ಸರಕಾರಕ್ಕೆ ಬಿಸಿ ಮುಟ್ಟಿಸಬೇಕು.
– ಯಶ್‌ಪಾಲ್‌ ಸುವರ್ಣ, ಅಧ್ಯಕ್ಷರು, ಮೀನು ಮಾರಾಟ ಫೆಡರೇಶನ್‌

ನ್ಯಾಯ ಸಿಗುವವರೆಗೆ ಹೋರಾಟ
ನಾಪತ್ತೆಯಾದ ಮೀನುಗಾರರ ಹುಡುಕಾಟದ ಎಲ್ಲ ಪ್ರಯತ್ನ ವಿಫಲವಾಗಿದೆ. ಸರಕಾರದಿಂದ ಸೂಕ್ತ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಸಮಾಲೋಚನ ಸಭೆ ನಡೆಸಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗಿದೆ. ಉಪ್ಪಳದಿಂದ ಕಾರವಾರದವರೆಗೆ ಸಂಪೂರ್ಣವಾಗಿ ಮೀನುಗಾರಿಕೆ ಸ್ಥಗಿತಗೊಳಿಸಿ ರಾಷ್ಟ್ರೀಯ ಹೆದ್ದಾರಿ ತಡೆ ಮೂಲಕ ಪ್ರತಿಭಟನೆ ಕೈಗೊಂಡು ನಮ್ಮ ಬಲ ಪ್ರದರ್ಶಿಸಬೇಕು.  
– ಕಿಶೋರ್‌ ಡಿ. ಸುವರ್ಣ, ಮಲ್ಪೆ ಡೀಪ್‌ ಸೀ ಟ್ರಾಲ್‌ ಬೋಟ್‌ ಅಸೋಸಿಯೇಶನ್‌ ಅಧ್ಯಕ್ಷ

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.